ಅಬಕಾರಿ ದಾಳಿ: ಪಾವೂರಿನಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ವಶ
Team Udayavani, Apr 22, 2020, 5:36 PM IST
ಮಂಗಳೂರು: ದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ತಂಡ ಇಂದು ಪಾವೂರಿನಲ್ಲಿ ದಾಳಿ ನಡೆಸಿ ತಯಾರಿಸಲಾಗುತ್ತಿದ್ದ ಕಳ್ಳಬಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ.
ಪಾವೂರು ಉಳಿಯ ಗ್ರಾಮದ ನೇತ್ರಾವತಿ ನದಿಯ ದಡದಲ್ಲಿ ಸುಮಾರು 2.5 ಲೀಟರ್ ಕಳ್ಳಭಟ್ಟಿ ಸಾರಾಯಿ, ಭಟ್ಟಿ ಸಾರಾಯಿ ತಯಾರಿಕೆಗಾಗಿ ದಾಸ್ತಾನಿಸಿರುವ 900 ಲೀಟರ್ ಗಳಷ್ಟು ಹುಳಿ ರಸ, 75 ಕೆಜಿ ಬೆಲ್ಲ ಹಾಗೂ ಭಟ್ಟಿ ತಯಾರಿಸಲು ಉಪಯೋಗಿಸುವ ಸಲಕರಣೆಗಳು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಆರೋಪಿ ಪ್ರೇಮ್ ಫೆರಾರೋ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಶೈಲಜಾ ಕೋಟೆ ರವರ ನಿರ್ದೇಶನದಂತೆ ಮಂಗಳೂರು ಉಪ ವಿಭಾಗ-1 ರ ಅಬಕಾರಿ ಡಿವೈಎಸ್ಪಿ ಶಿವಪ್ರಸಾದ್ ನೇತೃತ್ವದಲ್ಲಿ ಉಪ ವಿಭಾಗ-1ರ ಅಬಕಾರಿ ಇನ್ಸ್ಪೆಕ್ಟರ್ ಸೀಮಾ, ರತ್ನಾಕರ್ ರೈ, ಸಬ್ ಇನ್ಸ್ಪೆಕ್ಟರ್ ಪ್ರತಿಭಾ ಜಿ ಹಾಗೂ ಉಪ ವಿಭಾಗ 1 ರ ಎಲ್ಲಾ ಸಿಬ್ಬಂದಿಗಳೊಂದಿಗೆ ದಾಳಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ