ಮಳಲಿ ನಾಡಾಜೆ: ಬೇಸಗೆಯಲ್ಲಿ ಉಪಯೋಗಕ್ಕಿಲ್ಲದ ಬಾವಿ


Team Udayavani, May 22, 2019, 6:00 AM IST

z-20

ಗುರುಪುರ: ಕೈಕಂಬ ಸಮೀಪದ ಮಳಲಿ ನಾಡಾಜೆ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲೋನಿಗೆ ನೀರುಣಿಸಲು 68 ಸಾವಿರ ರೂ. ಅಂದಾಜು ವೆಚ್ಚದಲ್ಲಿ 2012- 13ನೇ ಸಾಲಿನ ಅನುದಾನದಲ್ಲಿ ತೆರೆದ ಬಾವಿ ಅಭಿವೃದ್ಧಿಗೊಳಿಸಲಾಗಿದ್ದರೂ ಬೇಸಗೆಯಲ್ಲಿ ಒಂದು ತೊಟ್ಟು ನೀರಿಲ್ಲ. ಹೀಗಾಗಿ ಈ ಬಾವಿ ಇದ್ದರೂ ಪ್ರಯೋಜನಕ್ಕಿಲ್ಲದಂತಾಗಿದೆ.

ಬಾವಿಯಲ್ಲಿ ಸಾಕಷ್ಟು ನೀರು ಸಿಗಬೇಕಾದರೆ 35 ಅಡಿ ಆಳ ಕೊರೆಯ ಬೇಕು ಎಂದು ಬಾವಿ ತೋಡುವ ಮುಂಚೆಯೇ ಆಗ್ರಹಿಸಲಾಗಿತ್ತು. ಆದರೆ ಗುತ್ತಿಗೆದಾರರು 25 ಅಡಿ ಆಳ ಕೊರೆದ ಬಳಿಕ ನೀರು ಸಿಕ್ಕಿತ್ತು. ಹೀಗಾಗಿ ಕಾಮಗಾರಿಯನ್ನು ನಿಲ್ಲಿಸಿದ್ದರು. ಆರಂಭದಲ್ಲಿ ವರ್ಷ ಪೂರ್ತಿ ನೀರು ಸಿಗುತ್ತಿತ್ತು. ಆದರೆ ಕ್ರಮೇಣ ಬೇಸಗೆಯಲ್ಲಿ ಬತ್ತಲಾರಂಭಿಸಿತು. ಈ ಹಿನ್ನೆಲೆಯಲ್ಲಿ ಬಾವಿ ರಿಪೇರಿಗೆ ಮನವಿ ಸಲ್ಲಿಸಲಾಗಿದ್ದರೂ ಆಳ ಹೆಚ್ಚಿಸಲಾಗಿಲ್ಲ. ಹೀಗಾಗಿ ಈ ಭಾಗ ದ ಜನರು ನೀರಿನ ಸಮಸ್ಯೆ ಎದುರಿಸುವಂತಾಗಿದೆ. 68 ಸಾವಿರ ರೂ. ಖರ್ಚು ಮಾಡಿದ್ದರೂ ನೀರು ಸಿಗದೇ ಇರುವುದರಿಂದ ಹಣ ಪೋಲು ಮಾಡಿದಂತಾಗಿದೆ ಎನ್ನುತ್ತಾರೆ ಸ್ಥಳೀಯರು.

ಬಾವಿಯ ಆಳವನ್ನು ಹೆಚ್ಚಿಸಬೇಕು ಎಂದು ಪಂಚಾಯತ್‌ಗೆ ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿದ್ದರು. ಆದರೆ ಪಂಚಾಯತ್‌ನಿಂದ ಆಳ ಹೆಚ್ಚಿಸುವ ಭರವಸೆ ನೀಡಿದ್ದರೂ ಚುನಾವಣೆ ನೀತಿ ಸಂಹಿತೆಯಿಂದಾಗಿ ಕೆಲಸಕ್ಕೆ ಮುಂದಾಗಿಲ್ಲ. ಸದ್ಯಕ್ಕೆ ಪಂಚಾಯತ್‌ ವತಿಯಿಂದ ದಿನ ದಲ್ಲಿ ಅರ್ಧ ಒಂದು ಗಂಟೆ ನೀರು ಬರುತ್ತಿದೆ. ಹೀಗಾಗಿ ಸಮಸ್ಯೆ ಗಂಭೀರ ರೂಪ ತಾಳಿಲ್ಲ. ಆದ ರೆ ಇಷ್ಟೆಲ್ಲ ಖರ್ಚು ಮಾಡಿ ಕೊರೆದ ಬಾವಿ ಮಾತ್ರ ಉಪಯೋಗಕ್ಕಿಲ್ಲದಂತಾಗಿದೆ. ಈ ಬಾವಿಯ ಆಳವನ್ನು 10 ಅಡಿ ಹೆಚ್ಚಿಸಿದರೆ ಖಂಡಿತ ನೀರು ಸಿಗಬಹುದು ಎನ್ನುತ್ತಾರೆ ನೀರಿನ ತಜ್ಞರು.

ಅಡುಗೆ ಅನಿಲವೂ ಸಿಕ್ಕಿಲ್ಲ
ಉಜ್ವಲ ಯೋಜನೆಯಡಿಯಲ್ಲಿ ಬಡವರಿಗೆ ಅಡುಗೆ ಅನಿಲ ವಿತರಿಸುವ ಯೋಜನೆ ಜಾರಿಗೊಳಿಸಲಾಗಿದ್ದು, ಅನೇಕ ಮಂದಿಗೆ ಇದರ ಪ್ರಯೋಜನ ಸಿಕ್ಕಿದೆ. ಆದರೆ ಇಲ್ಲಿನ ನಾಲ್ಕು ಮನೆಯವರಿಗೆ ಕಳೆದ ಹಲವಾರು ವರ್ಷಗಳಿಂದ ಒಟ್ಟು ಏಳು ಬಾರಿ ಮನವಿ ಸಲ್ಲಿಸಿದ್ದರೂ  ಅಡುಗೆ ಅನಿಲ ಸಿಕ್ಕಿಲ್ಲ. ಇದರಿಂದ ಇಂದಿಗೂ ಇಲ್ಲಿನ ನಿವಾಸಿಗಳು ಕಟ್ಟಿಗೆಯಿಂದಲೇ ಅಡುಗೆ ಮಾಡುವಂತಾಗಿದೆ. ಹೀಗಾಗಿ ಹೆಚ್ಚಿನ ನೀರಿನ ಬಳ ಕೆಯೂ ಹೆಚ್ಚಾಗಿದೆ.

 ಬಾವಿ ಅಳ ಹೆಚ್ಚಿಸಬೇಕು
ಸಾಕಷ್ಟು ಖರ್ಚು ಮಾಡಿ ಬಾವಿ ತೆರೆದಿದ್ದು ಬೇಸಗೆಯಲ್ಲಿ ನೀರು ಸಿಗುತ್ತಿಲ್ಲ. ಇನ್ನೂ 10 ಅಡಿ ಆಳ ಕೊರೆದರೆ ಖಂಡಿತ ನೀರು ಸಿಗುವ ಸಾಧ್ಯತೆ ಇದೆ. ಬಾವಿ ರಿಪೇರಿಗಾಗಿ ಮನವಿ ಸಲ್ಲಿಸಲಾಗಿದ್ದು, ನೀರು ಅಗತ್ಯವಾಗಿರುವುದರಿಂದ ಅದರ ಆಳ ಹೆಚ್ಚಿಸಲು ಪಂಚಾಯತ್‌ ಕ್ರಮಕೈಗೊಳ್ಳಬೇಕು. ಅಲ್ಲದೆ ನಮ್ಮಲ್ಲಿನ ನಾಲ್ಕು ಮನೆಯವರು 7 ಬಾರಿ ಮನವಿ ಸಲ್ಲಿಸಿದ್ದರೂ ಅಡುಗೆ ಅನಿಲವನ್ನೂ ವಿತರಿಸಿಲ್ಲ.
– ರವಿ ನಾಡಾಜೆ, ಸ್ಥಳೀಯರು

 ಶೀಘ್ರದಲ್ಲೇ ದುರಸ್ತಿ
ಪಂಚಾಯತ್‌ನಲ್ಲಿ ಎಸ್‌ಸಿಎಸ್‌ಟಿ ಫಂಡ್‌ ಮೀಸಲಿರಿಸಲಾಗಿದ್ದು, ಅದರಲ್ಲಿ ಬಾವಿಯ ದುರಸ್ತಿ ಕಾರ್ಯ ನಡೆ ಸ ಲಾ ಗು ವುದು. ಹೀಗೆ ಮೀಸಲಿಟ್ಟ ಹಣವನ್ನು ದಲಿತರ ಅಭಿವೃದ್ಧಿಗೆ ಬಳಸಲಾಗುತ್ತಿದೆ. ಇತ್ತೀಚೆಗೆ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ  ಸಭೆ ಕರೆದು ಕೂಡಲೇ ಬಾವಿಯ ಆಳ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು.
 - ಮಾಲತಿ, ಗಂಜಿಮಠ ಗ್ರಾ. ಪಂ. ಅಧ್ಯಕ್ಷರು

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.