ಕಾಯಕಲ್ಪದ ನಿರೀಕ್ಷೆಯಲ್ಲಿ ಕೋಟ್ಯಂತರ ರೂ. ವ್ಯವಹಾರದ ‘ಬಂದರು’!

ಮೂಲ ಸೌಕರ್ಯವಿಲ್ಲದೆ ಸಂಕಷ್ಟ

Team Udayavani, Apr 13, 2022, 11:22 AM IST

port

ಬಂದರು: ಕಿರಿದಾದ ರಸ್ತೆ..ಹಲವು ದಶಕದ ಹಿಂದಿನ ಕಟ್ಟಡಗಳು..ಕಾರ್ಮಿಕರು-ಗ್ರಾಹಕರ ಓಡಾಟ.. ಲಾರಿ ಸಹಿತ ಇತರ ವಾಹನಗಳ ನಿತ್ಯ ದಟ್ಟಣೆ..ರಸ್ತೆ ಬದಿಯಲ್ಲಿಯೇ ವ್ಯಾಪಾರ..ಕೋಟ್ಯಾಂತರ ರೂ ವಹಿವಾಟು!

ಮಂಗಳೂರಿನ ಸ್ಟೇಟ್‌ಬ್ಯಾಂಕ್‌ ಸನಿಹದ ಸರಿಸುಮಾರು 4 ಕಿ.ಮೀ. ಪರಿಧಿಯ ವಾಣಿಜ್ಯ ಚಟುವಟಿಕೆಯ ಬಹುಮುಖ್ಯ ಕೇಂದ್ರ ಬಂದರು ಪ್ರದೇಶ ಇದೀಗ ಅಭಿವೃದ್ಧಿಯ ಮಹಾ ನಿರೀಕ್ಷೆಯಲ್ಲಿದೆ. ನೂರಾರು ವಾಣಿಜ್ಯ ಕೇಂದ್ರ ಗಳ ಪ್ರಮುಖ ತಾಣವಾಗಿರುವ ಬಂದರು ಪ್ರದೇಶ ದಲ್ಲಿ ಮೂಲ ವ್ಯವಸ್ಥೆಗಳೇ ಇಲ್ಲದೆ ಸ್ಥಳೀಯ ವ್ಯಾಪಾರಿಗಳ ಸಂಕಟ ಹೇಳತೀರ ದಾಗಿದೆ. ಸರಕಾರಕ್ಕೆ ಅತೀ ಹೆಚ್ಚು ಆದಾಯ ಕೊಡುವ ಪ್ರದೇಶವಾದ ಬಂದರು ಭಾಗದ ಅಭಿವೃದ್ಧಿ ನಿಟ್ಟಿನಲ್ಲಿ ಮಹತ್ವದ ಕಾರ್ಯವನ್ನು ದ.ಕ. ಜಿಲ್ಲಾಡಳಿತ, ಮಂಗಳೂರು ಪಾಲಿಕೆ ನಡೆಸಬೇಕಿದೆ ಎಂಬುದು ಸ್ಥಳೀಯರ ಅಭಿಪ್ರಾಯ.

ಬಂದರು ಪ್ರದೇಶವೆಂದರೆ “ಇಕ್ಕಟ್ಟಾದ ಪ್ರದೇಶ’’ ಎಂಬ ಸಾರ್ವತ್ರಿಕ ಮಾತಿದೆ. ಹೀಗಾಗಿ ಇಲ್ಲಿ ವಾಹನ ಚಲಾಯಿಸುವುದು ಕೂಡ ಅಷ್ಟೇ ಕಷ್ಟ. ಕಿರಿದಾದ ರಸ್ತೆಯಲ್ಲಿ ‘ಬ್ಲಾಕ್‌’ ಸಾಮಾನ್ಯ. ಜತೆಗೆ ರಸ್ತೆಯಲ್ಲೇ ಲೋಡಿಂಗ್‌-ಅನ್‌ಲೋಡಿಂಗ್‌, ವ್ಯಾಪಾರ ವಹಿವಾಟು ನಡೆದು ಸಮಸ್ಯೆ ಉಲ್ಬಣವಾಗುತ್ತಲೇ ಇದೆ. ಅಂದಹಾಗೆ, ಪಾರ್ಕಿಂಗ್‌ ಜಾಗ ಎಂಬುದು ಇಲ್ಲಿ ಇಲ್ಲವೇ ಇಲ್ಲ!

ಲೋವರ್‌ ಬಂದರ್‌ ಪ್ರದೇಶದ ಕೆಲವು ವ್ಯಾಪ್ತಿಗೆ ಕೆಲವು ತಿಂಗಳಿನಿಂದ ಕುಡಿಯುವ ನೀರೇ ಬರುತ್ತಿಲ್ಲ. ಅಂಗಡಿಯವರು ನೀರಿನ ವ್ಯವಸ್ಥೆಯನ್ನು ಪರ್ಯಾಯವಾಗಿ ಮಾಡಿ ಕೊಂಡಿದ್ದಾರೆ.

ಸ್ಥಳೀಯ ವ್ಯಾಪಾರಸ್ಥರೊಬ್ಬರು ‘ಸುದಿನ’ ಜತೆಗೆ ಮಾತನಾಡಿ, ಕೋಟ್ಯಾಂತರ ರೂ. ವ್ಯವಹಾರ ನಡೆಸುವ ಬಂದರು ಪ್ರದೇಶದಲ್ಲಿ ಕಿರಿದಾದ ರಸ್ತೆಯಿಂದ ಎಲ್ಲವೂ ಇಕ್ಕಟ್ಟಿನ ಪರಿಸ್ಥಿತಿ. ರಸ್ತೆಯೊಂದನ್ನು ಅಗೆದು 6 ತಿಂಗಳುಗಳು ಕಳೆದರೂ ಅದನ್ನು ಮುಚ್ಚದೆ ಧೂಳು ತುಂಬಿದ್ದು, ಹೊಂಡಗುಂಡಿಗಳಿಂದ ಕೂಡಿದೆ. ಜನರು ಕೊರೊನಾ ಬದಲಿಗೆ ಧೂಳಿನ ಕಾರಣದಿಂದ ಮಾಸ್ಕ್ ಹಾಕುವ ಪರಿಸ್ಥಿತಿಯಿದೆ. ರಸ್ತೆ ಮಧ್ಯೆಯೇ ವಿದ್ಯುತ್‌ ಕಂಬ ಇದ್ದರೂ ಅದನ್ನು ತೆರವು ಮಾಡುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ರಸ್ತೆಯಲ್ಲಿಯೇ ವ್ಯಾಪಾರ ನಡೆಸುವ ಪರಿಣಾಮ ಇಲ್ಲಿ ವಾಹನಗಳು ಕ್ಯೂ ನಿಲ್ಲುವ ಪರಿಸ್ಥಿತಿ ಇದೆ. ಸುದೀರ್ಘ‌ ವರ್ಷದ ಈ ಸಮಸ್ಯೆಗೆ ಇನ್ನೂ ಪರಿಹಾರವೇ ದೊರಕಿಲ್ಲ; ವ್ಯಾಪಾರಿಗಳ ನೋವು ಇಲ್ಲಿ ಕೇಳುವವರೇ ಇಲ್ಲ ಎನ್ನುತ್ತಾರೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ಸದ್ಯ ಬಂದರು ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ದೊರೆತಿದೆ. ಇಲ್ಲಿನ ಚರಂಡಿ, ಒಳಚರಂಡಿ, ರಸ್ತೆ ಹೀಗೆ ಎಲ್ಲ ವಿಧದ ಅಭಿವೃದ್ಧಿ ಚಟುವಟಿಕೆ ನಡೆಯುತ್ತಿದೆ. ಆದರೆ ಇಕ್ಕಟ್ಟಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.

ಒಂದೊಂದು ರಸ್ತೆಯಲ್ಲಿ ಹತ್ತಾರು ಸಮಸ್ಯೆ!

ಬಂದರು ಪ್ರದೇಶವು ಅತ್ಯಂತ ಹೆಚ್ಚು ವಾಣಿಜ್ಯ ಚಟುವಟಿಕೆಯ ತಾಣ. ಮಂಗಳೂರು ಆಸುಪಾಸು ಸಹಿತ ಕಾಸರಗೋಡು, ಕಲ್ಲಿ ಕೋಟೆ, ಕಣ್ಣೂರು ಭಾಗಕ್ಕೆ ಆಹಾರ ಉತ್ಪನ್ನ, ಹಾರ್ಡ್‌ವೇರ್‌, ಕೃಷಿ ಉತ್ಪನ್ನಗಳ ಪ್ರಮುಖ ವ್ಯಾಪಾರ ಕೇಂದ್ರ. ಸುಮಾರು 4 ಕಿ.ಮೀ. ಆಸುಪಾಸಿನಲ್ಲಿ ಎಲ್ಲ ಉತ್ಪನ್ನಗಳ ವ್ಯಾಪಾರ, ಗೋದಾಮು ಇದೆ. ಸ್ಥಳೀಯ ಮಾತ್ರವಲ್ಲದೆ ವಿದೇಶಿ ವ್ಯಾಪಾರವೂ ಇಲ್ಲಿದೆ. ಆಹಾರ ಉತ್ಪನ್ನ, ಹಾರ್ಡ್‌ವೇರ್‌, ಅಡಿಕೆ, ಕೃಷಿ ಉತ್ಪನ್ನ, ಒಣಹುಲ್ಲುಗಳು ಹೀಗೆ ಹಲವು ಬಗೆಯ ಉತ್ಪನ್ನಗಳು ಒಂದೊಂದು ಭಾಗದಲ್ಲಿವೆ. ಸಗಟು ವ್ಯಾಪಾರಿಗಳು ಅಧಿಕವಿದ್ದಾರೆ. ಬಂದರು ಭಾಗದಲ್ಲಿ ಪ್ರಮುಖ 4 ರಸ್ತೆಗಳಿವೆ. ಒಂದೊಂದು ರಸ್ತೆಯಲ್ಲಿ ನೂರೊಂದು ವಿಶೇಷತೆಗಳಿವೆ ಹಾಗೂ ಹತ್ತಾರು ಸಮಸ್ಯೆ-ಸವಾಲುಗಳಿವೆ!

ಬಂದರು ಅಭಿವೃದ್ದಿಗೆ ವಿಸ್ತೃತ ಯೋಜನೆ ಅಗತ್ಯ

ಬಂದರು ಪ್ರದೇಶ ನಿತ್ಯ ವಾಣಿಜ್ಯ ಚಟುವಟಿಕೆಯ ಮುಖ್ಯ ಸ್ಥಳ. ಕೋಟ್ಯಾಂತರ ರೂ. ವ್ಯವಹಾರ ನಡೆಯುವ ಪ್ರದೇಶ. ಆದರೆ ಇಲ್ಲಿ ಮೂಲ ಸೌಕರ್ಯಗಳು ಪರಿಣಾಮಕಾರಿ ರೀತಿಯಲ್ಲಿ ದೊರೆಯಬೇಕಿದೆ. ಸ್ಥಳೀಯ ವ್ಯಾಪಾರ ಚಟುವಟಿಕೆಗೆ ಅನುಕೂಲ ಮಾಡುವ ವ್ಯವಸ್ಥೆ ಕಲ್ಪಿಸಬೇಕಿದೆ. ಸದ್ಯ ಸ್ಮಾರ್ಟ್‌ಸಿಟಿಯಡಿ ಕಾಮಗಾರಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ವಿಸ್ತೃತ ಯೋಜನೆ ರೂಪಿಸುವ ಆವಶ್ಯಕತೆಯಿದೆ. ಶಶಿಧರ ಪೈ ಮಾರೂರು, ಅಧ್ಯಕ್ಷರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.