ಎಸ್‌ಸಿಡಿಸಿಸಿ ಬ್ಯಾಂಕ್‌ ಮಾದರಿ ಕೆಲಸ: ಸಚಿವ ಕೋಟ

ಆಶಾ ಕಾರ್ಯಕರ್ತೆಯರಿಗೆ, ನವೋದಯ ಪ್ರೇರಕರಿಗೆ ನೆರವು

Team Udayavani, Apr 23, 2020, 5:06 AM IST

ಎಸ್‌ಸಿಡಿಸಿಸಿ ಬ್ಯಾಂಕ್‌ ಮಾದರಿ ಕೆಲಸ: ಸಚಿವ ಕೋಟ

ಮಂಗಳೂರು: ಕೋವಿಡ್-19 ಮಹಾಮಾರಿಯ ಈ ಸಂಕಷ್ಟದ ಕಾಲದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆಗೆ ತತ್‌ಕ್ಷಣ ಸ್ಪಂದಿಸಿ ಅವರಿಗೆ ಬೇಕಾದ ಆಹಾರ ಕಿಟ್‌ಗಳನ್ನು ಒದಗಿಸಿದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸೇವಾ ಕಾರ್ಯ ಶ್ಲಾಘನೀಯ ಹಾಗೂ ಮಾದರಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದ ಕೊಡಿಯಾಲ್‌ಬೈಲ್‌ ಎಸ್‌ಸಿಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಬುಧವಾರ ನಡೆದ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಹಾಗೂ ನವೋದಯ ಪ್ರೇರಕರಿಗೆ ಆಹಾರ ಕಿಟ್‌ ವಿತರಿಸಿ ಅವರು ಮಾತನಾಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಆಶಾ ಕಾರ್ಯಕರ್ತೆಯರು ದೇವರು ಮೆಚ್ಚುವಂತಹ ಕೆಲಸ ಮಾಡುತ್ತಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಮಾಡುತ್ತಿರುವ ಕೆಲಸ ಸಮಾಜಕ್ಕೆ ಮಾದರಿ ಎಂದರು.

ರಾಜ್ಯದ ಸಹಕಾರಿ ಸಂಸ್ಥೆಗಳು ತಮ್ಮ ಲಾಭಾಂಶದಲ್ಲಿ ಶೇ. 2ರಷ್ಟನ್ನು ಶಿಕ್ಷಣ ನಿಧಿಗೆ ನೀಡುತ್ತಿವೆ. ಆರ್ಥಿಕ ಸಂಕಷ್ಟದ ಈ ಸಂದರ್ಭ ಶೇ. 2 ನಿಧಿಯಲ್ಲಿ ಶೇ. 1 ನಿಧಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಡೆದುಕೊಳ್ಳಲು ರಾಜ್ಯ ಸರಕಾರ ಮುಂದಾಗಬೇಕು. ಈ ಬಗ್ಗೆ ಅಧ್ಯಾದೇಶ ಹೊರಡಿಸಬೇಕು. ಶೇ. 1ರಷ್ಟು ನಿಧಿಯನ್ನು ಸರಕಾರ ಪಡೆದುಕೊಂಡರೆ 100 ಕೋಟಿ ರೂ.ಗೂ ಹೆಚ್ಚು ಹಣ ಸರಕಾರದ ಪರಿಹಾರ ನೆರವಿಗೆ ದೊರೆಯಲಿದೆ. ಈ ಹಣವನ್ನು ಅಗತ್ಯ ಸೇವೆಗಳಿಗೆ ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಶಾಸಕರಾದ ಡಿ. ವೇದವ್ಯಾಸ್‌ ಕಾಮತ್‌, ಡಾ| ವೈ.ಭರತ್‌ ಶೆಟ್ಟಿ, ಐವನ್‌ ಡಿ’ಸೋಜಾ, ಕಾರ್ಪೊರೇಟರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ವಿನಯ್‌ ಕುಮಾರ್‌ ಸೂರಿಂಜೆ, ನಿರ್ದೇಶಕ ದೇವಿಪ್ರಸಾದ್‌ ಶೆಟ್ಟಿ ಬೆಳಪು, ವಾದಿರಾಜ್‌ ಎಂ. ಶೆಟ್ಟಿ, ಶಶಿಕುಮಾರ್‌ ರೈ ಬಾಲೊÂಟ್ಟು, ಎಸ್‌.ಬಿ. ಜಯರಾಮ್‌ ರೈ, ಸದಾಶಿವ ಉಳ್ಳಾಲ, ಹರೀಶ್ಚಂದ್ರ, ಜೈರಾಜ್‌ ಬಿ. ರೈ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್‌ ಬಿ. ನಾಯಕ್‌, ಸಿಇಒ ರವೀಂದ್ರ ಬಿ., ಮಹಾ ಪ್ರಬಂಧಕ ಗೋಪಿನಾಥ್‌ ಭಟ್‌ ಉಪಸ್ಥಿತರಿದ್ದರು.

3,500ಕ್ಕೂ ಅಧಿಕ ಆಶಾ ಕಾರ್ಯಕರ್ತೆ
ಯರಿಗೆ ಹಾಗೂ ನವೋದಯ ಪ್ರೇರಕರಿಗೆ ಆಹಾರ ಕಿಟ್‌ ವಿತರಿಸುವ ಉದ್ದೇಶವಿದ್ದು, ಬುಧವಾರ ಎಸ್‌ಸಿಡಿಸಿಸಿ ಬ್ಯಾಂಕ್‌ ಆವರಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸುಮಾರು 15 ಮಂದಿಗೆ ಸಾಂಕೇತಿಕವಾಗಿ ಕಿಟ್‌ ವಿತರಿಸಲಾಯಿತು.

ಪ್ರೋತ್ಸಾಹ ಧನ
ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಆಶಾ ಕಾರ್ಯಕರ್ತೆಯರು ಅಪದಾºಂಧವರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಈ ಕಾರಣಕ್ಕಾಗಿ ಅವರೆಲ್ಲರಿಗೆ ಆಹಾರ ಕಿಟ್‌ ಒದಗಿಸುವ ಜತೆಯಲ್ಲಿ ಪ್ರತಿಯೊಬ್ಬರಿಗೂ ತಲಾ 1 ಸಾವಿರ ರೂ. ಪ್ರೊತ್ಸಾಹ ಧನ ನೀಡಲು ನಿರ್ಧರಿಸಿದ್ದೇವೆ ಎಂದು ಘೋಷಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.