ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ


Team Udayavani, May 27, 2024, 12:46 AM IST

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಮಂಗಳೂರು/ಉಡುಪಿ: ಎರಡು ದಿನಗಳ ಸರಣಿ ರಜೆ ಹಾಗೂ ಶಾಲಾ ಮಕ್ಕಳ ಬೇಸಗೆ ರಜೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ತೀರ್ಥಕ್ಷೇತ್ರಗಳು ಹಾಗೂ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಭರ್ತಿಯಾಗಿವೆ. ಸೋಮೇಶ್ವರ, ಪಣಂಬೂರು, ಸುರತ್ಕಲ್‌, ಮಲ್ಪೆ ಬೀಚ್‌ಗಳಲ್ಲೂ ಜನಸಂದಣಿ ಹೆಚ್ಚಾಗಿತ್ತು.

ಕೊಲ್ಲೂರು ದೇವಸ್ಥಾನ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಶನಿವಾರ ಮತ್ತು ರವಿವಾರ ತಲಾ 30,000ದಷ್ಟು ಭಕ್ತರು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದರು. ಬೆಳಗ್ಗಿನ ಜಾವದಿಂದ ಸಂಜೆಯ ತನಕವೂ ಭಕ್ತರ ಸರದಿ ಸಾಲು ಮುಖ್ಯ ರಸ್ತೆ ವರೆಗೆ ಇತ್ತು. ನೂಕುನುಗ್ಗಲು ತಪ್ಪಿಸಲು ಸಿಬಂದಿ ಹರ ಸಾಹಸ ಪಡಬೇಕಾಯಿತು.

ವಸತಿಗೃಹಗಳು ಭರ್ತಿ: ಶನಿವಾರ ಹಾಗೂ ರವಿವಾರ ಕ್ಷೇತ್ರದ ಪರಿಸರದ ಎಲ್ಲ ವಸತಿಗೃಹಗಳು ಭರ್ತಿಯಾಗಿ ದ್ದವು. ಭಕ್ತರು ವಾಸ್ತವ್ಯಕ್ಕೆ ಪರದಾಡ ಬೇಕಾಯಿತು.

ಕುಂಭಾಶಿ ದೇವಸ್ಥಾನ
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿ ಮತ್ತು ಸಹಸ್ರನಾಳಿಕೇರ ಗಣಪತಿ ಯಾಗವು ರವಿವಾರ ಜರಗಿದ್ದು, 30 ಸಾವಿರಕ್ಕೂ ಅಧಿಕ ಭಕ್ತರು ಶ್ರೀದೇವರ ದರ್ಶನ ಪಡೆದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
ಸುಬ್ರಹ್ಮಣ್ಯ: ಶನಿವಾರ, ರವಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಧಿಕ ಸಂಖ್ಯೆಯ ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಮಾರಧಾರಾ ಸ್ನಾನಘಟ್ಟ, ಸುಬ್ರಹ್ಮಣ್ಯ ಪೇಟೆ, ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರ ದಟ್ಟಣೆ ಕಂಡುಬಂದಿದ್ದು, ದೇವಸ್ಥಾನದ ವತಿಯಿಂದ ಪೂರಕ ವ್ಯವಸ್ಥೆ ಕಲ್ಪಿಸಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ, ಕಟೀಲು, ಉಡುಪಿ ಶ್ರೀಕೃಷ್ಣ ಮಠ ಮೊದಲಾದ ಕ್ಷೇತ್ರಗಳಲ್ಲೂ ಸಾಮಾನ್ಯ ದಿನಕ್ಕಿಂತ ದುಪ್ಪಟ್ಟು ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ.

Ad

ಟಾಪ್ ನ್ಯೂಸ್

Dr-Parameshwar

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್ 

Yadagiri: Bhoyal Harshal appointed as new DC

Yadagiri: ನೂತನ ಡಿಸಿಯಾಗಿ ಭೋಯಲ್ ಹರ್ಷಲ್ ನಿಯೋಜನೆ

BJP: Arvind Limbavali expresses displeasure against Yediyurappa

BJP: ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ

Nitish Kumar announces 35% reservation for women in government posts

Bihar: ಸರ್ಕಾರಿ ಹುದ್ದೆಗಳಲ್ಲಿ ಶೇ.35 ರಷ್ಟು ಮಹಿಳೆಯರಿಗೆ ಮೀಸಲು; ನಿತೀಶ್‌ ಕುಮಾರ್ ಘೋಷಣೆ

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಕಿರುತೆರೆಗೆ ಮರಳಿದ ಸ್ಮೃತಿ ಇರಾನಿ: ಒಂದು ಎಪಿಸೋಡ್‌ಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್… 3 ಕೋಟಿ ಕಳೆದುಕೊಂಡು CA ಪತ್ರ ಬರೆದು ಆತ್ಮಹತ್ಯೆ

ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್‌ಮೇಲ್: ಕಾರು, 3ಕೋಟಿ ಹಣ ಕಳೆದುಕೊಂಡು ಆತ್ಮಹತ್ಯೆ ಶರಣಾದ CA

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ

Video: ಬೈಕ್ – ಸ್ಕೂಟರ್‌ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು; ಸುಟ್ಟು ಕರಕಲಾದ ಹಯಬುಸಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Surathkal ಪರಿಸರದಲ್ಲಿ ಬೀದಿ ನಾಯಿಗಳ ಉಪಟಳ

6

Mudbidri ಜೈನ್‌ ಪೇಟೆಯ ತೆರೆದ ಚರಂಡಿಗಳಿಗೆ ಸ್ಲ್ಯಾಬ್‌

5

Mangaluru: ಬಿಕರ್ನಕಟ್ಟೆ- ಸಾಣೂರು ಹೆದ್ದಾರಿಗೆ ಗುಡ್ಡಗಳೇ ಅಡ್ಡ!

police

Ullal: ಬಾಲಕಿ ಅಪಹರಣ; ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

fraudd

Mangaluru: ಷೇರು ಮಾರುಕಟ್ಟೆ ಟಾಸ್ಕ್; 4.59 ಲಕ್ಷ ರೂ. ವಂಚನೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Dr-Parameshwar

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇದೆ: ಡಾ.ಜಿ.ಪರಮೇಶ್ವರ್ 

Yadagiri: Bhoyal Harshal appointed as new DC

Yadagiri: ನೂತನ ಡಿಸಿಯಾಗಿ ಭೋಯಲ್ ಹರ್ಷಲ್ ನಿಯೋಜನೆ

7-

Anandapura: ಮಾರಿಕಾಂಬ ದೇವಿಯ ಕಾಣಿಕೆ ಹುಂಡಿ ಎಣಿಕೆ

6-ckm

Chikkamagaluru: ವಿದ್ಯುತ್ ಶಾಕ್ ನಿಂದ ಮೆಸ್ಕಾಂ ಸಿಬ್ಬಂದಿ ಸ್ಥಿತಿ ಗಂಭೀರ

5-thirthahalli

Thirthahalli: ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಕಿಮ್ಮನೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.