ನಗರಗಳಲ್ಲಿ ಐಟಿ ಉದ್ಯಮ ಸ್ಥಾಪನೆಗೆ ಉತ್ತೇಜನ

ಕಿಯೋನಿಕ್ಸ್‌ ನೂತನ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ

Team Udayavani, Jun 14, 2020, 5:17 AM IST

ನಗರಗಳಲ್ಲಿ ಐಟಿ ಉದ್ಯಮ ಸ್ಥಾಪನೆಗೆ ಉತ್ತೇಜನ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಐಟಿ ಉದ್ಯಮಗಳ ಸ್ಥಾಪನೆಗೆ ಪೂರಕ ವಾತಾವರಣ ಕಲ್ಪಿಸಿ ಹೆಚ್ಚು ಉದ್ಯೋಗಾವಕಾಶಗಳ ಸೃಷ್ಟಿಗೆ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್‌) ಹೊಂದಿರುವ ಅವಕಾಶಗಳನ್ನು ಬಳಸಿಕೊಳ್ಳಲಾಗುವುದು ಎಂದು ರಾಜ್ಯ ಕಿಯೋನಿಕ್ಸ್‌ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹರಿಕೃಷ್ಣ ಬಂಟ್ವಾಳ ಹೇಳಿದ್ದಾರೆ.

ಕಿಯೊನಿಕ್ಸ್‌ ಅಧ್ಯಕ್ಷರಾದ ಬಳಿಕ ಉದಯವಾಣಿ ಜತೆ ಮಾತನಾಡಿದ ಅವರು, ರಾಜ್ಯ ಸರಕಾರ ನನಗೆ ಈ ಅವಕಾಶ ನೀಡಿದ್ದು, ಮುಂದಿನ ವಾರ ಅಧಿಕಾರ ಸ್ವೀಕರಿಸಲಿದ್ದೇನೆ. ಕಿಯೋನಿಕ್ಸ್‌ ಹೊಂದಿರುವ ಅಧಿಕಾರ, ಅವಕಾಶಗಳ ಬಗ್ಗೆ ಸಮಗ್ರ ವಿವರ, ಮಾಹಿತಿ ಪಡೆದುಕೊಂಡು ಮುಂದಿನ ಯೋಜನೆಗಳ ಬಗ್ಗೆ ರೂಪರೇಖೆ ತಯಾರಿಸಲಾಗುವುದು ಎಂದರು.

ಉದ್ಯೋಗ ಸೃಷ್ಟಿಗೆ ಒತ್ತು
ಸಾವಿರಾರು ಯುವಕ- ಯುವತಿ ಯರು ಉದ್ಯೋಗಕ್ಕಾಗಿ ಹೊರ ಜಿಲ್ಲೆ/ರಾಜ್ಯ/ ಹೊರದೇಶಗಳಿಗೆ ತೆರಳುತ್ತಿದ್ದಾರೆ. ಅವರು ಇರುವ ಪ್ರದೇಶಗಳಲ್ಲೇ ದುಡಿಯುವ ಸಂಸ್ಕೃತಿ ಉದ್ದೀಪನಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬೇಕು. ಐಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳಿದ್ದು, ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

2ನೇಐಟಿ ಹಬ್‌ ಪ್ರಸ್ತಾವನೆ
ರಾಜ್ಯದಲ್ಲಿ 2ನೇ ಮತ್ತು 3ನೇ ಹಂತದ ನಗರಗಳನ್ನು ಉದ್ಯಮ ಕ್ಷೇತ್ರದಲ್ಲಿ ಬೆಳೆಸುವ ಪ್ರಸ್ತಾವನೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಮಂಗಳೂರನ್ನು ರಾಜ್ಯದ 2ನೇ ಐಟಿ ಹಬ್‌ ಆಗಿ ಬೆಳೆಸುವ ಪ್ರಸ್ತಾವನೆ ಕಳೆದ ಕೆಲವು ವರ್ಷಗಳಿಂದ ಇದ್ದರೂ ಸಾಕಾರಗೊಂಡಿಲ್ಲ. ಪ್ರಸ್ತುತ ಸಂಸದ ನಳಿನ್‌ ಕುಮಾರ್‌ ಕಟೀಲು ಮತ್ತು ಶಾಸಕರು ಸರಕಾರದ ಮಟ್ಟದಲ್ಲಿ ಪೂರಕ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಕಿಯೋನಿಕ್ಸ್‌ ಕೂಡ ಪೂರಕವಾಗಿ ಸ್ಪಂದಿಸಲಿದೆ ಎಂದು ತಿಳಿಸಿದರು.

ದೇರೆಬೈಲ್‌ನಲ್ಲಿ ಐಟಿ ಹಬ್‌ ?
ಮಂಗಳೂರಿನ ದೇರೆಬೈಲ್‌ನಲ್ಲಿ ಕಿಯೋನಿಕ್ಸ್‌ಗೆ ಸೇರಿದ 4 ಎಕ್ರೆಗೂ ಹೆಚ್ಚು ಜಾಗ ಇದ್ದು, ಅದನ್ನು ಐಟಿ ಹಬ್‌ ಆಗಿ ಅಭಿವೃದ್ಧಿ ಪಡಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಐಟಿ ಕ್ಷೇತ್ರದ ಪ್ರಮುಖರು, ಸಂಸದರು, ಜಿಲ್ಲೆಯ ಶಾಸಕರ ಜತೆ ಚರ್ಚಿಸುತ್ತೇನೆ ಎಂದು ಹರಿಕೃಷ್ಣ ಹೇಳಿದ್ದಾರೆ.

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.