ಕೋವಿಡ್ ಕಳವಳ: ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಸ್ಯಾನಿಟೈಸಿಂಗ್ ಕಾರ್ಯ
Team Udayavani, Jun 27, 2020, 2:15 PM IST
ಉಳ್ಳಾಲ: ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ ಕೋವಿಡ್-19 ಭೀತಿ ಹೆಚ್ಚುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಶನಿವಾರ ಸೋಂಕಿತ ಪ್ರದೇಶ ಸೇರಿದಂತೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಉಳ್ಳಾಲ ಪೇಟೆ, ತೊಕ್ಕೊಟ್ಟು ಪೇಟೆ ಸೇರಿದಂತೆ ಮುಖ್ಯ ರಸ್ತೆ ಸಂಪರ್ಕಿಸುವ ಸ್ಥಳದಲ್ಲಿ ಅಗ್ನಿಶಾಮಕ ವಾಹನದಲ್ಲಿ ಸ್ಯಾನಿಟೈಸ್ ಮಾಡುವ ಕಾರ್ಯ ಆರಂಭಗೊಂಡಿತು.
ಶಾಸಕ ಯು.ಟಿ.ಖಾದರ್ ಉಳ್ಳಾಲ ಕೋಡಿಯಲ್ಲಿ ಸ್ಯಾನಿಟೈಸ್ಗೆ ಚಾಲನೆ ನೀಡಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಹೊರಗಡೆ ತೆರಳುವಾಗ ಮಾಸ್ಕ್ ಧರಿಸಬೇಕು. ಜನರೊಂದಿಗೆ,ಮಾತನಾಡುವಾಗ ಅಂತರ ಕಾಯ್ದುಕೊಳ್ಳಬೇಕು ಎಂದರು.
ಉಳ್ಳಾಲ ನಗರಸಭಾ ಪೌರಾಯುಕ್ತ ರಾಯಪ್ಪ ಮಾತನಾಡಿ ಶಾಸಕರ ಆದೇಶದ ಮೇರೆ ಸ್ಯಾನಿಟೈಸ್ ಮಾಡುತ್ತಿದ್ದು, ಉಳ್ಳಾಲ ನಗರವನ್ನು ಕೋವಿಡ್-19 ಸೋಂಕು ಮುಕ್ತ ನಡೆಸಲು ಎಲ್ಲರೂ ಸಹಕರಿಸಬೇಕು ಎಂದರು.
ಉಳ್ಳಾಲ ಕೋಡಿಯಿಂದ ಆರಂಭಗೊಂಡ ಸ್ಯಾನಿಟೈಸ್ ಕಾರ್ಯ ಕೋಟೆಪುರ, ಉಳ್ಳಾಲ ಜಂಕ್ಷನ್, ಮೊಗವೀರ ಪಟ್ಣ, ಸಮ್ಮರ್ ಸ್ಯಾಂಡ್, ಅಬ್ಬಕ್ಕ ಸರ್ಕಲ್, ಮುಕ್ಕಚೇರಿ, ಮಾಸ್ತಿಕಟ್ಟೆ, ಮೇಲಂಗಡಿ, ದರ್ಗಾ ರಸ್ತೆ, ಉಳ್ಳಾಲಬೈಲು ಮುಖ್ಯರಸ್ತೆ, ತೊಕ್ಕೊಟ್ಟು ಒಳಪೇಟೆ, ಮಂಚಿಲ,ಅಳೇಕಲ, ತೊಕ್ಕೊಟ್ಟು ಜಂಕ್ಷನ್, ತೊಕ್ಕೊಟ್ಟು ಬಸ್ಸು ನಿಲ್ದಾಣ, ಮಾರ್ಗತಲೆ ಕಲ್ಲಾಪು, ಶಿವಾಜಿನಗರ, ಪಂಡಿತ್ಹೌಸ್, ಕುತ್ತಾರು ಪ್ರದೇಶದಲ್ಲಿ ನಡೆಸಲಾಯಿತು.
ನಗರಸಭಾ ಅಧಿಕಾರಿಗಳು ಈ ಸಂದರ್ಭದಲ್ಲಿ ಸಹಕಾರ ನೀಡಿದ್ದು, ಧ್ವನಿವರ್ಧಕದ ಮೂಲಕ ಜನರಿಗೆ ಮಾಹಿತಿಯನ್ನು ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ