ಸಮಸ್ಯೆ ನಡುವೆ ಪುರಸಭೆ ಮಾರುಕಟ್ಟೆ

ಮೂಡುಬಿದಿರೆ: ತರಕಾರಿ ಮಾರುಕಟ್ಟೆಗೆ ಶೌಚಾಲಯವಿಲ್ಲ

Team Udayavani, Oct 20, 2022, 11:18 AM IST

8

ಮೂಡುಬಿದಿರೆ: ಪೇಟೆಯಿಂದ ತಾತ್ಕಾಲಿಕವಾಗಿ ಸ್ವರಾಜ್ಯ ಮೈದಾನಕ್ಕೆ ಸ್ಥಳಂತರಗೊಂಡು ಇದೇ ನವೆಂಬರ್‌ಗೆ ಪಂಚವಾರ್ಷಿಕ ಹಬ್ಬವನ್ನೇ ಆಚರಿಸಲಿರುವ ಪುರಸಭೆ ದಿನವಹಿ ಮಾರುಕಟ್ಟೆ ಎದುರಿಸುತ್ತಿರುವ ಸಮಸ್ಯೆಗಳು ಹಲವಾರು.

ತರಕಾರಿ ಮಾರುಕಟ್ಟೆಗೆ ಶೌಚಾಲಯವಿಲ್ಲ

ತರಕಾರಿ, ಒಣಮೀನು ಮಾರು ಕಟ್ಟೆ ಮತ್ತು ಇತರ ಅಂಗಡಿಗಳ ವ್ಯಾಪಾ ರಸ್ಥರಿಗೆ ಸೂಕ್ತ ಶೌಚಾಲಯವಿಲ್ಲ. ರಿಂಗ್‌ ರೋಡ್‌ ದಾಟಿ ಮೀನು ಮಾರುಕಟ್ಟೆ ಯಿರುವಲ್ಲಿ ಕಟ್ಟಿರುವ ಶೌಚಾಲಯದತ್ತ ಹೋಗುವುದು ಬಹಳ ತ್ರಾಸದಾಯಕ. ಇದೇ ರೀತಿ ರಿಂಗ್‌ ರೋಡ್‌ ಬದಿಯ ಇನ್ನೊಂದು ಮೂಲೆಯಲ್ಲಿ ಬಿಎಸ್‌ಎನ್‌ ಎಲ್‌ ಟವರ್‌ ಇರುವಲ್ಲಿ ಹೊಸದಾಗಿ ಕಟ್ಟಲಾಗುತ್ತಿರುವ ಶೌಚಾಲಯದತ್ತ ಸಾಗುವುದೂ ತ್ರಾಸದಾಯಕ.

ವಾರದ ಸಂತೆ ಇರುವ ಶುಕ್ರವಾರ ವಂತೂ ಇಡೀ ಮಾರುಕಟ್ಟೆ ಜನರಿಂದ ಗಿಜಿಗುಡುತ್ತ ಇರುತ್ತದೆ. ಊರ ಪರವೂರ ವ್ಯಾಪಾರಿಗಳು, ಗ್ರಾಹಕರು ದಟ್ಟೈಸುವ ದಿನವದು. ಆಗ, ಶೌಚಾಲಯ ಎಲ್ಲಿ ಎಂದರೆ ರಿಂಗ್‌ ರೋಡ್‌ ದಾಟಿ ಹೋಗಬೇಕಾಗುತ್ತದೆ. ಇದು ಅಸಮರ್ಪಕ ವ್ಯವಸ್ಥೆ. ಇನ್ನೊಂದೆಡೆ, ತರಕಾರಿ, ಒಣಮೀನು ಮಾರುಕಟ್ಟೆ, ಇತರ ಅಂಗಡಿಯವರಿಗೆ ಪ್ರತ್ಯೇಕವಾದ ಶೌಚಾಲಯವಿಲ್ಲದೆ ತುರ್ತಾಗಿ ಸಮಸ್ಯೆ ನೀಗಿಸಿಕೊಳ್ಳಲು ಮಾರುಕಟ್ಟೆಯ ಪಶ್ಚಿಮ ಭಾಗ ಸ್ಟಾಲುಗಳ ಹಿಂಭಾಗಕ್ಕೆ ಜನರು ಹೋಗುವುದು ಅನಿವಾರ್ಯ – ಅಲ್ಲಿ ಮರೆ ಮಾಚುವ ಆವರಣವಿಲ್ಲದಿದ್ದರೂ. ಹಾಗಾಗಿ, ಈ ಭಾಗದಲ್ಲಿ ಎಲ್ಲದರೂ ಒಂದೆಡೆ ಸರಳ, ವ್ಯವಸ್ಥಿತ ಶೌಚಾಲಯ ನಿರ್ಮಿಸಲೇಬೇಕಾಗಿದೆ.

ಮಾರುಕಟ್ಟೆ ಒಳಾಂಗಣ ಸಮತಟ್ಟಾಗಿಲ್ಲ. ಅಲ್ಲಲ್ಲಿ ಮಳೆ ನೀರು ನಿಂತಾಗ, ವಾರದ ಸಂತೆಯ ಸಂದರ್ಭ ಅಲ್ಲೊಂದು ಕೆಸರುಗದ್ದೆಯೇ ನಿರ್ಮಾಣವಾಗುತ್ತದೆ. ಒಂದಿಷ್ಟು ಸಮತಟ್ಟು ಮಾಡುವ ಪ್ರಯತ್ನ ನಡೆದಿದ್ದರೂ ಸಾಲದು. ಮಳೆ ನೀರು ನಿಲ್ಲದೆ ಸರಾಗವಾಗಿ ಇಳಿಜಾರಿನಲ್ಲಿ ಹರಿದು ಹೋಗುವಂತೆ ಮಾಡಬೇಕಾಗಿದೆ.

ಮಾರುಕಟ್ಟೆಗೆ ಆವರಣ ಗೋಡೆ, ತಡೆಬೇಲಿ ವ್ಯವಸ್ಥೆ ಇಲ್ಲ. ಹಾಗಾಗಿ ಜನರ ಜತೆಗೆ ಜಾನುವಾರುಗಳೂ ಅಡ್ಡಾಡು ವುದು ಸಹಜವಾಗಿ ಗೋಚರಿಸುತ್ತದೆ. ವ್ಯಾಪಾರಿಗಳು ತರಕಾರಿ ರಾಶಿಗೆ ಹಾಕಿದ ಪರದೆ, ಹೊದಿಕೆಯನ್ನು ಎಳೆದು ತರಕಾರಿ, ಸಾಮಗ್ರಿ ಸ್ವಾಹಾ ಮಾಡು ವುದೂ ಇದೆ. ಮಾರುಕಟ್ಟೆಗೆ ಪಹರೆ ವ್ಯವಸ್ಥೆ ಇದೆಯೋ ಎಂಬ ಸಂದೇಹವಿದೆ. ಏಕೆಂದರೆ ಹಲವರ ಈರುಳ್ಳಿ, ಇತರ ತರಕಾರಿ ಗೋಣಿ ಚೀಲಗಳನ್ನು ಯಾರೋ ಹೊತ್ತೂಯ್ಯುವ ಪ್ರಕರಣ ಗಳ ಬಗ್ಗೆ ವ್ಯಾಪಾರಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಟವರ್‌ ಭೀತಿ

ಹತ್ತಿರದಲ್ಲಿಯೇ ಇರುವ ಬಿಎಸ್‌ ಎನ್‌ಎಲ್‌ಟವರ್‌ ಸುಸ್ಥಿತಿಯಲ್ಲಿರುವ ಬಗ್ಗೆ ಸಂತೆಯೊಳಗಿನ ಮಂದಿಗೆ ಸಂಶಯ ವಿದೆ. ಅದು ಯಾವಾಗಲಾದರೂ ತಮ್ಮ ಮೇಲೆ ಬಿದ್ದರೆ ಎಂಬ ಭೀತಿ ಕಾಡುತ್ತಿದೆ ಅವರದ್ದು (ಇದು ಪುರಸಭೆಗೆ ಸಂಬಂಧಿಸಿದ್ದಿಲ್ಲದಿರಬಹುದು)

ಕೊಳಚೆ ನೀರು ಮಾರ್ಗದಲ್ಲಿ

ಮಾರುಕಟ್ಟೆಯ ವಾಯುವ್ಯ ಭಾಗದಲ್ಲಿ ರಾಶಿ ಹಾಕಲಾಗಿರುವ ಗುಜರಿ ಸಾಮಾನಿನ ರಾಶಿಯಡಿ ಯಿಂದ ಜೋರಾಗಿ ಮಳೆ ಸುರಿದಾಗ ದುರ್ವಾಸನೆ ಸಹಿತ ತ್ಯಾಜ್ಯ ಕಲ್ಮಶ ನೀರು ಹೊರಸೂಸುತ್ತಲೇ ಇರುತ್ತದೆ. ಅದರ ಮೇಲೆ ವಾಹನಗಳು ಓಡಾಡುವಾಗ ನಡೆದುಕೊಂಡು ಹೋಗುವವರಿಗೆ ತ್ಯಾಜ್ಯ ನೀರಿನ ಸೇಚನವಾಗುವುದನ್ನು ಗಮನಿಸಿ ಸೂಕ್ತ ಕ್ರಮ ಜರಗಿಸಬೇಕಾಗಿದೆ.

ಸೂಕ್ತ ಕ್ರಮ: ರಿಂಗ್‌ರೋಡಿನ ಪೂರ್ವದಲ್ಲಿ ಹಸಿಮೀನು, ಮಾಂಸದ ಮಳಿಗೆಗಳ ಪಕ್ಕ ಶೌಚಾಲಯವಿದೆ. ಸುಸಜ್ಜಿತ ಶೌಚಾಲಯವನ್ನು ರಿಂಗ್‌ ರೋಡಿನ ಆಚೆ ಬದಿಯಲ್ಲಿ ನಿರ್ಮಿಸಲಾಗುತ್ತಿದೆ. ಹಾಗಿದ್ದರೂ ತರಕಾರಿ, ಒಣಮೀನು ಮಾರುಕಟ್ಟೆಯ ವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸೂಕ್ತ ಕ್ರಮ ಜರಗಿಸಲಾಗುವುದು. -ಪ್ರಸಾದ್‌ ಕುಮಾರ್‌, ಅಧ್ಯಕ್ಷರು, ಮೂಡುಬಿದಿರೆ ಪುರಸಭೆ

-ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.