![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಕರಾವಳಿಯ “ಪ್ರತ್ಯೇಕ ಮರಳು ನೀತಿ’ಗೆ ಎಳ್ಳುನೀರು!
ಸಾಂಪ್ರದಾಯಿಕ ಮರಳುಗಾರಿಕೆಗೆ ಪೂರಕವಾಗಿ ನಿಯಮ ಸರಳಗೊಳಿಸಿದ್ದೇ ಕಾರಣ
Team Udayavani, Feb 20, 2023, 8:15 AM IST
![ಕರಾವಳಿಯ “ಪ್ರತ್ಯೇಕ ಮರಳು ನೀತಿ’ಗೆ ಎಳ್ಳುನೀರು!](https://www.udayavani.com/wp-content/uploads/2023/02/sand-620x354.jpg)
ಮಂಗಳೂರು: ಕರಾವಳಿ ಜಿಲ್ಲೆಗಳ ಮರಳುಗಾರಿಕೆ ನಿಯಮಗಳಲ್ಲಿ ಕೆಲವನ್ನು ಸರಳಗೊಳಿಸಲಾಗಿದ್ದು, ಇದರಿಂದಾಗಿ ಸರಕಾರವು ಕರಾವಳಿಗೆ ಪ್ರತ್ಯೇಕ ಮರಳು ನೀತಿ ಅನುಷ್ಠಾನವನ್ನು ಕೈಬಿಟ್ಟಿದೆ.
ಕರಾವಳಿಯಲ್ಲಿ ಸಾಂಪ್ರದಾಯಿ ಕವಾಗಿ ಮರಳು ತೆಗೆಯುವ ವ್ಯಕ್ತಿ/ಸಮುದಾಯದವರಿಗೆ ಮರಳು ಗಣಿಗಾರಿಕೆ/ಮರಳು ದಿಬ್ಬ ತೆರವುಗೊಳಿಸಲು ಹೆಚ್ಚಿನ ಅವಕಾಶ ನೀಡಲಾಗಿದೆ. ಆದ್ದರಿಂದ ಪ್ರತ್ಯೇಕ ಮರಳು ನೀತಿ ಜಾರಿ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಗಣಿ ಖಾತೆ ಸಚಿವ ಹಾಲಪ್ಪ ಆಚಾರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಉಪಖನಿಜ ರಿಯಾಯಿತಿ ನಿಯಮ ತಿದ್ದುಪಡಿ
ಕರಾವಳಿಯಲ್ಲಿ ಮರಳುಗಾರಿಕೆ ನಿಯಮಗಳನ್ನು ಸರಳಗೊಳಿಸುವ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ಕರಾವಳಿ ಜಿಲ್ಲೆಗಳ ಸಚಿವರು ಹಾಗೂ ಶಾಸಕರೊಂದಿಗೆ 2021ರ ಸೆ. 16ರಂದು ಸಭೆ ನಡೆಸಲಾಗಿತ್ತು. ಅದೇ ವರ್ಷ ಡಿ. 1ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮ 1994ಕ್ಕೆ ತಿದ್ದುಪಡಿ ತಂದು ಜಾರಿಗೊಳಿಸಲಾಗಿದೆ. ಇದರಲ್ಲಿ ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್ಝಡ್) ಉನ್ನತ ಶ್ರೇಣಿಯ ಹಳ್ಳ/ನದಿ ಪಾತ್ರಗಳ ವ್ಯಾಪ್ತಿಯಲ್ಲಿ ಗುರುತಿಸುವ ಮರಳು ಬ್ಲಾಕ್ಗಳನ್ನು ಜಿಲ್ಲೆಯ ಸಾಂಪ್ರದಾಯಿಕ ಮರಳು ತೆಗೆಯುವ ಸಮುದಾಯದವರಿಗೆ ಮಾತ್ರ ಟೆಂಡರ್/ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಡಿ. 14ರಂದು ಸರಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ.
ನಿರಾಸಕ್ತಿ ಯಾಕೆ ?
ಕರಾವಳಿ ನಿಯಂತ್ರಣ ವಲಯ(ಸಿಆರ್ಝಡ್)ದಲ್ಲಿ ಮರಳು ದಿಬ್ಬ ತೆರವಿಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿ/ಸಮುದಾಯದವರನ್ನು ಗುರುತಿಸುವ ಸಂಬಂಧ 2022ರ ಜ. 11ರಂದು ಏಕರೂಪದ ಮಾರ್ಗಸೂಚಿ ಹೊರಡಿಸಲಾಗಿದೆ. ಇಷ್ಟು ಸರಳಗೊಳಿಸಿರುವುದರಿಂದ ಹೊಸ ನೀತಿ ಅಗತ್ಯವಿಲ್ಲ ಎಂಬುದು ಸರಕಾರದ ಲೆಕ್ಕಾಚಾರ.
ಗಣಿ ಇಲಾಖೆಯ ದ.ಕ. ಉಪ ನಿರ್ದೇಶಕ ಲಿಂಗರಾಜು “ಉದಯವಾಣಿ’ ಜತೆಗೆ ಮಾತನಾಡಿ, “ಈಗಾಗಲೇ ಜಾರಿಗೊಳಿಸಲಾದ ಉಪಖನಿಜ ರಿಯಾಯಿತಿ ನಿಯಮವನ್ನು 2021ರಲ್ಲಿ ತಿದ್ದುಪಡಿಯೊಂದಿಗೆ ಜಾರಿಗೊಳಿಸಲಾಗಿದೆ. ಇದರಂತೆ ಬೇರೆ ಜಿಲ್ಲೆಗಳಲ್ಲಿ ಸರಕಾರದ ಸಂಸ್ಥೆಗಳಿಗೆ ಹರಾಜು/ಟೆಂಡರ್ ಜವಾಬ್ದಾರಿ ಇದ್ದರೆ, ಕರಾವಳಿ ಭಾಗಕ್ಕೆ ಮಾತ್ರ ಜಿಲ್ಲೆಯ ಸಾಂಪ್ರದಾಯಿಕ ಕಾರ್ಮಿಕರೇ ಭಾಗವಹಿಸಲು ತಿದ್ದುಪಡಿ ನಿಯಮದಲ್ಲಿ ಅವಕಾಶ ನೀಡಲಾಗಿದೆ. ಈ ಕಾರಣದಿಂದ ಇದು ಪ್ರತ್ಯೇಕ ನೀತಿಯೇ ಆಗಿರುತ್ತದೆ’ ಎನ್ನುತ್ತಾರೆ.
“ಕರಡು ನೀತಿ’ಯೂ ಸಿದ್ಧ ಎಂದಿದ್ದರು!
“ಕರಾವಳಿಗೆ ಪ್ರತ್ಯೇಕ ಗಣಿ ನೀತಿಯ ಕರಡು ಸಿದ್ಧಗೊಂಡಿದ್ದು, ಜನಪ್ರತಿನಿಧಿಗಳು ಮತ್ತು ಪ್ರಮುಖರ ಜತೆಗೆ ಚರ್ಚಿಸಿ ತಿಂಗಳೊಳಗೆ ಜಾರಿ ಗೊಳಿಸಲು ಕ್ರಮ ಕೈಗೊಳ್ಳ ಲಾಗುವುದು’ ಎಂದು 2021ರಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ಮಂಗಳೂರಿನಲ್ಲಿ ಹೇಳಿದ್ದರು.
ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿ ಸಂಬಂಧ ನಿಯಮಾವಳಿ ರೂಪಿಸಲು ಬಾಕಿ ಇದೆ. ಸರಕಾರದ ಮಟ್ಟದಲ್ಲಿ ಇದು ಅಂತಿಮವಾಗಬೇಕಿದೆ. ಇಲ್ಲಿಯವರೆಗೆ ಹೊಸ ನೀತಿ ಜಾರಿಗೆ ಬಂದಿಲ್ಲ.
– ರವಿಕುಮಾರ್ ಎಂ.ಆರ್., ದ.ಕ. ಜಿಲ್ಲಾಧಿಕಾರಿ
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.