ಪಾಂಡೇಶ್ವರ ಶಿವನಗರದಿಂದ ಅತ್ತಾವರಕ್ಕೆ ರೈಲ್ವೇ ಅಂಡರ್‌ಪಾಸ್‌ ರಸ್ತೆ

ಸ್ಥಳೀಯರಿಂದ ವ್ಯಕ್ತವಾದ ಬೇಡಿಕೆ

Team Udayavani, Dec 7, 2021, 5:32 PM IST

ಪಾಂಡೇಶ್ವರ ಶಿವನಗರದಿಂದ ಅತ್ತಾವರಕ್ಕೆ ರೈಲ್ವೇ ಅಂಡರ್‌ಪಾಸ್‌ ರಸ್ತೆ

ಮಹಾನಗರ: ಪಾಂಡೇಶ್ವರ ಶಿವನಗರದಿಂದ ಅತ್ತಾವರ ಕೆಎಂಸಿ ಆಸ್ಪತ್ರೆಯ ಸಮೀಪಕ್ಕೆ ಸಂಪರ್ಕ ಕಲ್ಪಿಸಲು ರೈಲ್ವೇ ಅಂಡರ್‌ಪಾಸ್‌ ರಸ್ತೆ ನಿರ್ಮಾಣಕ್ಕೆ ಸ್ಥಳೀಯರಿಂದ ಬೇಡಿಕೆ ವ್ಯಕ್ತವಾಗಿದೆ. ಇದು ಸಾಧ್ಯವಾದರೆ, ಸ್ಥಳೀಯವಾಗಿ ಅತ್ತಿಂದಿತ್ತ ತೆರಳುವ ಲಘು ವಾಹನದವರಿಗೆ ನಿತ್ಯ ಬಹು ಉಪಯೋಗವಾಗಲಿದೆ. ಜತೆಗೆ, ಪಾಂಡೇಶ್ವರ ರೈಲ್ವೇ ಗೇಟ್‌ನಿಂದಾಗಿ ಸಮಸ್ಯೆ ಅನುಭವಿಸುವ ಕೆಲವು ವಾಹನದವರಿಗೂ ಉಪಯೋಗವಾಗಲಿದೆ. ಈ ಮೂಲಕ ಮೂರು ಕಿ.ಮೀ. ಉಳಿತಾಯವಾಗಲಿದೆ!

ಅತ್ತಾವರ, ಮಂಗಳಾದೇವಿ ವಾರ್ಡ್‌ಗೆ ಸಂಬಂಧಪಟ್ಟ ಪ್ರದೇಶ ಇದಾಗಿದ್ದು, ಶಿವನಗರ, ಪಾಂಡೇಶ್ವರ, ಮಂಕಿ ಸ್ಟ್ಯಾಂಡ್ , ಮಂಗಳಾ ನಗರ, ಸುಭಾಶ್‌ನಗರ, ಮಂಗಳಾದೇವಿ ಭಾಗದ ಸ್ಥಳೀಯರು ಇದರ ಬಗ್ಗೆ ಬೇಡಿಕೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ವೇದವ್ಯಾಸ ಕಾಮತ್‌, ಮೇಯರ್‌ ಪ್ರೇಮಾನಂದ ಶೆಟ್ಟಿ ಸಹಿತ ಸ್ಥಳೀಯ ಕಾರ್ಪೋರೆಟರ್‌ಗಳಿಗೆ ಮನವಿ ಸಲ್ಲಿಸಲಾಗಿದೆ.

ಗೋಳು ಕೇಳುವವರಿಲ್ಲ
ಪಾಂಡೇಶ್ವರ ರೈಲ್ವೇಗೇಟ್‌ನಲ್ಲಿ ದಿನನಿತ್ಯ ಗೂಡ್ಸ್‌ ರೈಲು ಹಾಗೂ ರೈಲ್ವೇ ಎಂಜಿನ್‌ಗಳ ಓಡಾಟದಲ್ಲಿ ಹೃದಯ ಭಾಗವಾದ ಮಂಗಳೂರು ನಗರ ಸಂಪರ್ಕಕ್ಕೆ ಪದೇ ಪದೇ ರಸ್ತೆ ಬಂದ್‌ ಆಗುತ್ತದೆ. ಈ ಭಾಗದ ಜನರಿಗೆ ಆಸ್ಪತ್ರೆಗೆ ತೆರಳಲು ಕಷ್ಟವಾಗುತ್ತಿದೆ. ಹೀಗಾಗಿ ತುರ್ತಾಗಿ ತೆರಳುವವರ ಗೋಳು ಕೇಳುವವರಿಲ್ಲ ಎಂಬಂತಾಗಿದೆ. ಆದ್ದರಿಂದ ಈ ಸಮಸ್ಯೆಯನ್ನು ತಪ್ಪಿಸಲು ಶಿವನಗರದಿಂದ ಕೆಎಂಸಿ ಅತ್ತಾವರ ಭಾಗಕ್ಕೆ ಹೋಗಲು ಈಗಾಗಲೇ ಇರುವ ತೋಡಿಗೆ ಕಾಂಕ್ರೀಟ್‌ ಸ್ಲಾ$Âಬ್‌ ಹಾಕಿ ಅತ್ತಿಂದಿತ್ತ ತೆರಳಲು ಅವಕಾಶ ನೀಡಬಹುದು. ಈ ಮೂಲಕ ದ್ವಿಚಕ್ರ ವಾಹನ ಅಥವಾ ರಿಕ್ಷಾ ಸಂಚಾರಕ್ಕಾದರೂ ಅವಕಾಶ ನೀಡಬಹುದು ಎಂಬುದು ಸ್ಥಳೀಯರ ಅಭಿಪ್ರಾಯ.

ಸುಮಾರು 20 ವರ್ಷಗಳ ಹಿಂದೆ ಇದೇ ಜಾಗದಿಂದ ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶವಿತ್ತು. ಆಗ ಹಲವು ಮಂದಿ ಇದೇ ದಾರಿಯನ್ನು ಉಪಯೋಗಿಸಿ ಅತ್ತಿಂದಿತ್ತ ತೆರಳುತ್ತಿದ್ದರು. ಆದರೆ ಕೆಲವು ಸಮಯ ದಿಂದ ಇಲ್ಲಿಗೆ ಮಣ್ಣು ಹಾಕಿದ ಪರಿಣಾಮ ದ್ವಿಚಕ್ರ ವಾಹನ ಸಂಚಾರಕ್ಕೂ ಈಗ ಇಲ್ಲಿ ಅವಕಾಶವಿಲ್ಲ. ಸದ್ಯ ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ನಡೆಯುತ್ತಿರುವ ಹಿನ್ನೆಲೆ ಯಲ್ಲಿ ಪಾಂಡೇಶ್ವರ ಶಿವನಗರದಿಂದ ಅತ್ತಾ ವರ ಕೆಎಂಸಿ ಭಾಗದ ಸಂಪರ್ಕಕ್ಕೆ ರಸ್ತೆ ಸಂಪರ್ಕ ಮಾಡಬಹುದಾಗಿದೆ. ಈ ಬಗ್ಗೆ ರೈಲ್ವೇ ಅಧಿ ಕಾರಿಗಳನ್ನು ಸ್ಥಳಕ್ಕೆ ಕರೆತಂದು ವಿಷಯ ಪ್ರಸ್ತಾ ವಿಸಲಾಗಿದೆ. ಸದ್ಯ ಇರುವ ತೋಡಿನ ಮೇಲೆ ಕಾಂಕ್ರೀಟ್‌ ಸ್ಲ್ಯಾಬ್ ಹಾಕಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂಬುದು ಸ್ಥಳೀಯರ ಅಭಿಪ್ರಾಯ.

ರೈಲ್ವೇ ಗೇಟ್‌; ಸಂಚಾರ ಅಸ್ತವ್ಯಸ್ಥ
ಪಾಂಡೇಶ್ವರದಲ್ಲಿ ಆಗಾಗ್ಗೆ ಗೂಡ್ಸ್‌ ರೈಲುಗಳು/ಎಂಜಿನ್‌ಗಳು ಈ ಹಳಿಯಲ್ಲಿ ಬಂದರ್‌ನ ಗೂಡ್ಸ್‌ಶೆಡ್‌ಗೆ ಓಡಾಡುತ್ತಿವೆ. ದಿನದಲ್ಲಿ ಕನಿಷ್ಠವೆಂದರೂ ಮೂರು- ನಾಲ್ಕು ಬಾರಿ ಗೂಡ್ಸ್‌ ರೈಲುಗಳು ಸಂಚ ರಿಸುತ್ತವೆ. ರೈಲು ಸಂಚರಿಸುವ ವೇಳೆ ರಸ್ತೆ ಸಂಚಾರ ನಿಲ್ಲಿಸಲು ಕಬ್ಬಿಣದ ಗೇಟ್‌ ಇಲ್ಲಿ ಮುಚ್ಚಲಾಗುತ್ತದೆ. ಕೆಲವೊಂದು ಬಾರಿ ಗೂಡ್ಸ್‌ರೈಲು ಆಗಮಿಸಿದಾಗ ರೈಲ್ವೇ ಗೇಟ್‌ ಹಾಕುವ ಕಾರಣದಿಂದ ಕನಿಷ್ಠ 15ರಿಂದ 20 ನಿಮಿಷ ರಸ್ತೆ ಸಂಚಾರ ಅಸ್ತವ್ಯಸ್ತಗೊಳ್ಳುತ್ತದೆ.

ಸ್ಥಳೀಯರಿಂದ ಮನವಿ ಸಲ್ಲಿಕೆ
ಪಾಂಡೇಶ್ವರ ಶಿವನಗರದಿಂದ ಅತ್ತಾವರ ಕೆಎಂಸಿ ಆಸ್ಪತ್ರೆಯ ಸಮೀಪಕ್ಕೆ ಸಂಪರ್ಕ ಕಲ್ಪಿಸಲು ರೈಲ್ವೇ ಅಂಡರ್‌ ಪಾಸ್‌ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಈಗಾಗಲೇ ಸ್ಥಳೀಯರ ಬೇಡಿಕೆಯನ್ನು ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಲಘುವಾಹನಗಳಿಗೆ ಈ ರಸ್ತೆಯಲ್ಲಿ ಅವಕಾಶ ನೀಡಿದರೆ ಬಹಳಷ್ಟು ಮಂದಿಗೆ ಉಪಯೋಗವಾಗಲಿದೆ. ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಇದನ್ನು ಜಾರಿಗೊಳಿಸಬಹುದಾಗಿದೆ.
– ಕೃಷ್ಣಪ್ಪ ಪೂಜಾರಿ, ಮಂಗಳಾದೇವಿ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.