ಉಳ್ಳಾಲ ಸೇತುವೆಗೆ ರಕ್ಷಣ ಬೇಲಿ ಕಾಮಗಾರಿ: 3 ತಿಂಗಳುಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ
Team Udayavani, Jul 25, 2020, 3:13 PM IST
ಉಳ್ಳಾಲ ಸೇತುವೆಗೆ ರಕ್ಷಣ ಬೇಲಿ ಅಳವಡಿಸುತ್ತಿರುವುದು.
ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತ ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ನಗರಾ ಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸೇತುವೆ ಯುದ್ದಕ್ಕೂ ರಕ್ಷಣ ಬೇಲಿ ಅಳವಡಿಸುವ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಸೇತುವೆ 800 ಮೀ. ಉದ್ದವಿದೆ. ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಹೋಗುವ ಹಾಗೂ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬರುವ ಎರಡು ಸೇತುವೆಗಳಿದ್ದು, ಈ ಎರಡೂ ಸೇತುವೆ ಗಳಿಗೆ ಎರಡೂ ಬದಿ ರಕ್ಷಣ ಬೇಲಿಯನ್ನು ಅಳವಡಿಸಲಾಗುತ್ತಿದೆ.
ಜುಲೈ 4ರಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ರಕ್ಷಣ ಬೇಲಿ ನಿರ್ಮಾ ಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಇದೀಗ, ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಹೋಗುವ ಹೆದ್ದಾರಿಯ ಸೇತುವೆ ಎಡ ಬದಿಯಲ್ಲಿ ಸುಮಾರು ಮುಕ್ಕಾಲು ಭಾಗ ದವರೆಗಿನ ಕಾಮಗಾರಿ ಪೂರ್ತಿಗೊಂಡಿದೆ.
5 ಅಡಿ ಎತ್ತರ ರಕ್ಷಣ ಬೇಲಿಯು 5 ಅಡಿ ಎತ್ತರವಿದ್ದು, ಅದರ ಮೇಲ್ಗಡೆ 1 ಅಡಿಯಷ್ಟು ಮುಳ್ಳು ತಂತಿ ಇದೆ. ಕಬ್ಬಿಣದ ಬೇಲಿಯನ್ನು ವರ್ಕ್ ಶಾಪ್ನಲ್ಲಿ ತಯಾರಿಸಿ ಬಳಿಕ ಸೇತುವೆಯ ಬಳಿಗೆ ಸಾಗಿಸಿ, ಕಬ್ಬಿಣದ ಸರಳುಗಳನ್ನು ಉಪಯೋಗಿಸಿ ಸೇತುವೆಗೆ ವೆಲ್ಡಿಂಗ್ ಮಾಡಿ ಜೋಡಿಸಲಾಗುತ್ತದೆ. ಬೇಲಿಯ ಮೇಲ್ಗಡೆಯೂ ಹತ್ತಲು ಸಾಧ್ಯವಾಗದಂತೆ ಮೇಲ್ಭಾಗಕ್ಕೂ ನಾಲ್ಕು ಸಾಲು ಮುಳ್ಳು ತಂತಿಯನ್ನು ರಸ್ತೆಯ ಭಾಗಕ್ಕೆ ಬಗ್ಗಿಸಿ ಜೋಡಣೆ ಮಾಡಲಾಗುತ್ತಿದೆ.
ಈ ಸೇತುವೆಗೆ ರಕ್ಷಣ ಬೇಲಿ ನಿರ್ಮಿಸಬೇಕೆನ್ನುವುದು ಬಹುಕಾಲದ ಬೇಡಿಕೆಯಾಗಿತ್ತು. 2019ರ ಜುಲೈ 29ರಂದು ಕೆಫೆ ಕಾಫಿ ಡೇ ಸಂಸ್ಥೆಯ ಸ್ಥಾಪಕ ವಿ.ಜಿ. ಸಿದ್ದಾರ್ಥ ಅವರು ಈ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ರಕ್ಷಣ ಬೇಲಿಯನ್ನು ಕೂಡಲೇ ನಿರ್ಮಿಸಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಸಿದ್ದಾರ್ಥ ಆತ್ಮಹತ್ಯೆ ಪ್ರಕರಣ ಸಂಭವಿಸಿ 1 ವರ್ಷ ಆಗುವಷ್ಟರಲ್ಲಿ ರಕ್ಷಣ ಬೇಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. 3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ರಕ್ಷಣ ಬೇಲಿ ಕಾಮಗಾರಿ ಪೂರ್ತಿ ಗೊಂಡ ಬಳಿಕ ಸೇತುವೆಯ ಎರಡೂ ದಿಕ್ಕುಗಳಲ್ಲಿ ಸಿ.ಸಿ. ಕೆಮರಾ ಅಳವಡಿಸುವ ಕಾಮಗಾರಿ ನಡೆಯಲಿದೆ. ಈ ಬಗ್ಗೆ ಈಗಾಗಲೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದುಕೊಂಡಿದೆ.
ನಿಗದಿತ ಅವಧಿಯೊಳಗೆ ಪೂರ್ಣ
ರಕ್ಷಣ ಬೇಲಿ ನಿರ್ಮಿಸುವ ಬಗ್ಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ. ಅಗತ್ಯ ಹಣಕಾಸು ವ್ಯವಸ್ಥೆ ಹಾಗೂ ಕಾಮಗಾರಿಯ ಪ್ರಾರಂಭೋತ್ಸವನ್ನೂ ನೆರವೇರಿಸಿದ್ದೇನೆ. ಸಂಬಂಧ ಪಟ್ಟ ಎಂಜಿನಿಯರುಗಳು ಕೆಲಸ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಕಾಮಗಾರಿಯನ್ನು ಪೂರ್ತಿಗೊಳಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
- ಡಿ. ವೇದವ್ಯಾಸ ಕಾಮತ್, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ