ಹಗಲು ಹೊತ್ತು ರಸ್ತೆ ಕಾಮಗಾರಿ


Team Udayavani, Feb 8, 2018, 1:48 PM IST

8-Feb-12.jpg

ಮಹಾನಗರ : ನಗರ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಬೆಳಗ್ಗೆ ಮಧ್ಯಾಹ್ನ ಸಂಜೆ ವಾಹನಗಳ ದಟ್ಟಣೆ ಅಧಿಕವಾಗಿ ಸಂಚಾರ ಅಸ್ತವ್ಯವಸ್ಥಗೊಳ್ಳುತ್ತಿರುವ ಸಂಗತಿ ಘಟಿಸುತ್ತಲೇ ಇದೆ. ಇದಕ್ಕೆ ಸೇರ್ಪಡೆ ಎಂಬಂತೆ, ಮಂಗಳೂರು ಪಾಲಿಕೆ ಆಯೋಜಿತ ರಸ್ತೆ ಕಾಮಗಾರಿಯನ್ನು ಬೆಳಗ್ಗೆ ಮಾಡುವ ಮೂಲಕ ವಾಹನ ದಟ್ಟಣೆ ಉಂಟಾಗಿ ಸುಮಾರು ಹೊತ್ತು ವಾಹನಗಳು ರಸ್ತೆಯಲ್ಲಿಯೇ ಬಾಕಿಯಾದ ಘಟನೆ ಬುಧವಾರ ಕಂಕನಾಡಿಯಲ್ಲಿ ಸಂಭವಿಸಿದೆ.

ಕಂಕನಾಡಿಯ ಕರಾವಳಿ ವೃತ್ತದಿಂದ ಬೆಂದೂರ್‌ವೆಲ್‌ ವರೆಗೆ ರಸ್ತೆ ಹೊಂಡ ಗುಂಡಿ ಸರಿಪಡಿಸುವ ಉದ್ದೇಶದಿಂದ ಹಾಗೂ ಪ್ರಯಾಣಿಕರಿಗೆ ನೆರವಾಗುವ ಉದ್ದೇಶದಿಂದ ಸಂಪೂರ್ಣ ಡಾಮರು ಕಾಮಗಾರಿಗೆ ಪಾಲಿಕೆ ನಿರ್ಧರಿಸಿತ್ತು. ಇದರಿಂದ ಕರಾವಳಿ ವೃತ್ತದಿಂದ ಬುಧವಾರ ಬೆಳಗ್ಗೆ ಕಾಮಗಾರಿ ಆರಂಭಿಸಲಾಗಿತ್ತು.

ಒಂದು ಬದಿಯಿಂದ ಕಾಮಗಾರಿ ನಡೆಯುತ್ತಿದ್ದರೆ, ಇನ್ನೊಂದು ಬದಿಯಿಂದ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಕಂನಾಡಿ ಕರಾವಳಿ ವೃತ್ತಕ್ಕೆ ಪಂಪ್‌ವೆಲ್‌ ಹಾಗೂ ವೆಲೆನ್ಸಿಯಾ ಭಾಗದಿಂದ ವಾಹನಗಳು
ಪ್ರವೇಶಿಸುವ ಕಾರಣ ಇಲ್ಲಿ ವಾಹನದಟ್ಟಣೆ ಉಂಟಾಗಿ ವಾಹನಗಳೆಲ್ಲ ಸಾಲುಗಟ್ಟಲೆ ರಸ್ತೆಯಲ್ಲಿಯೇ ನಿಲ್ಲುವಂತಾಯಿತು. ಪಂಪ್‌ವೆಲ್‌ವರೆಗೆ ವಾಹನಗಳು ಸಂಚರಿಸದೆ ರಸ್ತೆಯಲ್ಲೇ ಬಾಕಿಯಾದವು.

ವಿದ್ಯಾರ್ಥಿ, ಉದ್ಯೋಗಿಗಳಿಗೆ ಸಂಕಷ್ಟ
ಪ್ರಯಾಣಿಕರ ದೃಷ್ಟಿಯಿಂದ ಕಂಕನಾಡಿಯಲ್ಲಿ ಕಾಮಗಾರಿ ಮಾಡಿರುವುದು ಉಪಯೋಗವಾದರೆ, ಕಾಮಗಾರಿಯ ನೆಪದಲ್ಲಿ ರಸ್ತೆ ತಡೆಗೆ ಕಾರಣವಾಗುವುದು ಎಷ್ಟು ಸರಿ? ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬಂದಿದೆ. ಬೆಳಗ್ಗಿನ ಸಮಯ ಉದ್ಯೋಗ, ಶಾಲೆ, ಕಾಲೇಜುಗಳಿಗೆ ತೆರಳುವವರು ಕಾಮಗಾರಿಯ ಹಿನ್ನೆಲೆಯಲ್ಲಿ ಕೆಲವು ಹೊತ್ತು ಕಂಕನಾಡಿ ವ್ಯಾಪ್ತಿಯ ಬ್ಲಾಕ್‌ನಲ್ಲಿ ಬಾಕಿಯಾಗಿದ್ದರು.

ಕಂಕನಾಡಿ ಪಂಪ್‌ ವೆಲ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಕೆಲವು ಬಾರಿ ನಡೆದಿದೆ. ಸಣ್ಣ ವಾಹನವು ರಿಪೇರಿಗೆಂದು ರಸ್ತೆ ಬದಿ ನಿಂತರೂ ಇಲ್ಲಿ ವಾಹನಗಳ ಸರತಿ ಸಾಲು ಉದ್ದವಿರುತ್ತದೆ. ಕರಾವಳಿ ವೃತ್ತ ಸಮೀಪ ಅಲ್ಲಲ್ಲಿ ಹೊಂಡಗುಂಡಿಗಳಿದ್ದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಈ ಹಿಂದೆ ರಿಪೇರಿ ಮಾಡುವ ಕಾಲದಲ್ಲೂ ಹಲವು ಬಾರಿ ಸಂಚಾರದಟ್ಟಣೆ ಸಮಸ್ಯೆ ಎದುರಾಗಿತ್ತು.

ರಾತ್ರಿ ವೇಳೆ ಕಾಮಗಾರಿ ನಡೆಸಿ
ಹಗಲು ಹೊತ್ತಿನಲ್ಲಿ ಇಂತಹ ಅಗತ್ಯ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳುವ ಬದಲು ರಾತ್ರಿ ಸಮಯದಲ್ಲಿ ಇದರ ಕಾಮಗಾರಿ ಕೈಗೊಂಡರೆ, ವಾಹನಗಳ ಸಂಚಾರಕ್ಕೆ ತಡೆ ಉಂಟಾಗುವುದು ಕಡಿಮೆ ಆಗಬಹುದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.