ಆಧುನಿಕ ಭಾರತದ ಹರಿಕಾರ ರಾಜಾರಾಮ್‌ ಮೋಹನ್‌ರಾಯ್‌; ಡಾ| ಪಿ.ಎಸ್‌. ಯಡಪಡಿತ್ತಾಯ

ಮೋಹನ್‌ರಾಯ್‌ ಅವರ ಪ್ರಸ್ತುತತೆ' ವಿಷಯದ ಕುರಿತ 2 ದಿನಗಳ ವಿಚಾರಣ ಸಂಕಿರಣ

Team Udayavani, Jan 31, 2023, 3:16 PM IST

ಆಧುನಿಕ ಭಾರತದ ಹರಿಕಾರ ರಾಜಾರಾಮ್‌ ಮೋಹನ್‌ರಾಯ್‌; ಡಾ| ಪಿ.ಎಸ್‌. ಯಡಪಡಿತ್ತಾಯ

ಕೊಟ್ಟಾರ: ಸ್ವಾತಂತ್ರ್ಯ ಪೂರ್ವದಲ್ಲಿಯೇ ಮಹಿಳೆಯರ ಸ್ವಾಭಿಮಾನಕ್ಕೆ ಪೂರಕವಾಗಿ ಹೋರಾಟ ಮಾಡಿ ಸತಿ ಸಹಗಮನ, ಬಾಲ್ಯ ವಿವಾಹ, ವಿಧವೆಯರಿಗೆ ಸಾಮಾಜಿಕ ಕಾರ್ಯ ಕ್ರಮಗಳಿಂದ ಬಹಿಷ್ಕಾರದಂತಹ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಮಹಿಳಾ ಪರ ಧ್ವನಿ ಎತ್ತಿದ್ದ ರಾಜಾರಾಮ್‌ ಮೋಹನ್‌ ರಾಯ್‌ ಅವರು ಆಧುನಿಕ ಭಾರತದ ಹರಿಕಾರ ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಡಾ| ಪಿ.ಎಸ್‌. ಯಡಪಡಿತ್ತಾಯ ವಿಶ್ಲೇಷಿಸಿದ್ದಾರೆ.

ಕೊಟ್ಟಾರ ಬಳಿಯ ಎ.ಜೆ. ಇನ್‌ ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಪ್ರಾಯೋಜಕತ್ವ ಮತ್ತು ಲಕ್ನೋದ ಅನನ್ಯ ಇನ್‌ಸ್ಟಿಟ್ಯೂಟ್‌ ಫಾರ್‌ ಡೆವಲಪ್‌ ಮೆಂಟ್‌ ರಿಸರ್ಚ್‌ ಆ್ಯಂಡ್‌ ಸೋಶಿಯಲ್‌ ಆ್ಯಕ್ಷನ್‌ ಸಹಭಾಗಿತ್ವದಲ್ಲಿ ಸಮಾಜ ಸುಧಾರಕ ರಾಜಾರಾಮ್‌ ಮೋಹನ್‌ ರಾಯ್‌ ಅವರ 250ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾಗಿರುವ “ನವ ಭಾರತದಲ್ಲಿ ಮಹಿಳಾ ಸಶಕ್ತೀಕರಣ ಮತ್ತು ಪರಿವರ್ತನೆಯಲ್ಲಿ ರಾಜರಾಮ್‌ ಮೋಹನ್‌ರಾಯ್‌ ಅವರ ಪ್ರಸ್ತುತತೆ’ ವಿಷಯದ ಕುರಿತ 2 ದಿನಗಳ ವಿಚಾರಣ ಸಂಕಿರಣದ ಉದ್ಘಾಟನ ಸಮಾರಂಭದಲ್ಲಿ ಅವರು, ವಿಶೇಷ ಸಂಚಿಕೆಯನ್ನು ಅನಾ
ವರಣಗೊಳಿಸಿ ಮಾತನಾಡಿದರು.

ಅಂದಿನ ಕಾಲದಲ್ಲಿಯೇ ಎಲ್ಲ ಧರ್ಮ ಗ್ರಂಥಗಳನ್ನು ಓದಿ ತಿಳಿದುಕೊಂಡಿದ್ದ ರಾಜಾರಾಮ್‌ ಮೋಹನ್‌ರಾಯ್‌ ಅವರು, ಮಾನವೀಯತೆಯನ್ನು ಎತ್ತಿ ಹಿಡಿದವರು. ಭಾರತೀಯ ಸಮಾಜದ ಸುಧಾರಣೆ ಮತ್ತು ಆಧುನೀಕರಣ ಅವರ ಚಿಂತನೆಯಾಗಿದ್ದು, ಇಂದಿಗೂ ನಾವು ಮಾತನಾಡುತ್ತಿರುವ ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಬೇರು ಅವರು ರಚಿಸಿದ ಬ್ರಹ್ಮ ಸಭಾ ಆಗಿದೆ ಎಂದರು.

ಲಕ್ನೋದ ಅನನ್ಯ ಇನ್‌ ಸ್ಟಿಟ್ಯೂಟ್‌ ಫೋರ್‌ ಡೆವಲಪ್‌ಮೆಂಟ್‌ ರಿಸರ್ಚ್‌ ಆ್ಯಂಡ್‌ ಸೋಶಿಯಲ್‌ ಆ್ಯಕ್ಷನ್‌ ನ ನಿರ್ದೇಶಕ ಡಾ| ಅವಧೇಶ್‌ ಕುಮಾರ್‌ ಸಿಂಗ್‌ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಎಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಎ.ಜೆ. ಶೆಟ್ಟಿ ವಹಿಸಿದ್ದರು. ಎ.ಜೆ. ಇನ್‌ ಸ್ಟಿಟ್ಯೂಟ್‌ ಆಫ್ ಮ್ಯಾನೇಂಜ್‌ಮೆಂಟ್‌ನ ನಿರ್ದೇಶಕ ಡಾ| ಟಿ. ಜಯಪ್ರಕಾಶ್‌ ರಾವ್‌ ಸ್ವಾಗತಿಸಿದರು. ಸಂಯೋಜಕಿ ಪ್ರೊ| ಸ್ವಪ್ನಾ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿ ಸಿದರು. ಸಹ ಸಂಯೋಜಕ ಡಾ| ರಾಜೇಶ್‌ ವಂದಿಸಿದರು. ದೀಕ್ಷಾ ರಾವ್‌ ನಿರೂಪಿಸಿದರು.

ಸೌಲಭ್ಯ ಪಡೆಯಲು ಮಹಿಳೆ ಸಮರ್ಥಳಾಗಲಿ
ಮುಖ್ಯ ಅತಿಥಿಯಾಗಿದ್ದ ಮಕ್ಕಳ ಹಕ್ಕುಗಳಿಗಾಗಿನ ವಿಶ್ವ ರಾಯಭಾರಿ ಡಾ| ವನಿತಾ ಎನ್‌. ತೋರ್ವಿ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಯರು ಅನುಭವಿಸುತ್ತಿದ್ದ ದೌರ್ಜನ್ಯ, ನೋವು, ಅಸಮಾನತೆಯ ಪರಿಸ್ಥಿತಿ ಇಂದು ಭಿನ್ನವಾಗಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ, ಅಪರಾಧ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿಲ್ಲದಿರುವುದು ದೌರ್ಭಾಗ್ಯ. ಹಾಗಿದ್ದರೂ ಮಹಿಳೆಯರು ತಮ್ಮನ್ನು ಅಬಲೆಯರು ಎಂದು ತಿಳಿಯದೆ ತಮಗೆ ಸರಕಾರ, ಸಮಾಜದಿಂದ ದೊರೆಯುವ ಸೌಲಭ್ಯ, ಹಕ್ಕನ್ನು ಪಡೆಯುವಲ್ಲಿ ಸಮರ್ಥಳಾಗಬೇಕು ಎಂದರು.

ಟಾಪ್ ನ್ಯೂಸ್

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

narendra nayak

ವಿಚಾರವಾದಿ ನರೇಂದ್ರ ನಾಯಕ್‌ ಗನ್‌ಮ್ಯಾನ್‌ ಹಿಂಪಡೆತ

drejjing

ಆದ್ಯಪಾಡಿ, ಶಂಭೂರು ಡ್ಯಾಂನಿಂದ ಹೂಳೆತ್ತುವುದಕ್ಕೆ ತಡೆ

police siren

88.22 ಕೋ.ರೂ. ನಷ್ಟ: ಬ್ಯಾಂಕ್‌ ಮುಖ್ಯಸ್ಥರಿಂದ ದೂರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ