![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬಜಪೆ: ಹೈಟೆಕ್ ಬಸ್ ನಿಲ್ದಾಣ, ಮಾರುಕಟ್ಟೆಗೆ ಸಿದ್ಧತೆ
90 ಲ. ರೂ.ವೆಚ್ಚದ ನಗರೋತ್ಥಾನ ಯೋಜನೆ
Team Udayavani, Dec 9, 2022, 11:39 AM IST
![9](https://www.udayavani.com/wp-content/uploads/2022/12/9-6-620x372.jpg)
ಬಜಪೆ: ಬಜಪೆ ಬಸ್ ನಿಲ್ದಾಣಕ್ಕೆ ಹೈಟೆಕ್ ರೂಪವನ್ನು ನೀಡಲು ಬಜಪೆ ಪಟ್ಟಣ ಪಂಚಾಯತ್ ಸಿದ್ಧತೆ ನಡೆಸುತ್ತಿದೆ. ಬಜಪೆ ಪಟ್ಟಣ ಪಂಚಾಯತ್ ಈಗಾಗಲೇ ನಗರೋತ್ಥಾನ ಯೋಜನೆಯಡಿಯಲ್ಲಿ 90 ಲಕ್ಷ ರೂ.ಮೀಸಲು ಇಟ್ಟಿದೆ. ಹೈಟೆಕ್ ಬಸ್ ನಿಲ್ದಾಣದ ಜತೆ ಮಾರುಕಟ್ಟೆಯನ್ನು ಕೂಡ ನಿರ್ಮಾಣ ಮಾಡುವ ಯೋಜನೆಯನ್ನು ಹಾಕಿಕೊಂಡಿದೆ. ಪೊದೆ, ಗಿಡಗಂಟಿಗಳಿಂದ ತುಂಬಿದ್ದ ಜಾಗವನ್ನು ಗುರುವಾರದದಿಂದ ಸ್ವಚ್ಛಗೊಳಿಸುವ ಕಾರ್ಯ ಆರಂಭವಾಗಿದೆ.
ಹೈಟೆಕ್ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ
2011-12ರಲ್ಲಿ ಬಜಪೆ ಗ್ರಾ.ಪಂ.ಆಗಿದ್ದ ಸಂದರ್ಭದಲ್ಲಿ ಇಲ್ಲಿ ಬಸ್ ನಿಲ್ದಾಣ ಮತ್ತು ವಾಣಿಜ್ಯ ಕಟ್ಟಡಕ್ಕೆಂದು ಸುಮಾರು 12ಲಕ್ಷ ರೂ. ಅನುದಾನ ವ್ಯಯಿಸಲಾ ಗಿತ್ತು. ಅನಂತರ ಕಾರಣಾಂತರಗಳಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಆಗ ಕಟ್ಟಡದ ಪ್ಲಿಂಟ್ ಹಾಗೂ ಬೀಮ್ಗಳ ಕಾಮಗಾರಿ ನಡೆದಿತ್ತು.
ತಜ್ಞರಿಂದ ಸಾಮಾರ್ಥ್ಯ ಪರೀಕ್ಷೆ
ಈ ಹಿಂದೆ ನಡೆದಿದ್ದ ವ್ಯಾಣಿಜ್ಯ ಕಟ್ಟಡ ಕಾಮಗಾರಿಯ ಪ್ಲಿಂಟ್, ಬೀಮ್ ಹಾಗೂ ಸರಳುಗಳ ಸಾಮರ್ಥ್ಯ ಪರೀಕ್ಷೆಯನ್ನು ತಜ್ಞರು ಮಾಡಲಿದ್ದಾರೆ. ಆ ಬಳಿಕವೇ ಈ ಕಟ್ಟಡದ ರೂಪುರೇಷೆ ಹಾಕಲಾಗುತ್ತದೆ. ಬಸ್ ನಿಲ್ದಾಣ ಈ ಕಟ್ಟಡಲ್ಲಿಯೇ ನಿರ್ಮಾಣವಾಗಲಿದೆ. ರಾಜ್ಯ ಹೆದ್ದಾರಿ ಅಗಲೀಕರಣದಿಂದ ಈಗಿನ ಬಸ್ ನಿಲ್ದಾಣದಲ್ಲಿ ಜಾಗದ ಸಮಸ್ಯೆ ಬರುವ ಸಾಧ್ಯತೆಗಳು ಇರುವ ಕಾರಣ ಅದನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗುತ್ತದೆ.
ಹಂತ ಹಂತ ಕಟ್ಟಡ ನಿರ್ಮಾಣ
ವಾಣಿಜ್ಯ ಮಾರುಕಟ್ಟೆ ಹಾಗೂ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗಳು ಹಂತಹಂತವಾಗಿ ನಡೆಯಲಿವೆ. ನೆಲಮಹಡಿ ಕಾಮಗಾರಿ ಮೊದಲು ನಡೆಯಲಿದೆ. ಬಳಿಕ ಮೇಲಂತಸ್ತು ಕಾಮಗಾರಿಗಳು ನಡೆಯಲಿದೆ. ಹೈಟೆಕ್ ಬಸ್ ನಿಲ್ದಾಣ ಹಾಗೂ ಮಾರುಕಟ್ಟೆ ನಿರ್ಮಾಣ ಬಜಪೆ ಪೇಟೆಗೆ ಹೊಸಮೆರಗು ನೀಡಲಿದೆ.
ಮೂಲ ಸೌಕರ್ಯಗಳಿಗೆ ಆದ್ಯತೆ
ಹೈಟೆಕ್ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯಗಳಾದ ನೀರಿನ ವ್ಯವಸ್ಥೆ, ಕೈತೊಳೆಯುವ ಬೇಸಿನ್, ಮಹಿಳೆಯರಿಗೆ ಪ್ರತ್ಯೇಕ ಕೊಠಡಿ, ಏಜೆಂಟ್ ಹಾಗೂ ಟೈಮರ್ಗಳಿಗೆ ಕೊಠಡಿ, ಶೌಚಾಲಯದ ವ್ಯವಸ್ಥೆಯ ಬಗ್ಗೆ ಚಿಂತಿಸಲಾಗಿದೆ.
-ಸುಬ್ರಾಯ ನಾಯಕ್ ಎಕ್ಕಾರು
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.