ಪಂಪ್ ವೆಲ್ ಲಾಡ್ಜ್ ನಲ್ಲಿ ಕೊಲೆ : ಇನ್ನೋರ್ವ ಆರೋಪಿ ಬಂಧನ
Team Udayavani, Oct 18, 2021, 2:52 PM IST
ಮಂಗಳೂರು: ಪಂಪ್ ವೆಲ್ನ ಲಾಡ್ಜ್ ಒಂದರಲ್ಲಿ ಶನಿವಾರ ಮುಂಜಾನೆ ನಡೆದ ಪಚ್ಚನಾಡಿಯ ಧನುಷ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೇರಿದೆ.
ಧನುಷ್ ಸಹಿತ ಒಟ್ಟು ಆರು ಮಂದಿ ಲಾಡ್ಜ್ನಲ್ಲಿ ಉಳಿದುಕೊಂಡು ಪಾರ್ಟಿ ಮಾಡಿದ್ದು, ತಡರಾತ್ರಿ ಅವರ ನಡುವೆ ಕಲಹ ಉಂಟಾಗಿ ಧನುಷ್ಗೆ ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಶನಿವಾರ, ರವಿವಾರ ಮತ್ತೋರ್ವನನ್ನು ವಶಕ್ಕೆ ಪಡೆದಿದ್ದರು.
ತಮ್ಮ ಮನೆಯವರ ಬಗ್ಗೆ ಯಾವಾಗಲೂ ತುಚ್ಛವಾಗಿ ಮಾತನಾಡುತ್ತಿದ್ದ ಎಂದು ಬುದ್ದಿ ಹೇಳುವುದಕ್ಕಾಗಿ ಧನುಷ್ ನನ್ನು ಲಾಡ್ಜ್ ಗೆ ಕರೆದಿದ್ದರು. ರಾಜಿ ಪಂಚಾಯತಿಕೆ ಮಾಡಲು ಮುಂದಾಗಿದ್ದರು. ಆಗಲೂ ಧನುಷ್ ತನ್ನ ವರ್ತನೆ ಸಮರ್ಥಿಸಿದ ಕಾರಣ ಸಿಟ್ಟಾಗಿ ಕೊಲೆ ಮಾಡಿರುವುದು ಗೊತ್ತಾಗಿದೆ ಎಂದು ಪೊಲಿಸ್ ಆಯುಕ್ತರು ತಿಳಿಸಿದ್ದಾರೆ.
ಕ್ರಿಮಿನಲ್ ಹಿನ್ನೆಲೆ
ಆರೋಪಿಗಳಲ್ಲಿ ಓರ್ವನ ಮೇಲೆ ಈ ಹಿಂದೆ ಪಾಂಡೇಶ್ವರ ಮತ್ತು ಕದ್ರಿ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಎನ್ಡಿಪಿಎಸ್ ಪ್ರಕರಣ ದಾಖಲಾಗಿತ್ತು. ಧನುಷ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣಗಳಿವೆ ಎಂದು ತಿಳಿದುಬಂದಿದೆ. ದಾಳಿ ಮಾಡುವ ಸನ್ನಿವೇಶ ಮತ್ತು ಆಸ್ಪತ್ರೆಗೆ ಕೊಂಡೊಯ್ಯುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ