ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಿಸ್ತಿಗೆ ಆಯ್ಕೆ
Team Udayavani, Sep 5, 2019, 5:00 AM IST
ಕಾವೂರು: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಾವೂರು ಪ.ಪೂ. ಕಾಲೇಜು (ಪ್ರೌಢಶಾಲೆಯ ವಿಭಾಗದ)ಮಲ್ಲೇಶ್ ನಾಯಕ್ ಎ.ಸಿ. ಆಯ್ಕೆಯಾಗಿದ್ದಾರೆ. 1998ರಲ್ಲಿ ಶಿಕ್ಷಕ ವೃತ್ತಿಗೆ ಪಾದಾರ್ಪಣೆ ಮಾಡಿದ ಅವರು ಕಾವೂರು ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಸಹಶಿಕ್ಷಕನಾಗಿ ಬಳಿಕ ಇದೀಗ ಐದು ವರ್ಷಗಳಿಂದ ಮುಖ್ಯ ಶಿಕ್ಷಕನಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಹಳೆಯ ಕಟ್ಟಡವನ್ನು ನವೀಕರಣಗೊಳಿಸಿ, ಸಿಸಿ ಕೆಮರಾ ಅಳವಡಿಸಿ ಭದ್ರತೆಯ ಜತೆ ಜತೆಗೆ ಮಕ್ಕಳಿಗೆ ಉತ್ತಮ ಶೌಚಾಲಯ, ಕುಡಿಯುವ ನೀರು, ಮಕ್ಕಳಿಗೆ ಟ್ರ್ಯಾಕ್ ಸೂಟ್ ಸಹಿತ ವಿವಿಧ ಮೂಲಸೌಲಭ್ಯವನ್ನು ಸುಮಾರು 50ರಿಂದ 50 ಲಕ್ಷ ರೂ.ಗಳನ್ನು ದಾನಿಗಳ ನೆರವಿನಿಂದ,ಆಡಳಿತ ಮಂಡಳಿಯ ಸಹಕಾರದಲ್ಲಿ ಒದಗಿಸಿ ಕಲಿಕಾ ವಾತಾವರಣ ನಿರ್ಮಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ.
ಶಾಲಾ ವಠಾರದಲ್ಲಿ ಮಕ್ಕಳಿಗೊಂದು ಸಸಿ ಯೋಜನೆಯಂತೆ ಅದನ್ನು ಪಾಲನೆ ಮಡಿ ಬೆಳೆಸುವ ಮಕ್ಕಳಿಗೆ ಅಂಕ ಸಹಿತ ಪ್ರೋತ್ಸಾಹ ನೀಡುತ್ತಿದ್ದಾರೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗುತ್ತಿದೆ. ಇದರ ಜತೆಗೆ 10 ವರ್ಷಗಳಿಂದ ಹಿಂದಿ ಭಾಷಾ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ರಿ ಹಂಸಿನಿ ಎಂ. ನಾಯಕ್ ಎಸೆಸೆಲ್ಸಿ, ಪುತ್ರ ವಿಶ್ವೇಶ ಎಂ. ನಾಯಕ್ 5ನೇ ತರಗತಿ ಕಲಿಯುತ್ತಿದ್ದು, ಪತ್ನಿ ರೂಪಾ ಟಿ.ಎಸ್. ಮನೆವಾರ್ತೆ ನೋಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ