ವಿಳಂಬಕ್ಕೆ ಕಾಂಗ್ರೆಸ್ ಕಾರಣ: ನಳಿನ್
ಸಂಚಾರಕ್ಕೆ ತೆರೆದುಕೊಂಡ ಪಂಪ್ವೆಲ್ ಮೇಲ್ಸೇತುವೆ
Team Udayavani, Feb 1, 2020, 1:54 AM IST
ಮಂಗಳೂರು: ಸುಮಾರು 10 ವರ್ಷಗಳಿಂದ ನನೆಗುದಿಗೆ ಬಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪಂಪ್ವೆಲ್ ಮೇಲ್ಸೇತುವೆಯು ಶುಕ್ರವಾರ ಲೋಕಾರ್ಪ ಣೆಯಾಗಿ ವಾಹನಗಳ ಸಂಚಾರ ಪ್ರಾರಂಭಗೊಂಡಿದೆ.
ಉದ್ಘಾಟನೆಯ ಬಳಿಕ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು, ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ಕಾಂಗ್ರೆಸ್ ಸರಕಾರವೇ ಕಾರಣ. ಮನಮೋಹನ್ ಸಿಂಗ್ ಪ್ರಧಾನಿ ಯಾಗಿದ್ದ ವೇಳೆ ತೆಗೆದುಕೊಂಡ ಕೆಲವು ನಿಯಮಗಳಿಂದಾಗಿ ಕಾಮಗಾರಿ ಮುಗಿಯುವುದಕ್ಕೆ ತಡವಾಗಿದೆ. ಅಲ್ಲದೆ ಅಂದು ಆಡಳಿತದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಮಹಾನಗರ ಪಾಲಿಕೆ, ಅಂದಿನ ಕಾಂಗ್ರೆಸ್ ಶಾಸಕರು, ಉಸ್ತುವಾರಿ ಸಚಿವರು ಕೂಡ ನೇರ ಹೊಣೆ ಎಂದು ಆರೋಪಿಸಿದರು.
2004ರಲ್ಲಿ ಪಂಪ್ವೆಲ್ ಮೇಲ್ಸೇತುವೆಗೆ ಅನುಮೋದನೆ ದೊರಕಿತ್ತು. 2010ರಲ್ಲಿ ಟೆಂಡರ್ ನಡೆದು 2012ರಲ್ಲಿ ಕಾಮಗಾರಿ ಆರಂಭ ಗೊಂಡಿತ್ತು. 2016ರಲ್ಲಿ ಮಹಾವೀರ ವೃತ್ತ ಮತ್ತು ಅದರಲ್ಲಿದ್ದ ಕಲಶವನ್ನು ತೆರವುಗೊಳಿಸಲು ಪಾಲಿಕೆಯಿಂದ ಒಪ್ಪಿಗೆ ದೊರಕಿತ್ತು. ಆ ವೇಳೆ ಅಂಡರ್ ಪಾಸ್ ಬೇಕೆಂಬ ಕಾರಣಕ್ಕೆ ಕಾಮಗಾರಿ ವಿಳಂಬ ವಾಯಿತು. ಪಂಪ್ವೆಲ್ನಲ್ಲಿ ಬಸ್ ನಿಲ್ದಾಣ ವಾಗುತ್ತದೆ ಎಂಬ ಕಾರಣಕ್ಕೆ ವಿನ್ಯಾಸ ಬದಲಿಸ ಬೇಕಾಯಿತು. ಇಷ್ಟೆಲ್ಲ ತೊಡಕು ಇದ್ದರೂ ಎಲ್ಲದಕ್ಕೂ ಅವಕಾಶ ನೀಡಿಯೇ ಕಾಮಗಾರಿ ಪೂರ್ಣ ಗೊಳಿಸಲಾಗಿದೆ ಎಂದರು.
ಪಂಪ್ವೆಲ್ ಮೇಲ್ಸೇತುವೆ ಉದ್ಘಾಟನ ಸಮಾರಂಭಕ್ಕೆ ವಿಪಕ್ಷದ ಟೀಕಾ ಕಾರರು ಬರಬೇಕಿತ್ತು. ಹಲವು ವರ್ಷಗಳಿಂದ ಉಳ್ಳಾಲದಲ್ಲಿ 400 ಮನೆಗಳಿಗಾಗಿ ಬಡವರು ಕಾಯುತ್ತಿದ್ದಾರೆ. ಯಾರ್ಯಾರ ಕಾಲು ಹಿಡಿದು ಜನಪ್ರತಿನಿಧಿಯಾದವರು ಉಳ್ಳಾಲದಲ್ಲಿ ಕಾಮಗಾರಿಗೆ ಬಾಕಿ ಇರುವ ಮನೆಗಳ ಬಗ್ಗೆ ಸತ್ಯಶೋಧನೆ ನಡೆಸಲಿ. ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಗೂ ಕಾನೂನಿನ ತೊಡಕು ಎದುರಾಗಿತ್ತು. ಕಾಮಗಾರಿ ಉದ್ದೇಶದಿಂದ ಕೆಲವು ಕಟ್ಟಡ ತೆರವುಗೊಳಿಸಲು ಆ ಭಾಗದ ಶಾಸಕರು ಅಡ್ಡಿಪಡಿಸಿದ್ದರು. ಇನ್ನೂ 5ರಿಂದ 6 ಕಟ್ಟಡ ತೆರವಿಗೆ ಬಾಕಿ ಇದೆ. ಈ ವಿಚಾರಕ್ಕೆ ಕಾಂಗ್ರೆಸ್ನವರು ಯಾವಾಗ ಪಾದಯಾತ್ರೆ ನಡೆಸುತ್ತಾರೆ ಎಂದು ಲೇವಡಿ ಮಾಡಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಸಂಜೀವ ಮಠಂದೂರು, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಪ್ರಮುಖರಾದ ಕಿಶೋರ್ ರೈ, ಸಂದೀಪ್ ಗರೋಡಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ನವಯುಗ ಸಂಸ್ಥೆ ಅಧಿಕಾರಿಗಳು ಉಪಸ್ಥಿತರಿದ್ದರು. ಕೇರಳದ ಚೆಂಡೆ, ವಾದ್ಯ, ಬೊಂಬೆಗಳು ಮೇಲ್ಸೇತುವೆ ಉದ್ಘಾಟನೆ ಸಮಾರಂಭದಲ್ಲಿ ಗಮನ ಸೆಳೆದವು.
ಪಂಪ್ವೆಲ್ ಮೇಲ್ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ