ಅರಬ್‌ ದೇಶಗಳಿಂದ ಕರಾವಳಿಗೆ ವಾಪಸು; 6,533 ಮಂದಿಯಲ್ಲಿ 435 ಪ್ರಯಾಣಿಕರಿಗೆ ಕೋವಿಡ್ ದೃಢ

ಎರಡೂವರೆ ತಿಂಗಳಲ್ಲಿ 40 ವಿಮಾನ ಆಗಮನ ; ಬಂದವರನ್ನು ಕ್ವಾರಂಟೈನ್‌ ಮಾಡಲಾಗಿದೆ

Team Udayavani, Jul 24, 2020, 1:21 PM IST

ಅರಬ್‌ ದೇಶಗಳಿಂದ ಕರಾವಳಿಗೆ ವಾಪಸು; 6,533 ಮಂದಿಯಲ್ಲಿ 435 ಪ್ರಯಾಣಿಕರಿಗೆ ಕೋವಿಡ್ ದೃಢ

ಸಾಂದರ್ಭಿಕ ಚಿತ್ರ

ಮಹಾನಗರ: ಕೋವಿಡ್ ಲಾಕ್‌ಡೌನ್‌ನಿಂದಾಗಿ ಎಪ್ರಿಲ್‌ನಲ್ಲಿ ದೈನಂದಿನ ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಂಡ ಬಳಿಕ ಮಧ್ಯ ಪ್ರಾಚ್ಯದ ಅರಬ್‌ ದೇಶಗಳಲ್ಲಿ ಸಿಲುಕಿದ್ದ ರಾಜ್ಯದ ಕರಾವಳಿ ಕನ್ನಡಿಗರನ್ನು ವಾಪಸ್‌ ಕರೆ ತರುವ ಕೇಂದ್ರ ಸರಕಾರದ “ವಂದೇ ಭಾರತ್‌ ಮಿಶನ್‌’ ಮತ್ತು ಖಾಸಗಿ ವೈಮಾನಿಕ ಸೇವೆಯಡಿ ಸುಮಾರು ಎರಡೂವರೆ ತಿಂಗಳಲ್ಲಿ ಮಂಗಳೂರಿಗೆ 40 ವಿಮಾನಗಳು ಬಂದಿದ್ದು, ಒಟ್ಟು 6,533 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ.

ಸೌದಿ ಅರೇಬಿಯಾ, ದುಬಾೖ, ಕುವೈಟ್‌ ಸಹಿತ ಹಲವು ಕೊಲ್ಲಿ ದೇಶಗಳಿಂದ ಮೇ 12ರಿಂದ ಜು. 22ರ ತನಕ ಸಾವಿರಾರು ಮಂದಿ ತಾಯ್ನಾಡಿಗೆ ವಾಪಾಸಾಗಿದ್ದಾರೆ. ಈ ರೀತಿ ವಿದೇಶದಿಂದ ಬಂದ ಈ ಪ್ರಯಾಣಿಕರ ಪೈಕಿ (ಜು. 16ರ ತನಕ) 435 ಮಂದಿಯ ವರದಿ ಕೋವಿಡ್ ಪಾಸಿಟಿವ್‌ ಬಂದಿದೆ. ಜು. 21, 22ರಂದು ಮಸ್ಕತ್‌ನಿಂದ ಆಗಮಿಸಿದ 2 ವಿಮಾನಗಳಲ್ಲಿ ಬಂದಿಳಿದ 286 ಪ್ರಯಾಣಿಕರ ವರದಿ ಇನ್ನಷ್ಟೇ ಬರಬೇಕಾಗಿದೆ.

ಮೇ 12ರಿಂದ ಜುಲೈ 22ರ ವರೆಗಿನ ಎರಡೂವರೆ ತಿಂಗಳುಗಳ ಅವಧಿಯಲ್ಲಿ ಮಂಗಳೂರಿಗೆ ದುಬಾೖ, ಸೌದಿ ಮತ್ತು ಮಸ್ಕತ್‌ಗಳಿಂದ ಗರಿಷ್ಠ ಸಂಖ್ಯೆಯ ಕನ್ನಡಿಗರು ತಾಯ್ನಾಡಿಗೆ ಮರಳಿ ಬಂದಿದ್ದಾರೆ. ದುಬಾೖಯಿಂದ 17 ವಿಮಾನಗಳು ಬಂದರೆ, ಸೌದಿ ಅರೇಬಿಯಾ, ಮಸ್ಕತ್‌ನಿಂದ ತಲಾ 7, ಕುವೈಟ್‌, ದೋಹಾ- ಕತಾರ್‌, ಶಾರ್ಜಾಗಳಿಂದ ತಲಾ 2, ಅಬುಧಾಬಿ, ದಮಾಮ್‌, ಬಹ್ರೈನ್‌ ದೇಶಗಳಿಂದ ತಲಾ 1 ವಿಮಾನ ಬಂದಿದೆ. ಈ ಎಲ್ಲ ವಿಮಾನಗಳಲ್ಲಿ ಬಂದ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈ ಪ್ರಯಾಣಿಕರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ, ನೆರೆಯ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಕೇರಳದ ಕಾಸರಗೋಡಿನವರೂ ಇದ್ದರು. ಪ್ರಾರಂಭಿಕ ಹಂತದಲ್ಲಿ ಬೇರೆ ಜಿಲ್ಲೆಯವರನ್ನೂ ಮಂಗಳೂರಿನಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿದ್ದರೂ ಕ್ರಮೇಣ ದಕ್ಷಿಣ ಕನ್ನಡದವರನ್ನು ಹೊರತುಪಡಿಸಿ ಇತರ ಜಿಲ್ಲೆಗಳ ಪ್ರಯಾಣಿಕರನ್ನು ಅವರವರ ಜಿಲ್ಲೆಗಳಲ್ಲಿಯೇ ಕ್ವಾರಂಟೈನ್‌ಗೆ ಕಳುಹಿಸಲಾಗಿತ್ತು. ವಿಮಾನದಿಂದ ಇಳಿಯುವಾಗಲೇ ಪಾಸಿಟಿವ್‌ ಬಂದವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು.

2 ವಿಮಾನಗಳಲ್ಲಿ ಯಾರೂ ಪಾಸಿಟಿವ್‌ ಇಲ್ಲ
ದುಬಾೖಯಿಂದ ಮೇ 20ರಂದು ಬಂದ 63 ಜನರ ಪೈಕಿ ಮತ್ತು ಜೂನ್‌ 18ರಂದು ಬಂದ 9 ಮಂದಿಯ ಪೈಕಿ ಯಾರೊಬ್ಬರಲ್ಲೂ ಪಾಸಿಟಿವ್‌ ಲಕ್ಷಣಗಳಿರಲಿಲ್ಲ.  ಪ್ರಾರಂಭದಲ್ಲಿ ಜಿಲ್ಲೆಗೆ ವಿದೇಶದಿಂದ ಬಂದವರಲ್ಲಿ ಮಾತ್ರ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದರೂ ಕ್ರಮೇಣ ಮತ್ತು ಇತ್ತೀಚಿನ ದಿನಗಳಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಹಾಗೂ ಪ್ರಾಥಮಿಕ ಸಂಪರ್ಕದ ಪ್ರಕರಣಗಳು ಹೆಚ್ಚು ಕಂಡು ಬರುತ್ತಿವೆ. ಬಹಳಷ್ಟು ಪಾಸಿಟಿವ್‌ ಪ್ರಕರಣಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದ ಪರಿಸ್ಥಿತಿ ಇದೆ.

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.