ಬಿಎಸ್ಸೆನ್ನೆಲ್‌ ವಿರುದ್ಧ ಪ್ರತಿಭಟನೆ


Team Udayavani, Jul 10, 2018, 12:12 PM IST

10-july-8.jpg

ಮಹಾನಗರ : ಬಿಎಸ್ಸೆನ್ನೆಲ್‌ ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದ ಸುಮಾರು 90ಕ್ಕೂ ಮಿಕ್ಕಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಬಿಎಸ್ಸೆನ್ನೆಲ್‌ ನಾನ್‌ ಪರ್ಮನೆಂಟ್‌ ವರ್ಕರ್ಸ್‌ ಯೂನಿಯನ್‌ ಸಿಐಟಿಯು ವತಿಯಿಂದ ಬಿಎಸ್ಸೆನ್ನೆಲ್‌ ಪ್ರಧಾನ ಕಚೇರಿ ಮುಂಭಾಗ ಸೋಮವಾರ ಬೃಹತ್‌ ಪ್ರತಿಭಟನ ಪ್ರದರ್ಶನ ನಡೆಯಿತು.

ತಾತ್ಕಾಲಿಕ ಸ್ವರೂಪದ ಕೆಲಸ ಹೆಚ್ಚಳ
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವಸಂತ ಆಚಾರಿ, ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್‌ ಸಂಸ್ಥೆಗೆ ಉತ್ತಮ ಹೆಸರಿದ್ದು, ಇದಕ್ಕೆ ಗುತ್ತಿಗೆ ಕಾರ್ಮಿಕರು ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರ ಪ್ರದೇಶದಲ್ಲಿರುವ ಎಕ್ಸ್‌ಚೇಂಜ್‌ಗಳಲ್ಲಿ ಉತ್ತಮ ಸೇವೆ ನಿರ್ವಹಿಸಿರುವುದೇ ಕಾರಣ. ಕೇಂದ್ರ ಸರಕಾರದ ನವ ಉದಾರೀಕರಣ ನೀತಿಯನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುವ ಭಾಗವಾಗಿ ದೇಶದ ಉದ್ದಗಲಕ್ಕೂ ಖಾಯಂ ಸ್ವರೂಪದ ಕೆಲಸಗಳು ನಾಶವಾಗಿ ತಾತ್ಕಾಲಿಕ ಸ್ವರೂಪದ ಕೆಲಸಗಳು ಹೆಚ್ಚುತ್ತಿವೆ. ಈ ಕೆಲಸಗಳಲ್ಲಿ ಗುತ್ತಿಗೆ ಕಾರ್ಮಿಕರು ಬಹುಪಾಲು ಮಂದಿ ದುಡಿಯುತ್ತಿದ್ದು, ಅವರ ಮೇಲೆ ಅಮಾನವೀಯ ಶೋಷಣೆಗಳು ನಡೆಯುತ್ತಿವೆ ಎಂದು ಆಪಾದಿಸಿದರು.

ಉಪಯೋಗಿಸಿ ಎಸೆಯುವ ನೀತಿಯಿಂದಾಗಿ ಕಾರ್ಮಿಕರು ನಿರ್ಗತಿಕರಾಗುತ್ತಿದ್ದಾರೆ. ಸರಕಾರದ ನೀತಿಗಳು ಮತ್ತು ಆಡಳಿತ ವರ್ಗದ ನೀತಿಗಳು ಅಮಾನವೀಯವಾಗಿದೆ. ಎಲ್ಲ ಕೆಲಸಗಳನ್ನು ಕಳೆದುಕೊಂಡ ಕಾರ್ಮಿಕರನ್ನು ಪುನರ್‌ ನೇಮಕ ಮಾಡಬೇಕು. ಅನಿವಾರ್ಯವಾಗಿ ಕೆಲಸದಿಂದ ಕೈ ಬಿಡಬೇಕಾದ ಪರಿಸ್ಥಿತಿ ಬಂದಾಗ ಅವರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. 

ತೀವ್ರ ಹೋರಾಟದ ಎಚ್ಚರಿಕೆ
ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ಚೀಟಿ, ವೇತನ ಚೀಟಿ, ವಾರದಲ್ಲಿ ಒಂದು ದಿನ ರಜೆ, ಹಬ್ಬದ ರಜೆ, ಹೆಚ್ಚುವರಿ ದುಡಿಮೆಗೆ ಹೆಚ್ಚುವರಿ ವೇತನ ನೀಡಲು ಸಾಧ್ಯವಾಗದ ಗುತ್ತಿಗೆದಾರರನ್ನು ನಿಯಂತ್ರಿಸಲು ವಿಫಲವಾದ ಪ್ರಧಾನ ಆಡಳಿತ ವರ್ಗದ ನೀತಿ ಖಂಡನೀಯ. ಬೇಡಿಕೆಗಳನ್ನು ಈಡೇರಿಸದಿದ್ದರೆ ತೀವ್ರತರದ ಹೋರಾಟವನ್ನು ಸಂಘಟಿಸಲಾಗುವುದೆಂದು ಎಂದರು.

ಉನ್ನತ ಮಟ್ಟದ ನಿಯೋಗವು ಬಿಎಸೆನ್ನೆಲ್‌ ಜನರಲ್‌ ಮ್ಯಾನೇಜರ್‌ರವರಿಗೆ ಮನವಿ ನೀಡಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಅನಂತರ ಇದೇ ಬೇಡಿಕೆಗಳನ್ನು ಕೇಂದ್ರ ಸಹಾಯಕ ಕಾರ್ಮಿಕ ಆಯುಕ್ತರಿಗೆ ನೀಡಿ ಸರಕಾರದ ಮಧ್ಯ ಪ್ರವೇಶಕ್ಕಾಗಿ ಒತ್ತಾಯಿಸಲಾಯಿತು. ಜಿಲ್ಲಾ ಪ್ರ.ಕಾರ್ಯದರ್ಶಿ ಉದಯ್‌ ಕುಮಾರ್‌, ಉಡುಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಮೋಹನ್‌, ಮುಖಂಡರಾದ ದಿನೇಶ್‌, ಸುನಿಲ್‌, ಅನಿಫ್‌, ನಿತ್ಯಾನಂದ, ಶಿವಪ್ರಕಾಶ್‌, ರಮೇಶ್‌, ಶೀನಪ್ಪ ಮತ್ತಿತರರು ಉಪಸ್ಥಿತರಿದ್ದರು. 

ಸೆ. 5: ಪಾರ್ಲಿಮೆಂಟ್‌ ಚಲೋ ಕಾರ್ಯಕ್ರಮ
ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ದೇಶ ವ್ಯಾಪಿಯಾಗಿ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ತೀವ್ರ ಹೋರಾಟ ಆರಂಭವಾಗಿದೆ. ಕೆಲಸದ ಭದ್ರತೆಯನ್ನು ನೀಡದಂತೆ ಕಾರ್ಪೊರೇಟ್‌ ರಂಗಕ್ಕೆ ಸಹಕರಿಸುವ ಈ ನೀತಿಯ ವಿರುದ್ಧವಾಗಿ ಸಿಐಟಿಯು ಸೆ. 5ರಂದು ಪಾರ್ಲಿಮೆಂಟ್‌ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದರ ಪೂರ್ವಭಾವಿಯಾಗಿ ರಾಜ್ಯವ್ಯಾಪಿ ಹೋರಾಟ ನಡೆಯಲಿದೆ ಎಂದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.