ವಿದ್ಯುತ್‌ ಮಾಹಿತಿಗೆ ಶೀಘ್ರ “ಆ್ಯಪ್‌’ : MESCOM ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್‌ ಆರ್

ತುರ್ತು ನಿರ್ವಹಣೆಗೆ ವಿಶೇಷ ಪಡೆ ; ಡಿಜಿಟಲ್‌ ಮೀಟರ್‌ ಅಳವಡಿಕೆ

Team Udayavani, Jul 3, 2020, 9:17 AM IST

ವಿದ್ಯುತ್‌ ಮಾಹಿತಿಗೆ ಶೀಘ್ರ “ಆ್ಯಪ್‌’ : ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್‌ ಆರ್

ಮಂಗಳೂರು: ವಿದ್ಯುತ್‌ ಸಂಬಂಧಿತ ಸಮಗ್ರ ಮಾಹಿತಿ ಹಾಗೂ ಬಿಲ್‌ ಪಾವತಿಗೆ ಅವಕಾಶ ಕಲ್ಪಿಸುವ ಆ್ಯಪ್‌ ಒಂದನ್ನು ಬೆಸ್ಕಾಂ ಮಾದರಿಯಲ್ಲಿ ಮೆಸ್ಕಾಂನಲ್ಲೂ 2 ತಿಂಗಳೊಳಗೆ ಜಾರಿಗೆ ತರಲಾಗುವುದು. ಜತೆಗೆ ಡಿಜಿಟಲ್‌ ಮೀಟರ್‌ ಅಳವಡಿಕೆ ಹಾಗೂ ದ.ಕ. ಜಿಲ್ಲೆಯ ಆಯ್ದ ಪ್ರದೇಶಗಳಲ್ಲಿ ವಯರ್‌ಗಳಿಗೆ ಕವರ್‌ ಕಂಡಕ್ಟರ್‌ ಹಾಕಲು ನಿರ್ಧರಿಸಲಾಗಿದೆ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್‌ ಆರ್‌. ಪತ್ರಿಕಾ ಸಂವಾದದಲ್ಲಿ ತಿಳಿಸಿದರು. ಮಳೆಗಾಲದಲ್ಲಿ ತುರ್ತು ಕೆಲಸಗಳ ನಿರ್ವಹಣೆಗಾಗಿ 851 ಸಿಬಂದಿಯ ವಿಶೇಷ ಪಡೆಯನ್ನು ರಚಿಸಲಾಗಿದೆ. 46 ವಾಹನಗಳನ್ನು ಮಂಜೂರು ಮಾಡಲಾಗಿದೆ. ದ.ಕ.ದಲ್ಲಿ 234, ಉಡುಪಿಯಲ್ಲಿ 207, ಶಿವಮೊಗ್ಗದಲ್ಲಿ 225, ಚಿಕ್ಕಮಗಳೂರಿನಲ್ಲಿ 185 ಸಿಬಂದಿ ವಿಶೇಷ ಪಡೆಯಲ್ಲಿರುತ್ತಾರೆ ಎಂದರು.

ಭೂಗತ ಕೇಬಲ್‌ ನಗರಕ್ಕೆ ಪೂರಕ
ಮಲೆನಾಡು ಹಾಗೂ ಅರಣ್ಯ ಪ್ರದೇಶಗಳಲ್ಲಿ ಮಳೆಗಾಲದಲ್ಲಿ ಮರ ಬಿದ್ದು ವಿದ್ಯುತ್‌ ಸಮಸ್ಯೆಯಾಗುವ ಕಾರಣ ಅಲ್ಲಿ ಭೂಗತ ಕೇಬಲ್‌ ಅಳವಡಿಸಬಹುದಲ್ಲ ಎಂಬ ಸುದ್ದಿಗಾರರ ಸಲಹೆಗೆ ಉತ್ತರಿಸಿದ ಅವರು, ಅಲ್ಲಿ ಭೂಗತ ಕೇಬಲ್‌ನ ನಿರ್ವಹಣೆ ಕಷ್ಟ; ವೆಚ್ಚವೂ ಅಧಿಕ. ನಗರ ಪ್ರದೇಶಕ್ಕಷ್ಟೇ ಅದು ಪೂರಕ ಎಂದರು.

ವಿದ್ಯುತ್‌ ಆಘಾತ ಸಮಸ್ಯೆಗೆ ಪರಿಹಾರ
ಮಂಗಳೂರು ವಲಯದ ಮುಖ್ಯ ಎಂಜಿನಿಯರ್‌ ಮಂಜಪ್ಪ ಮಾತನಾಡಿ, ವಿದ್ಯುತ್‌ ಆಘಾತ ಸಮಸ್ಯೆ ಪರಿಹಾರಕ್ಕಾಗಿ ರೈತರು, ಗೃಹ ಬಳಕೆದಾರರು ಅರ್ಥ್ ಲೀಕೇಜ್‌ ಸರ್ಕಿಟ್‌ ಬ್ರೇಕರ್‌ ಅಳವಡಿಸಬೇಕು ಎಂದರು. ತಾಂತ್ರಿಕ ನಿರ್ದೇಶಕರಾದ ಪದ್ಮಾವತಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಸ್ವಾಗತಿಸಿದರು. ಪತ್ರಕರ್ತ ಬಿ.ಎನ್‌. ಪುಷ್ಪರಾಜ್‌ ವಂದಿಸಿದರು.

ಮಳೆ ಹಾನಿ: 12.31 ಕೋ.ರೂ. ನಷ್ಟ
ಕಳೆದ ವರ್ಷ ನೆರೆ/ ಮಳೆಯಿಂದಾಗಿ ಮೆಸ್ಕಾಂ ವ್ಯಾಪ್ತಿಯಲ್ಲಿ 33.61 ಕೋ.ರೂ. ನಷ್ಟವಾಗಿತ್ತು. ಈ ವರ್ಷ ಎಪ್ರಿಲ್‌ನಿಂದ ಜೂನ್‌ ಅಂತ್ಯದ ವರೆಗೆ ದ.ಕ.ದಲ್ಲಿ 5.26 ಕೋ.ರೂ., ಉಡುಪಿಯಲ್ಲಿ 2.02 ಕೋ.ರೂ., ಶಿವಮೊಗ್ಗದಲ್ಲಿ 2.30 ಕೋ.ರೂ., ಚಿಕ್ಕಮಗಳೂರಿನಲ್ಲಿ 2.71 ಕೋ.ರೂ. ಸೇರಿದಂತೆ ಒಟ್ಟು 12.31 ಕೋ.ರೂ. ನಷ್ಟವಾಗಿದೆ. ಕಳೆದ ವರ್ಷ ವಿದ್ಯುತ್‌ ಅಪಘಾತದಿಂದ 65 ವ್ಯಕ್ತಿಗಳು ಮೃತಪಟ್ಟಿದ್ದು 56.26 ಲಕ್ಷ ರೂ. ಪರಿಹಾರ ನೀಡಲಾಗಿದೆ. ಗಾಯಗೊಂಡ 33 ಮಂದಿಗೆ 0.75 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಸ್ನೇಹಲ್‌ ವಿವರಿಸಿದರು.

ಕಂದಾಯ ಸಂಗ್ರಹ ಕುಸಿತ
ಲಾಕ್‌ಡೌನ್‌ ಅವಧಿಯಲ್ಲಿ ಕೈಗಾರಿಕೆಗಳಿಂದ ವಿದ್ಯುತ್‌ ಬೇಡಿಕೆ ಶೇ. 60ರಷ್ಟು ಕಡಿಮೆಯಾಗಿ, ಗೃಹಬಳಕೆ ಸಾಮಾನ್ಯ ಪ್ರಮಾಣಕ್ಕಿಂತ ಶೇ. 30ರಷ್ಟು ಏರಿಕೆಯಾಗಿತ್ತು. ಪ್ರತೀ ತಿಂಗಳಿಗೆ 330 ಕೋ.ರೂ. ಸರಾಸರಿ ಕಂದಾಯ ಸಂಗ್ರಹ ನಿರೀಕ್ಷೆಯಿದ್ದು, ಲಾಕ್‌ಡೌನ್‌ ಅವಧಿಯಲ್ಲಿ ಶೇ. 50ರಷ್ಟು ಮಾತ್ರ ಸಂಗ್ರಹವಾಗಿದೆ. ಸದ್ಯ ಕೈಗಾರಿಕೆಗಳ ವಿದ್ಯುತ್‌ ಬೇಡಿಕೆ ಶೇ. 70ಕ್ಕೆ ಏರಿದೆ ಎಂದು ಸ್ನೇಹಲ್‌ ತಿಳಿಸಿದರು.

24×7 ಉಚಿತ ಸಹಾಯವಾಣಿ – 1912

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.