ಗಾಂಜಾ ಮಾರಾಟ: ಆರೋಪಿ ಸೆರೆ
Team Udayavani, Sep 26, 2017, 10:57 AM IST
ಮಂಗಳೂರು: ತಲಪಾಡಿ ಗ್ರಾಮದ ತಚ್ಚಾಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳದ ಮಂಜೇಶ್ವರ ಸಮೀಪದ ಕಣ್ವತೀರ್ಥದ ಶೇಖರ್ ಯಾನೆ ಕ್ಯಾಮು (32) ನನ್ನು ಸೋಮವಾರ ಎಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೈಂ ಪೊಲೀಸ್ ಇನ್ಸ್ಪೆೆಕ್ಟರ್ ಮಹಮ್ಮದ್ ಶರೀಫ್ ಮತ್ತು ಸಿಬಂದಿ ಬಂಧಿಸಿ 7,000 ರೂ. ಮೌಲ್ಯದ 433 ಗ್ರಾಂ ಗಾಂಜಾ, 700 ರೂ. ನಗದು ಮತ್ತು 1,000 ರೂ. ಬೆಲೆಯ ಮೊಬೈಲ್ ಫೋನ್ನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ತಚ್ಚಾಣಿಯ ಶ್ರೀ ಗುರುದೇವ್ ಫ್ರೆಂಡ್ಸ್ ಕಟ್ಟಡದ ಬಳಿ ತೆರಳಿದಾಗ ಅಲ್ಲಿ ಓರ್ವ ಯುವಕ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್ ಹಿಡಿದು ನಿಂತಿರುವುದು ಕಂಡು ಬಂದಿತ್ತು. ಯುವಕನನನ್ನು ವಿಚಾರಿಸಿದಾಗ ತನ್ನ ಹೆಸರನ್ನು ತಿಳಿಸಿದ್ದು, ಪ್ಲಾಸ್ಟಿಕ್ ಕವರ್ನಲ್ಲಿ ಗಾಂಜಾ ಪತ್ತೆಯಾಯಿತು. ತನ್ನ ಪರಿಚಯದ ತೂಮಿನಾಡು ಆಸಿಫ್ ಎಂಬಾತ 11 ಪ್ಯಾಕೆಟ್ ಗಾಂಜಾವನ್ನು ಮಾರಾಟ ಮಾಡುವುದಕ್ಕಾಗಿ ತನಗೆ ನೀಡಿದ್ದು, ಅದರಲ್ಲಿ ಒಂದು ಪ್ಯಾಕೆಟ್ ಗಾಂಜಾವನ್ನು ಮಾರಾಟ ಮಾಡಲಾಗಿದ್ದು, ಉಳಿದ 10 ಪ್ಯಾಕೆಟ್ಗಳು ತನ್ನ ವಶದಲ್ಲಿ ಇರುವುದಾಗಿ ತಿಳಿಸಿದನು. ಪೊಲೀಸರು ಆತನನ್ನು ಎನ್ಡಿಪಿಎಸ್ ಕಾಯ್ದೆ 8 (ಸಿ), 20 (ಬಿ) (ಐಐ) (ಬಿ) ಅನ್ವಯ ಕೇಸು ದಾಖಲಿಸಿ ಬಂಧಿಸಿದರು.
ಪೊಲೀಸ್ ಆಯುಕ್ತ ಟಿ. ಸುರೇಶ್ ಅವರ ಆದೇಶದಂತೆ ಡಿಸಿಪಿ ಹನುಮಂತ ರಾಯ ಅವರ ನಿರ್ದೇಶನ ಮತ್ತು ಸಿಸಿಬಿ ಎಸಿಪಿ ವೆಲೆಂಟೈನ್ ಡಿ’ಸೋಜಾ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಶಾಜು ನಾಯರ್, ಲಕ್ಷ್ಮೀಶ, ಕಿಶೋರ್ ಪೂಜಾರಿ, ಭಾಸ್ಕರ್ ಅವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ