ಪಂಪ್‌ವೆಲ್‌: ಕೇಂದ್ರ ಬಸ್‌ ಟರ್ಮಿನಲ್‌ಗೆ ಟೆಂಡರ್‌

ಬಹುಕಾಲದ ಬೇಡಿಕೆ ಸಾಕಾರದತ್ತ ಮಹತ್ವದ ಹೆಜ್ಜೆ

Team Udayavani, Sep 4, 2020, 5:41 AM IST

ಪಂಪ್‌ವೆಲ್‌: ಕೇಂದ್ರ ಬಸ್‌ ಟರ್ಮಿನಲ್‌ಗೆ ಟೆಂಡರ್‌

ಪಂಪ್‌ವೆಲ್‌ನಲ್ಲಿ ಬಸ್‌ನಿಲ್ದಾಣ ನಿರ್ಮಾಣವಾಗಲಿರುವ ಪ್ರದೇಶ.

ಮಹಾನಗರ: ಮಂಗಳೂರು ನಗರದ, ಜಿಲ್ಲೆಯ ಬಹುಕಾಲದ ಬೇಡಿಕೆಯಾಗಿರುವ ಸುಸಜ್ಜಿತ ಕೇಂದ್ರ ಬಸ್‌ನಿಲ್ದಾಣ ನಿರ್ಮಾಣ ಯೋಜನೆ ನನಸಾಗುವಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದ್ದು ಟೆಂಡರ್‌ ಕರೆಯಲಾಗಿದೆ. ಒಟ್ಟು 445 ಕೋ.ರೂ.ವೆಚ್ಚದಲ್ಲಿ ಇಂಟಿ ಗ್ರೇಟೆಡ್‌ ಬಸ್‌ ಟರ್ಮಿನಲ್‌ ಮತ್ತು ವಾಣಿಜ್ಯ ಸಂಕೀರ್ಣ ಅಭಿವೃದ್ಧಿ ಯೋಜನೆ ಮಂಗಳೂರು ಸ್ಮಾರ್ಟ್‌ಸಿಟಿ ಲಿಮಿಟೆಡ್‌ ವತಿಯಿಂದ ಅನುಷ್ಠಾನಗೊಳ್ಳಲಿದ್ದು ಟೆಂಡರ್‌ ಸಲ್ಲಿಸಲು ಅಕ್ಟೋಬರ್‌ 13 ಕೊನೆಯ ದಿನವಾಗಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ಸಾರ್ವ ಜನಿಕ-ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಪಂಪ್‌ವೆಲ್‌ನಲ್ಲಿ ಇಂಟಿ ಗ್ರೇಟೆಡ್‌ ಬಸ್‌ ಟರ್ಮಿನಲ್‌ ಮತ್ತು ವಾಣಿಜ್ಯ ಸಂಕೀರ್ಣ ಅಭಿವೃದ್ಧಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡ ಬಳಿಕ 3 ವರ್ಷಗಳ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕಾಗಿದೆ.

180 ಬಸ್‌ ಬೇಗಳೊಂದಿಗೆ ಬಸ್‌ ಟರ್ಮಿನಲ್‌, ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಸೇವೆ ಮತ್ತು ದೂರದ ಪ್ರಯಾಣದ ಬಸ್‌ ವ್ಯವಸ್ಥೆಯನ್ನು ನೂತನ ಬಸ್‌ಟರ್ಮಿನಲ್‌ ಒಳಗೊಂಡಿದೆ. ಸುಮಾರು 10 ಲಕ್ಷ ಚದರ ಅಡಿ ವಿಸ್ತೀರ್ಣದ ಶಾಪಿಂಗ್‌ ಮಾಲ್‌, ಕಚೇರಿ ಸ್ಥಳ, ನಗರದ ಜನರಿಗಾಗಿ ಮಲ್ಟಿ-ಲೆವೆಲ್‌ ಕಾರ್‌ ಪಾರ್ಕಿಂಗ್‌ ಮುಂತಾದ ವ್ಯವಸ್ಥೆಗಳು ಇರಲಿದ್ದು ರಾಜ್ಯದಲ್ಲೇ ವಿನೂತನ ಮಾದರಿ ಬಸ್‌ ನಿಲ್ದಾಣ ಕಲ್ಪನೆಯಾಗಿದೆ. ಪಿಪಿಪಿ ಮಾಡೆಲ್‌ನ ಗುತ್ತಿಗೆ ಯಾರು ಪಡೆದಿದ್ದಾರೋ ಅವರು 40 ವರ್ಷಗಳ ಕಾಲ ಅದನ್ನು ನಿರ್ವಹಿಸಿ ನಂತರ ಈ ಬಸ್‌ ನಿಲ್ದಾಣವನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಕರಾರು ಯೋಜನೆ ಒಳಗೊಂಡಿದೆ.

11ವರ್ಷಗಳ ಹಿಂದೆ ಭೂಸ್ವಾಧೀನ
ಪಂಪ್‌ವೆಲ್‌ನಲ್ಲಿ ಕೇಂದ್ರ ಬಸ್‌ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ 2009ರಲ್ಲಿ 7.23 ಎಕ್ರೆ ಖಾಸಗಿ ಜಮೀನು ಸ್ವಾಧೀನ ಪಡಿಸಲಾಗಿತ್ತು. ಈ ಪ್ರದೇಶಕ್ಕೆ ಮಣ್ಣುತುಂಬಿಸುವ ಕಾರ್ಯ ಆರಂಭಗೊಂಡು 3 ವರ್ಷಗಳಾಗುತ್ತಾ ಬಂದಿವೆ. ಮೂರು – ನಾಲ್ಕು ವರ್ಷಗಳ ಹಿಂದೆ ಇಲ್ಲಿ ಇಂಟರ್‌ಲಾಕ್‌ ಅಳವಡಿಸಿ ತಾತ್ಕಾಲಿಕವಾಗಿ ಪ್ರಾಯೋಗಿಕ ನೆಲೆ ಯಲ್ಲಿ ಸರ್ವಿಸ್‌ ಬಸ್‌ನಿಲ್ದಾಣವನ್ನು ಸ್ಥಳಾಂತರಿಸುವ ಬಗ್ಗೆ ಪ್ರಸ್ತಾವಿಸಲಾಗಿತ್ತು. ಇದೆಲ್ಲದರ ನಡುವೆ ಬಸ್‌ನಿಲ್ದಾಣ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಬಗ್ಗೆಯೂ ಮಾತುಕತೆ ನಡೆದಿತ್ತು. ಪಡೀಲ್‌, ಕುಳೂರು ಮುಂತಾ ದ ಪ್ರದೇಶಗಳ ಹೆಸರು ಪ್ರಸ್ತಾವನೆಯಾಗಿ ಸ್ಥಳ ಪರಿಶೀಲನೆ ನಡೆದಿತ್ತು. ಕಡೆಗೆ ಪಂಪ್‌ವೆಲ್‌ನ ಜಾಗವೇ ಅಂತಿಮಗೊಂಡಿತು.

24 ವರ್ಷಗಳಿಂದ ತಾತ್ಕಾಲಿಕ ನೆಲೆ
ನೆಹರೂ ಮೈದಾನದ ಬಳಿ ಇರುವ ಹಾಕಿ ಮೈದಾನದಲ್ಲಿ 24 ವರ್ಷಗಳ ಸುದೀರ್ಘ‌ ಅವಧಿಯಿಂದ ತಾತ್ಕಾಲಿಕ ನೆಲೆಯಲ್ಲಿ ಸರ್ವಿಸ್‌ ಬಸ್‌ನಿಲ್ದಾಣ ಕಾರ್ಯಾಚರಿಸುತ್ತಿದೆ. ಸರ್ವಿಸ್‌ ಬಸ್‌ನಿಲ್ದಾಣವನ್ನು ಹಂಪನಕಟ್ಟೆಯಿಂದ 1996ರ ಅ. 6ರಂದು ಇಲ್ಲಿಗೆ ಸ್ಥಳಾಂತರಿಸಲಾಗಿತ್ತು. ಆಗಲೇ ಸೂಕ್ತ ಪ್ರದೇಶದಲ್ಲಿ ವಿಶಾಲ ಮತ್ತು ಸುಸಜ್ಜಿತ ಬಸ್‌ನಿಲ್ದಾಣವನ್ನು ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಮಂಗಳೂರಿನಲ್ಲಿ ವಾಹನದಟ್ಟನೆ ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರ ಬಸ್‌ನಿಲ್ದಾಣವನ್ನು ಹಂಪನಕಟ್ಟೆ ಪ್ರದೇಶದಿಂದ ಹೊರಗೆ ಸ್ಥಳಾಂತರಿಸುವುದು ಅನಿವಾರ್ಯ.

ಮಹತ್ವದ ಯೋಜನೆ
ಪಂಪ್‌ವೆಲ್‌ನಲ್ಲಿ ಸುಸಜ್ಜಿತ ಕೇಂದ್ರ ಬಸ್‌ನಿಲ್ದಾಣ ನಿರ್ಮಾಣ ಬಹುಕಾಲದ ಬೇಡಿಕೆಯಾಗಿದ್ದು, ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿವೆೆ. ಸಾರ್ವಜನಿಕ- ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆ ಜಿಲ್ಲೆಯ ಪಾಲಿಗೆ ಅತಿ ಮಹತ್ವದ್ದಾಗಿದ್ದು, ಸ್ಮಾರ್ಟ್‌ ಸಿಟಿ ಯೋಜನೆಯಡಿಯಲ್ಲಿ ಕಾರ್ಯಗತಗೊಳ್ಳುತ್ತಿದೆ. ಇದರ ಸಾಕಾರದಲ್ಲಿ ಸರ್ವರ ಸಹಕಾರ ಅವಶ್ಯವಿದೆ.
 - ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.