ಅಭಿವೃದ್ಧಿ ಕಾರ್ಯದ ಮುಕ್ತ ಚರ್ಚೆಗೆ ಸಿದ್ಧ: ವಿಷ್ಣುನಾಥನ್‌


Team Udayavani, Sep 26, 2017, 10:00 AM IST

26-STATE-27.jpg

ಮಂಗಳೂರು: ರಾಜ್ಯದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ಆಡಳಿತದ ಸಂದರ್ಭದಲ್ಲಿ ಮಾಡಿರುವ ಹತ್ತಾರು ಅಭಿವೃದ್ಧಿ ಕಾರ್ಯ ಚಟುವಟಿಕೆ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಲು ಕಾಂಗ್ರೆಸ್‌ ಯಾವತ್ತಿಗೂ ಸಿದ್ಧವಿದೆ. ಕಾಂಗ್ರೆಸ್‌ ನಡೆಸಿದ ಅಭಿವೃದ್ಧಿ ದಾಖಲೆಯನ್ನು ಸಮಗ್ರವಾಗಿ ಜನರ ಮುಂದಿಡಲು ನಾವು ಯಾವುದೇ ಕ್ಷಣ ಹಾಗೂ ಯಾವುದೇ ಸ್ಥಳದಲ್ಲಿ ತಯಾರಿ ದ್ದೇವೆ. ಇದನ್ನು ಆಹ್ವಾನ ಎಂದು ಬಿಜೆಪಿ ಯವರು ತಿಳಿದುಕೊಳ್ಳಲಿ ಎಂದು ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥನ್‌ ಹೇಳಿದರು. 

ಮಂಗಳೂರು ದಕ್ಷಿಣ ಕಾಂಗ್ರೆಸ್‌ ಹಾಗೂ ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಆಶ್ರಯದಲ್ಲಿ ಸೋಮವಾರ ಮಂಗಳೂರು ಪುರಭವನದಲ್ಲಿ ಆಯೋಜಿಸಲಾದ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಮಾದರಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಮಾತನಾಡಿ, ನರೇಂದ್ರ ಮೋದಿಯವರು ಏನೋ ಮಾಡು ತ್ತಾರೆ ಎಂದು ಜನ ಭಾವಿಸಿದ್ದರು; ಆದರೆ ಏನೂ ಮಾಡಿಲ್ಲ ಎಂಬುದು ಈಗ ಎಲ್ಲರ ಅರಿವಿಗೆ ಬಂದಿದೆ. ದೇಶದಲ್ಲಿ ಅಸಹಿಷ್ಣುತೆ, ಭಯದ ವಾತಾವರಣ ನೆಲೆಗೊಳ್ಳುವಂತಾಗಿದೆ. ಅತೀ ಹೆಚ್ಚು ಬಂಡವಾಳ ಹೂಡಿಕೆಯಲ್ಲಿ, ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕವೇ ನಂ. 1 ಆಗಿದೆ. ಹೀಗಾಗಿ ದೇಶಕ್ಕೆ ಕರ್ನಾಟಕದ ಅಭಿವೃದ್ಧಿಯೇ ಮಾದರಿ ಎಂಬುದು ಸ್ಪಷ್ಟವಾಗುತ್ತದೆ ಎಂದರು. 

“ನಮೋ’ = ನಂಬಿಕೆಗೆ ಮೋಸ ಮಾಡಿದವರು: ರೈ
ಸಚಿವ ಬಿ. ರಮಾನಾಥ ರೈ ಮಾತನಾಡಿ, “ಕಾಂಗ್ರೆಸ್‌ ಆಡಳಿತದ ಸಂದರ್ಭದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯ ಆಗಬೇಕು. ಇತರರು ನಮ್ಮ ಬಗ್ಗೆ ಏನೇ ಅಂದರೂ ನಾವು ಗಮನಹರಿಸದೆ ಅಭಿವೃದ್ಧಿಯ ವಿವರವನ್ನು ಜನರಿಗೆ ತಿಳಿಸಬೇಕು ಎಂದರು, ಪ್ರಸ್ತುತ ನಮೋ ಎಂದು ಹೇಳುವವರು ಕೆಲವರಿದ್ದಾರೆ. ನಮೋ ಬ್ರಿಗೇಡ್‌ ಹುಟ್ಟಿಕೊಂಡಿದೆ. ನಿಜಕ್ಕೂ ನಮೋ ಅಂದರೆ ನಂಬಿಕೆಗೆ ಮೋಸ ಮಾಡಿದವರು ಎಂಬ  ಅರ್ಥ’ ಎಂದರು.

ಶಾಸಕ ಅಭಯಚಂದ್ರ ಜೈನ್‌, ವಿಧಾನ ಪರಿಷತ್‌ ಮುಖ್ಯಸಚೇತಕ ಐವನ್‌ ಡಿ’ಸೋಜಾ, ಕಾಂಗ್ರೆಸ್‌ ಪ್ರಮುಖರಾದ ಸಲಿಂ ಅಹಮ್ಮದ್‌, ವಿಟ್ಟು ಚಂಗಪ್ಪ, ಅರುಣ್‌ ಮಾಚಯ್ಯ, ಪಿ.ವಿ. ಮೋಹನ್‌, ಸುರೇಶ್‌ ಬಳ್ಳಾಲ್‌, ಮಮತಾ ಡಿ.ಎಸ್‌. ಗಟ್ಟಿ, ರಜನೀಶ್‌, ಶಶಿಧರ ಹೆಗ್ಡೆ, ಮಹಮ್ಮದ್‌ ಮೋನು, ಮಿಥುನ್‌ ರೈ, ಕಳ್ಳಿಗೆ ತಾರಾನಾಥ ಶೆಟ್ಟಿ, ನವೀನ್‌ ಡಿ’ಸೋಜಾ, ಶಶಿರಾಜ್‌ ಅಂಬಟ್‌, ಬಿ.ಎಚ್‌. ಖಾದರ್‌, ಇಬ್ರಾಹಿಂ ಕೋಡಿಜಾಲ್‌, ಶಾಲೆಟ್‌ ಪಿಂಟೋ, ಅಪ್ಪಿ, ಮನೋಹರ ಶೆಟ್ಟಿ, ಎ.ಸಿ. ವಿನಯ್‌ರಾಜ್‌, ಪ್ರತಿಭಾ ಕುಳಾç ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.  ಶಾಸಕ ಜೆ.ಆರ್‌. ಲೋಬೋ ಸ್ವಾಗತಿಸಿದರು. ರೋಹಿತ್‌ ಉಳ್ಳಾಲ ಕಾರ್ಯಕ್ರಮ ನಿರೂಪಿಸಿದರು.

ಸಿದ್ದರಾಮಯ್ಯ V/s ಮೋದಿ
ಮನೆ ಮನೆಗೆ ಕಾಂಗ್ರೆಸ್‌ ಸಾಧನೆಗಳನ್ನು ಬಿತ್ತರಿಸುವ ನೆಲೆಯಲ್ಲಿ ಬ್ಲಾಕ್‌ ಹಾಗೂ ಬೂತ್‌ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರು ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಹಲವು ಭಾಗ್ಯಗಳನ್ನು ನೀಡುವ ಮೂಲಕ ಸಿದ್ದರಾಮಯ್ಯ ಆಡಳಿತ ಜನಪರವಾಗಿ ಕಾರ್ಯನಿರ್ವಹಿಸಿದೆ. ಪ್ರಣಾಳಿಕೆಯಲ್ಲಿ ತಿಳಿಸಿದ 165 ಭರವಸೆಗಳ ಪೈಕಿ 155ನ್ನು ಪೂರೈಸುವ ಮೂಲಕ ನುಡಿದಂತೆ ನಮ್ಮ ಸರಕಾರ ನಡೆದಿದೆ. ಹೀಗಾಗಿ ನುಡಿದಂತೆ ನಡೆದ ಸಿದ್ದರಾಮಯ್ಯ ಅವರು ಉತ್ತಮರಾಗಿದ್ದಾರೆ. ಆದರೆ ಕಪ್ಪು ಹಣ ವಾಪಸ್‌ ತರುತ್ತೇವೆ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ನೀಡುತ್ತೇವೆ ಎಂದು ಹಣವೂ ನೀಡದೆ ಈಗ ಪೆಟ್ರೋಲ್‌ ಬೆಲೆ ಏರಿಕೆ, ಉದ್ಯೋಗವನ್ನು ಸೃಷ್ಟಿಸದ ನರೇಂದ್ರ ಮೋದಿಯವರು ಹೇಳಿದಂತೆ ನಡೆಯಲಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಆಡಿಯೂ ಮಾಡದವ ಅಧಮ ಎಂಬ ಮಾತು ಚಾಲ್ತಿಯಲ್ಲಿದೆ ವಿಷ್ಣುನಾಥನ್‌ ಎಂದರು.

ಮೋದಿಯಿಂದ ಅಭಿವೃದ್ಧಿಯ ಟಯರ್‌ ಪಂಚರ್‌ !
ದಿನೇಶ್‌ ಗುಂಡೂರಾವ್‌ ಮಾತನಾಡಿ, ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಕಾಲದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಸಾಧನೆಯ ಗೆರೆಯನ್ನು ಕಂಡಿತ್ತು. ಆದರೆ ಮೋದಿ ಬಂದ ತತ್‌ಕ್ಷಣ ರಾತೋರಾತ್ರಿ ಹಣ ಅಪಮೌಲ್ಯಗೊಳಿಸಿ, ವೇಗವಾಗಿ ಓಡುತ್ತಿದ್ದ ವಾಹನದ ಟಯರ್‌ ಪಂಚರ್‌ ಮಾಡಿದ್ದಾರೆ. ಹಣ ಅಪನಗದೀಕರಣ ಮಾಡುವಾಗಲೇ ಮನಮೋಹನ್‌ ಸಿಂಗ್‌ ಅವರು ಸಂಸತ್‌ನಲ್ಲಿ ಮಾತನಾಡಿ, ಈ ಕಾರಣದಿಂದ ಶೇ. 2ರಷ್ಟು ಜಿಡಿಪಿ ದರ ಕುಗ್ಗಲಿದೆ ಎಂಬ ಸೂಚನೆಯನ್ನು ನೀಡಿದ್ದರು. ಪ್ರಸ್ತುತ ಅವರು ಹೇಳಿದಂತೆಯೇ ಆಗಿದೆ. ಅರುಣ್‌ ಜೇಟ್ಲಿ ಅವರಿಗೆ ಈಗ ಏನು ಮಾಡಬೇಕು ಎಂದು ತೋಚದೆ ಪರದಾಡುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಬಿಜೆಪಿಯವರಿಗೆ ಯಡಿಯೂರಪ್ಪ ಅವರು ಇದ್ದರೂ ಕಷ್ಟ ಇಲ್ಲದಿದ್ದರೂ ಕಷ್ಟ ಎಂಬ ಪರಿಸ್ಥಿತಿಯಾಗಿದೆ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.