ಸಸಿಹಿತ್ಲು -ಕದಿಕೆ ರಸ್ತೆ ದುರಸ್ತಿ
Team Udayavani, Mar 27, 2022, 10:05 AM IST
ಸಸಿಹಿತ್ಲು -ಕದಿಕೆ ರಸ್ತೆ ದುರಸ್ತಿ
ಹಳೆಯಂಗಡಿ: ಇಲ್ಲಿನ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ಹಾಗೂ ಮುಂಡ ಬೀಚ್ನ್ನು ಸಂಪರ್ಕಿಸುವ ಕದಿಕೆ ಸೇತುವೆಯ ಬಳಿಯಲ್ಲಿನ ರಸ್ತೆಯನ್ನು ದುರಸ್ತಿಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಇಲ್ಲಿನ ಪರಿಸ್ಥಿತಿಯನ್ನು ಉದಯವಾಣಿಯು ಸುದಿನದಲ್ಲಿ ‘ ಹದಗೆಟ್ಟ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ರಸ್ತೆ ‘ ಎಂದು ವಿಶೇಷ ವರದಿ ಪ್ರಕಟಿಸಿ ಸಂಬಂಧಿಸಿದ ಇಲಾಖೆಯನ್ನು ಎಚ್ಚರಿಸಿತ್ತು. ಈಗ ಸಸಿಹಿತ್ಲು ದೇವಸ್ಥಾನದಿಂದ ಕದಿಕೆ ಸಾಲ್ಯಾನ್ ಮೂಲಸ್ಥಾನದವರೆಗೆ ಅಲ್ಲಿಲ್ಲಿ ಇದ್ದ ಹೊಂಡ ಗುಂಡಿಯನ್ನು ಮುಚ್ಚಿ ಡಾಮರು ಕಾಮಗಾರಿ ನಡೆಸಲಾಗಿದೆ. ಈ ಬಗ್ಗೆ ತಾ.ಪಂ. ಮಾಜಿ ಸದಸ್ಯ ಜೀವನ್ಪ್ರಕಾಶ್ ಕಾಮೆರೊಟ್ಟು ಪ್ರತಿಕ್ರಿಯಿಸಿ ಹದಗೆಟ್ಟ ರಸ್ತೆಯ ಬಗ್ಗೆ ಶಾಸಕ ಉಮಾನಾಥ ಕೋಟ್ಯಾನ್ ಅವರಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ್ನ ಮೂಲಕ ಮನವಿ ಮಾಡಿಕೊಂಡಿದ್ದು ಅವರು ತತ್ಕ್ಷಣ ಜಿ.ಪಂ.ನ ಎಂಜಿನಿಯರಿಂಗ್ ವಿಭಾಗದಿಂದ ದುರಸ್ತಿ ಕಾರ್ಯವನ್ನು ನಡೆಸಿದ್ದಾರೆ. ಎಂಜಿನಿಯರ್ ಪ್ರಶಾಂತ್ ಆಳ್ವ ಅವರು ವಿಶೇಷ ಮುತುವರ್ಜಿ ವಹಿಸಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ