ಸಾರ್ವಜನಿಕ ಕೊಳವೆ ಬಾವಿಗೆ ಮಳೆಕೊಯ್ಲು ಮಾಡಿದ ಉಳಾಯಿಬೆಟ್ಟು ಗ್ರಾ.ಪಂ.

'ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Aug 17, 2019, 5:00 AM IST

p-25

ಮಹಾನಗರ: ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ ಸಾರ್ವಜನಿಕ ಕೊಳವೆ ಬಾವಿಯೊಂದನ್ನು ಮಳೆಕೊಯ್ಲು ಮೂಲಕ ಮರು ಪೂರಣಗೊಳಿಸಿ ಇತರೆ ಗ್ರಾಮ ಪಂಚಾಯತ್‌ಗಳಿಗೆ ಮಾದರಿಯಾಗಿದೆ.

ದೋಸ್ತಿ ಕಲಾಕಾರ ಫೆರ್ಮಾಯ್‌ ಹಾಗೂ ಉಳಾಯಿಬೆಟ್ಟು ಗ್ರಾ.ಪಂ. ಸಹಯೋಗದಲ್ಲಿ ಸಾರ್ವಜನಿಕ ಕೊಳವೆ ಬಾವಿಗೆ ಮಳೆಕೊಯ್ಲು ಘಟಕದ ಲೋಕಾರ್ಪಣೆ ಮತ್ತು ಮಾಹಿತಿ ಕಾರ್ಯಕ್ರಮ ಗುರುವಾರ ಪೆರ್ಮಂಕಿಯಲ್ಲಿ ನಡೆಯಿತು.

ಉಳಾಯಿಬೆಟ್ಟು ಗ್ರಾ.ಪಂ.ನ ಅಧ್ಯಕ್ಷ ವಸಂತ್‌ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಳಾಯಿಬೆಟ್ಟು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗುರುಸಿದ್ಧ ಹುಬ್ಬಳ್ಳಿ, ಕಾರ್ಯದರ್ಶಿ ರಾಮಪ್ಪ, ಮಲ್ಲೂರು ಗ್ರಾ.ಪಂ.ನ ಕಾರ್ಯದರ್ಶಿ ರಾಬರ್ಟ್‌ ಫೆರ್ನಾಂಡಿಸ್‌, ರೇಶ್ಮಾ ಮೂಲ್ಯ, ಉದ್ಯಮಿ ಪ್ರಶಾಂತ್‌ ಕುಮಾರ್‌ ಸನಿಲ್, ಫ್ರಾನ್ಸಿಸ್‌ ಕುಟಿನ್ಹಾ ಆಗಮಿಸಿದ್ದರು.

ದಿಶಾ ಟ್ರಸ್ಟ್‌ ಕೈಕಂಬ ಇದರ ನಿರ್ದೇಶಕ ಸಿಲ್ವೆಸ್ಟರ್‌ ಡಿ’ಸೋಜಾ, ಯೋಜನೆಯ ಸಂಯೋಜಕ ಹೆನ್ರಿ ವಾಲ್ಟರ್‌ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ಉಳಾಯಿಬೆಟ್ಟು ಗ್ರಾ.ಪಂ. ಕಾರ್ಯದರ್ಶಿ ರಾಮಪ್ಪ ಕಾರ್ಯಾಗಾರದ ಸಮಗ್ರ ಮಾಹಿತಿಯನ್ನು ನೀಡಿದರು. ದೋಸ್ತಿ ಕಲಾಕಾರ್‌ ಸಂಘದ ಅಧ್ಯಕ್ಷೆ ಪ್ರೀತಿ ಸಲ್ಡಾನ್ಹಾ ಸ್ವಾಗತಸಿದರು.

ಸಂಘದ ಸ್ಥಾಪಕಾಧ್ಯಕ್ಷ ಸಿಲ್ವೆಸ್ಟರ್‌ ಲೋಬೋ ವಂದಿಸಿದರು. ಮಿನೊಲ್ ಬ್ರಾಗ್ಸ್‌ ನಿರೂಪಿಸಿದರು.

ನೀರಿನ ಮಟ್ಟ ಹೆಚ್ಚಳವಾಗಿದೆ
ಎನ್‌ಐಟಿಕೆ ಎಂಜಿನಿಯರಿಂಗ್‌ ಕಾಲೇಜು ಹಿಂಭಾಗದ ನಿವಾಸಿ ಶಿಕ್ಷಕರಾದ ಮನೋಹರ ಭಂಡಾರಿ ಅವರು ತಮ್ಮ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ. ಜೂನ್‌ನಲ್ಲಿ ಮಳೆಕೊಯ್ಲು ಅಳವಡಿಕೆ ಮಾಡಿದ್ದು, ಪ್ರಸ್ತುತ ಬಾವಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದನ್ನು ಮನೆಮಂದಿ ಗಮನಿಸಿದ್ದಾರೆ.

ಮನೋಹರ್‌ ಭಂಡಾರಿ ಅವರ ಮನೆಯ ಬಾವಿಯಲ್ಲಿ ಬೇಸಗೆಯಲ್ಲಿ ನೀರಿನ ಪ್ರಮಾಣ ಸ್ವಲ್ಪ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರಿಗೆ ಅಭಾವ ಎದುರಾಗದಿರಲಿ ಎಂದು ಮುನ್ನೆಚ್ಚರಿಕೆಯಾಗಿ ಅವರು ಮಳೆಕೊಯ್ಲು ಮಾಡಿಕೊಂಡಿದ್ದಾರೆ. ಮಳೆಕೊಯ್ಲು ಅಳವಡಿಸಿದ ಅನಂತರ ಬಾವಿಯಲ್ಲಿ ನೀರಿನ ಮಟ್ಟವೂ ಹೆಚ್ಚಾಗಿದೆ ಎನ್ನುತ್ತಾರೆ ಮನೋಹರ್‌ ಭಂಡಾರಿ.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ

ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸುತ್ತಿದ್ದಾರೆ. ‘ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.