“ಮನೆ ಮನೆಗೆ ಮಳೆಕೊಯ್ಲು’ ಉದಯವಾಣಿ ಅಭಿಯಾನದ ಯಶಸ್ಸು

ಶತದಿನ ಪೂರ್ಣಗೊಳಿಸಿದ ಉದಯವಾಣಿ "ಮನೆ ಮನೆಗೆ ಮಳೆಕೊಯ್ಲು' ಅಭಿಯಾನ

Team Udayavani, Sep 18, 2019, 5:40 AM IST

e-38

ಮಹಾನಗರ: ಕಳೆದ ಬೇಸಗೆಯಲ್ಲಿ ಜಿಲ್ಲಾ ದ್ಯಂತ ಉಂಟಾಗಿದ್ದ ಜಲಕ್ಷಾಮಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಉದಯವಾಣಿ ಪ್ರಾರಂಭಿಸಿದ್ದ “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನವು ಯಶಸ್ವಿ ನೂರು ದಿನ ಪೂರ್ಣಗೊಳಿಸಿದೆ.

ವ್ಯರ್ಥವಾಗಿ ಹರಿದು ಹೋಗುವ ಮಳೆನೀರನ್ನು ಇಂಗಿಸುವ ಮೂಲಕ ಅಂತರ್ಜಲ ವೃದ್ಧಿಸುವುದಕ್ಕೆ ನಾವೆಲ್ಲರೂ ಒಟ್ಟಾಗಿ ಕೈಜೋಡಿಸಬೇಕು ಎನ್ನುವ ಸದಾಶಯದೊಂದಿಗೆ ಕಳೆದ ಜೂ. 8ರಂದು ಪ್ರಾರಂಭಗೊಂಡಿದ್ದ ಅಭಿಯಾನವು ಜಿಲ್ಲಾದ್ಯಂತ ಸಾವಿರಾರು ಮಂದಿಯನ್ನು ಜಲ ಸಾಕ್ಷರತೆಯ ಜಾಗೃ ತಿ ಮೂಡಿಸುವ ಈ ಜಲಾಂದೋಲನಕ್ಕೆ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ.

ದ.ಕ. ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ನಿರ್ಮಿತಿ ಕೇಂದ್ರದವರು ಜಿಲ್ಲಾದ್ಯಂತ ಅಲ್ಲಲ್ಲಿ ಮಳೆ ಕೊಯ್ಲು ಮಾಹಿತಿ ಕಾರ್ಯಕ್ರಮ-ಪ್ರಾತ್ಯಕ್ಷಿಕೆ, ಮನೆ-ಮನೆಗೆ ಭೇಟಿ, ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಈಗಾಗಲೇ ಸಾವಿರಾರು ಮಂದಿಗೆ ಮಳೆಕೊಯ್ಲಿನ ಅಗತ್ಯ-ಅನುಕೂಲತೆಯನ್ನು ಮನದಟ್ಟು ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ನಿರ್ಮಿತಿ ಕೇಂದ್ರದಿಂದ ಮಾರ್ಗದರ್ಶನ
ಈ ಅಭಿಯಾನದಡಿ ಮೂರು ತಿಂಗಳಲ್ಲಿ 500ಕ್ಕೂ ಅಧಿಕ ಮಂದಿ ನಿರ್ಮಿತಿ ಕೇಂದ್ರಕ್ಕೆ ಕರೆ ಮಾಡಿ ಮಳೆಕೊಯ್ಲು ಬಗ್ಗೆ ಮಾಹಿತಿ ಕೇಳಿದ್ದು, 200ಕ್ಕೂ ಅಧಿಕ ಮನೆಗಳಿಗೆ ಈವರೆಗೆ ಭೇಟಿ ನೀಡಿ ಉಪಯುಕ್ತ ಮಾಹಿತಿ ನೀಡಿದ್ದೇವೆ. ಉಳಿದವರಿಗೆ ದೂರವಾಣಿ ಮೂಲಕವೂ ಮಳೆಕೊಯ್ಲು ಅಳವಡಿಸಿಕೊಳ್ಳಲು ಮಾರ್ಗದರ್ಶ ಮಾಡಲಾಗಿದೆ. ಮಳೆಕೊಯ್ಲು ಕಾರ್ಯಾಗಾರದಲ್ಲಿ ಮಾಹಿತಿ ನೀಡಲು ಆಹ್ವಾನಗಳು ಬಂದಿದ್ದು, ಈ ಪೈಕಿ 56 ಕಡೆ ಮಾಹಿತಿ ಕಾರ್ಯಕ್ರಮ ನೀಡಲಾಗಿದೆ ಎಂದು ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲ್ನಾವಿ ಹೇಳಿದ್ದಾರೆ.

ಅಭಿಯಾನದಿಂದ ಸ್ಫೂರ್ತಿಗೊಂಡು ಬೆಳ್ತಂಗಡಿಯ ಮುಂಡಾಜೆಯಲ್ಲಿ “ನೀರಿಂಗಿಸೋಣ’ ಎಂಬ ತಂಡವೊಂದು ಅಸ್ತಿತ್ವಕ್ಕೆ ಬಂದಿದ್ದು, ಗ್ರಾಮದಲ್ಲಿ ಜಲಾಂದೋಲನದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲದೆ, ಹಲವಾರು ವಿದ್ಯಾಸಂಸ್ಥೆ, ಸಮುದಾಯ ಸಂಘಟನೆಗಳು, ಪ್ರಾರ್ಥನಾ ಮಂದಿರಗಳು ಸ್ವಯಂಪ್ರೇರಿತವಾಗಿ ಮಳೆಕೊಯ್ಲು ಅರಿವು ಕಾರ್ಯಕ್ರಮ ಆಯೋಜಿಸಿ ಉದಯವಾಣಿಯ ಈ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವುದಕ್ಕೆ ಕೈಜೋಡಿಸಿರುವುದು ಕೂಡ ಗಮನಾರ್ಹ.

ಕಟೀಲು ಕುಕ್ಕುಂಡೇಲು
ಇಲ್ಲಿನ ನಿವಾಸಿ ಅಲೆಕ್ಸ್‌ ತಾವ್ರೋ ಮೂರು ವರ್ಷಗಳ ಹಿಂದೆ ತಮ್ಮ ಜಾಗದಲ್ಲಿ ಬೃಹತ್‌ ಕೆರೆ ನಿರ್ಮಿಸಿ ನೀರಿಂಗಿಸುವ ಮೂಲಕ ಕೊಳವೆ ಬಾವಿಗೆ ಜಲ ಮರುಪೂರಣ ಮಾಡುತ್ತಿದ್ದಾರೆ. ಇದರಿಂದ ಸಾಕಷ್ಟು ನೀರು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಲೆಕ್ಸ್‌ ಅವರ ಮನೆಯಲ್ಲಿ ಕೊರೆದ ಕೊಳವೆ ಬಾವಿಯಲ್ಲಿ ನೀರು ತೀರಾ ಕೆಳ ಮಟ್ಟದಲ್ಲಿತ್ತು. ನೀರಿನ ಮಟ್ಟ ಹೆಚ್ಚಳಕ್ಕಾಗಿ ಕೊಳವೆ ಬಾವಿ ಚ ಕೆರೆ ನಿರ್ಮಿಸುವ ಉಪಾಯ ಕಂಡುಕೊಂಡ ಅವರು, ಕೆರೆ ನಿರ್ಮಿಸಿದರು. ಈಗ ಕೆರೆಯಲ್ಲಿಯೂ ನೀರು ತುಂಬಿಕೊಂಡಿದ್ದು, ಇಂಗಿದ ನೀರು ಪಕ್ಕದ ಕೊಳವೆ ಬಾವಿಯನ್ನು ರೀಚಾರ್ಜ್‌ ಮಾಡುತ್ತಿದೆ. ಒಂದು ಕಾಲದಲ್ಲಿ ಕಡಿಮೆ ಇದ್ದ ನೀರಿನ ಮಟ್ಟ ಪ್ರಸ್ತುತ ತುಂಬಿ ಮೇಲೆ ಹರಿದು ಹೋಗುತ್ತಿದೆ ಎಂದು ಹೇಳುತ್ತಾರೆ ಅಲೆಕ್ಸ್‌.

ಛಾವಣಿ ನೀರಿನಿಂದ ಮಳೆಕೊಯ್ಲು ಜಲ ಮರುಪೂರಣ
ಬಂಟ್ವಾಳ ತಾ| ರಾಯಿ ಗ್ರಾಮದ ದೈಲಾ ಎಂಬ ಹಳ್ಳಿಯಲ್ಲಿ ವಾಸವಾಗಿರುವ ಸೋಮಶೇಖರ ರೈ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದಾರೆ. ಸೋಮಶೇಖರ್‌ ಅವರ ಮನೆಯ ಛಾವಣಿಯ ನೀರನ್ನು ಎರಡು ಇಂಚು ಪೈಪಿನ ಮೂಲಕ 200 ಲೀಟರ್‌ ನೀರಿನ ಡ್ರಮ್‌ಗೆ ಬಿಟ್ಟು ಫಿಲ್ಟರ್‌ ಮಾಡಿ ನೇರವಾಗಿ ಬೋರ್‌ವೆಲ್‌ಗೆ ಬಿಡಲಾಗಿದೆ. ಇದರಿಂದ ಮುಂದಿನ ಬಾರಿ ನೀರಿನ ಸಮಸ್ಯೆ ಬರುವುದಿಲ್ಲ ಎಂಬ ನಂಬಿಕೆ ಇದೆ ಎಂಬುದಾಗಿ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.