ಮನೆಗಳಿಗೆ ನುಗ್ಗುತ್ತಿರುವ ನೀರು; ಸ್ಥಳೀಯ ಜನರಿಗೆ ಸಂಕಷ್ಟ

ಹೊಯಿಗೆ ಬಜಾರ್‌: ಅಸಮರ್ಪಕ ಚರಂಡಿ ವ್ಯವಸ್ಥೆ

Team Udayavani, Jun 23, 2020, 5:35 AM IST

ಮನೆಗಳಿಗೆ ನುಗ್ಗುತ್ತಿರುವ ನೀರು; ಸ್ಥಳೀಯ ಜನರಿಗೆ ಸಂಕಷ್ಟ

ಮಹಾನಗರ: ನಗರದ ಹೊಯಿಗೆ ಬಜಾರ್‌ ಪ್ರದೇಶದ ರಸ್ತೆಗೆ ಕಾಂಕ್ರೀಟ್‌ ಹಾಕಿ ಅಭಿವೃದ್ಧಿಪಡಿಸಲಾಗಿದ್ದು, ಚರಂಡಿ ವ್ಯವಸ್ಥೆಯನ್ನು ಅದಕ್ಕನುಗುಣವಾಗಿ ನಿರ್ವಹಣೆ ಮಾಡದ ಕಾರಣ ಮಳೆ ಬಂದಾಗ ರಸ್ತೆ ಮತ್ತು ಚರಂಡಿಯ ನೀರು ರಸ್ತೆ ಬದಿಯ ಮನೆಗಳಿಗೆ ನುಗ್ಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ರಸ್ತೆಗೆ 12 ಇಂಚು ದಪ್ಪದ ಕಾಂಕ್ರೀಟ್‌ ಹಾಕಲಾಗಿದೆ. ಹೀಗಾಗಿ ರಸ್ತೆಯು ಚರಂಡಿ ಹಾಗೂ ರಸ್ತೆಯ ಇಕ್ಕೆಲ ಗಳಲ್ಲಿರುವ ಮನೆಗಳಿಗಿಂತ ಎತ್ತರದಲ್ಲಿದೆ. ರಸ್ತೆಯ ನೀರು ಚರಂಡಿಗೆ ಹರಿಯುತ್ತಿದ್ದರೂ ಚರಂಡಿಯ ಮೂಲಕ ಅದು ಮುಂದಕ್ಕೆ ಹರಿದು ರಾಜ ಕಾಲುವೆಗೆ ಸೇರಲು ಅನುವು ಮಾಡಿ ಕೊಟ್ಟಿಲ್ಲ. ಹಾಗಾಗಿ ನೀರು ಚರಂಡಿಯಲ್ಲಿಯೇ ತುಂಬಿ ತುಳುಕಿ ರಸ್ತೆಯ ಎರಡೂ ಬದಿಗಳಲ್ಲಿರುವ ಮನೆಗಳ ಆವರಣಕ್ಕೆ ನುಗ್ಗುತ್ತಿದೆ. ಇದರಿಂದಾಗಿ ರಸ್ತೆ ಬದಿಯ ತಾಜ್ಯ, ಕಲ್ಲು, ಮಣ್ಣು ಇತ್ಯಾದಿ ಮನೆಗಳ ಆವರಣದಲ್ಲಿ ಸೇರುತ್ತಿವೆ.

ಹೊಯಿಗೆ ಬಜಾರ್‌ ರೈಲ್ವೇ ಕ್ರಾಸಿಂಗ್‌ ಬಳಿ ಟೈಲ್ಸ್‌ ಸಂಸ್ಥೆಯ ಸಮೀಪ ರಸ್ತೆಯ ಚರಂಡಿಯ ಮೇಲೆ ಹಾಸಿದ್ದ ಚಪ್ಪಡಿ ಕಲ್ಲುಗಳನ್ನು ಅಲ್ಲಲ್ಲಿ ಮೇಲೆಕ್ಕೆತ್ತಿ ಇರಿಸಲಾಗಿದ್ದು, ಇಲ್ಲಿ ಚರಂಡಿ ಪೂರ್ತಿ ನೀರು ತುಂಬಿ ನಿಲ್ಲುತ್ತದೆ. ಚರಂಡಿಯ ಎರಡೂ ತುದಿಗಳಲ್ಲಿ ನೀರು ಮುಂದಕ್ಕೆ ಹರಿಯಲು ಸಂಪರ್ಕ ಕಲ್ಪಿಸಿಲ್ಲ. ಇದು ಸಮಸ್ಯೆಯ ಮೂಲ.

“ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಆರಂಭಿಸುವ ಸಂದರ್ಭ ಸೂಕ್ತ ಚರಂಡಿ ವ್ಯವಸ್ಥೆ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕೆಂದು ಸ್ಮಾರ್ಟ್‌ ಸಿಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಮಾತ್ರವಲ್ಲದೇ ಕಾರ್ಪೊರೇಟರ್‌, ಶಾಸಕರ ಸಹಿತ ಜನಪ್ರತಿನಿಧಿಗಳ ಗಮನಕ್ಕೂ ತರಲಾಗಿದೆ. ಈ ತನಕ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಧಾರಾಕಾರ ಮಳೆ ಬಂದಾಗ ಚರಂಡಿ ನೀರು ಮನೆ ಆವರಣಕ್ಕೆ ಹರಿದು ಬರುತ್ತದೆ. ಮನೆಯಿಂದ ಹೊರಗೆ ಕಾಲಿಡದ ಪರಿಸ್ಥಿತಿ ಇದೆ’ ಎಂದು ಸ್ಥಳೀಯ ನಿವಾಸಿ ಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ.

ಕೋವಿಡ್ ದಿಂದಾಗಿ ಕಾಮಗಾರಿ ವಿಳಂಬ
ಇಲ್ಲಿ ಹಳೆಯ ಚರಂಡಿ ವ್ಯವಸ್ಥೆ ಇದ್ದು, ರಸ್ತೆಗೆ ಕಾಂಕ್ರೀಟ್‌ ಆಗಿದ್ದರೂ ಚರಂಡಿ ವ್ಯವಸ್ಥೆ ಇನ್ನೂ ಸಮರ್ಪಕವಾಗಿ ಆಗಿಲ್ಲ. ಕೋವಿಡ್ ಸಮಸ್ಯೆಯಿಂದಾಗಿ ಕಾಮಗಾರಿ ವಿಳಂಬವಾಗಿದೆ. ಇಲ್ಲಿನ ಚರಂಡಿಯ ನೀರು ಹರಿದು ಹೋಗಲು ಸಮೀಪದ ಭಗತ್‌ ಸಿಂಗ್‌ ರಸ್ತೆಯ ಚರಂಡಿಗೆ ಸಂಪರ್ಕ ಕಲ್ಪಿಸಿದರೆ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಯಬಹುದು.
 -ಅಬ್ದುಲ್‌ ಲತೀಫ್‌,
ಸ್ಥಳೀಯ ಕಾರ್ಪೊರೇಟರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.