ರಾಷ್ಟ್ರೀಯ ಸಂಸ್ಥೆಗಳ ಖಾಸಗೀಕರಣವೇ ಪ್ರಧಾನಿ ಮೋದಿ ಸಾಧನೆ: ರಮಾನಾಥ ರೈ
Team Udayavani, Jun 5, 2020, 11:18 AM IST
ಮಂಗಳೂರು: ಕೋಟ್ಯಂತರ ಉದ್ಯೋಗ ಸೃಷ್ಟಿಸಿ ರಾಷ್ಟ್ರೀಯ ಆಸ್ತಿಯಾಗಿದ್ದ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿರುವುದೇ ಎರಡನೇ ಅವಧಿಗೆ ಮೋದಿ ಸರಕಾರದ ಬಹುದೊಡ್ಡ ಸಾಧನೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಖಾಸಗಿ ಮೊಬೈಲ್ ಕಂಪೆನಿ ಹಿತಾಸಕ್ತಿ ಕಾಪಾಡಲು ಬಿಎಸ್ಸೆನ್ನೆಲ್ ಸಂಸ್ಥೆಯನ್ನು ಮುಚ್ಚಿಸಿ, ಲಕ್ಷಾಂತರ ಉದ್ಯೋಗಿಗಳು ಬೀದಿಗೆ ಬರುವಂತೆ ಮಾಡಲಾಗಿದೆ. ವಿಮಾನ ನಿಲ್ದಾಣ, ಬಂದರು ಖಾಸಗೀಕರಣ ಮಾಡಿದ್ದು, ಕಲ್ಲಿದ್ದಲು ಗಣಿ, ನಿಗಮಗಳು, ವಿದ್ಯುತ್ ಕಂಪೆನಿಗಳನ್ನು ಕೂಡ ಖಾಸಗೀಕರಣ ಮಾಡಲು ಹೊರಟಿರುವುದು ಮೋದಿ ಸರಕಾರದ ಸಾಧನೆ ಎಂದು ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ವ್ಯಂಗ್ಯವಾಡಿದರು. ಜಿಡಿಪಿ ಪಾತಾಳಕ್ಕೆ ಕುಸಿದಿದ್ದು, ಕೋವಿಡ್ ಕಾರಣ ಎನ್ನಲಾಗುತ್ತಿದೆ. ಕೋವಿಡ್ ದಿಂದ ಜಿಡಿಪಿ ಕುಸಿಯುವುದಾದರೆ ಅಮೆರಿಕದಲ್ಲಿ ಡಾಲರ್ ಮೌಲ್ಯ ಕುಸಿಯಬೇಕಿತ್ತು. ಆದರೆ ಅಲ್ಲಿ ಕರೆನ್ಸಿ ಮೌಲ್ಯ ಕುಸಿದಿಲ್ಲ ಎಂದರು.
ಮೆಸ್ಕಾಂ ಮೇಲೆ ಹಿಡಿತವಿಲ್ಲವೇ?
ವಿದ್ಯುತ್ ಬಿಲ್ ಕಡಿಮೆ ಮಾಡಲು ಸಿಎಂ ಹೇಳಿದರೂ ಮೆಸ್ಕಾಂ ಒಪ್ಪುತ್ತಿಲ್ಲ, ಸಿಎಂಗೆ ಮೆಸ್ಕಾಂ ಮೇಲೆ ಹಿಡಿತವಿಲ್ಲವೇ ಎಂದು ರೈ ಪ್ರಶ್ನಿಸಿದರು. ಕಾಂಗ್ರೆಸ್ ಮುಖಂಡರಾದ ಶಾಹುಲ್ ಹಮೀದ್, ಕೋಡಿಜಾಲ್ ಇಬ್ರಾಹಿಂ, ಅಬ್ದುಲ್ ರವೂಫ್, ಅಪ್ಪಿ, ನವೀನ್ ಡಿ’ಸೋಜಾ, ಶಾಲೆಟ್ ಪಿಂಟೋ, ಶುಭೋದಯ ಆಳ್ವ, ಡಿ.ಕೆ. ಅಶೋಕ್ ಉಪಸ್ಥಿತರಿದ್ದರು.
ಹೆದ್ದಾರಿ ಯೋಜನೆ ಕುಂಠಿತ
ಬಿ.ಸಿ. ರೋಡ್ನಿಂದ ಅಡ್ಡಹೊಳೆ ತನಕದ ಚತುಷ್ಪಥ ಯೋಜನೆಯಿಂದ ಗುತ್ತಿಗೆದಾರ ಎಲ್ ಆ್ಯಂಡ್ ಟಿ ಕಂಪೆನಿ ಬಿಟ್ಟು ಹೋಗಿದೆ. ಮಂಗಳೂರು- ಮೂಡುಬಿದಿರೆ ಚತುಷ್ಪಥ ಯೋಜನೆ ಪ್ರಗತಿಯಾಗಿಲ್ಲ. ರಾಜ್ಯ ಎಂಜಿನಿಯರಿಂಗ್ ಇಲಾಖೆಯಡಿ ಕಾರ್ಯಾಚರಿಸುವ ರಾ.ಹೆ. ಇಲಾಖೆಯಿಂದ ಹೆದ್ದಾರಿ ಕಾಮಗಾರಿ ನಡೆದಿದ್ದು, ಅದು ತನ್ನ ಸಾಧನೆ ಎಂದು ಸಂಸದರು ಬೋರ್ಡ್ ಹಾಕಿದ್ದಾರೆ. ಜಿಲ್ಲೆಯ ಮೂರು ಬ್ಯಾಂಕ್ಗಳನ್ನು ನಾಮಾವಶೇಷ ಮಾಡಲಾಯಿತು ಎಂದು ರಮಾನಾಥ ರೈ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ