ಪಂಪ್ವೆಲ್: ತಡೆಗೋಡೆ ಬಿರುಕು; ವರದಿ ನೀಡಲು ಸಂಸದ ನಳಿನ್ ಸೂಚನೆ
Team Udayavani, May 2, 2020, 5:19 AM IST
ಮಂಗಳೂರು: ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಪ್ರತ್ಯೇಕ ತಂಡ (ಥರ್ಡ್ ಪಾರ್ಟಿಯಿಂದ) ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪಂಪ್ವೆಲ್ ಮೇಲ್ಸೇತುವೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸಂಸದರು ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮತ್ತು ತಜ್ಞ ಎಂಜಿನಿಯರ್ಗಳ ಜತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ರಸ್ತೆ ಸಮತಟ್ಟುಗೊಳಿಸಿ ಮಣ್ಣು ಹಾಕಿದ ಬಳಿಕ ನಿರ್ಮಿಸಿದ ತಡೆಗೋಡೆಯಲ್ಲಿ ಸಣ್ಣ ಬಿರುಕು ಉಂಟಾಗಿತ್ತು. ಅದನ್ನು ತತ್ಕ್ಷಣ ದುರಸ್ತಿ ಪಡಿಸಲಾಗಿದೆ. ಇದರಿಂದ ಮೇಲ್ಸೇತುವೆಗೆ ಯಾವುದೇ ಹಾನಿಯಾಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು. ಕಾಮಗಾರಿಯಲ್ಲಿ ಏನಾದರೂ ಲೋಪ ಉಂಟಾಗಿದೆಯೇ ಎಂಬ ಬಗ್ಗೆ ಪ್ರತ್ಯೇಕ ತಂಡದಿಂದ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಸಂಸದರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ