ನೀರಿನ ಪೈಪ್‌ಲೈನ್‌ ಮಧ್ಯದಲ್ಲಿಯೇ ಬಿಟ್ಟು ಚರಂಡಿ ಕಾಮಗಾರಿ!

ಮಳೆ ನೀರು ಹರಿಯಲು ಇಲ್ಲಿ ಪೈಪ್‌ ಅಡ್ಡಿ!

Team Udayavani, Apr 24, 2022, 10:48 AM IST

pipeline

ಪಡೀಲ್‌: ಮಳೆನೀರು ಹರಿಯಲು ನಿರ್ಮಿಸುವ ಚರಂಡಿಯು ಯಾವುದೇ ಅಡೆ ತಡೆ ಇಲ್ಲದೆ ನಿರ್ಮಾಣವಾದರೆ ಮಳೆ ನೀರು ಸರಾಗವಾಗಿ ಹರಿಯಲು ಅನುಕೂಲವಾಗುತ್ತದೆ; ಆದರೆ ಇಲ್ಲೊಂದು ಕಡೆ ಹಳೆಯ ಕುಡಿಯುವ ನೀರಿನ ಪೈಪ್‌ಲೈನ್‌ ಅನ್ನು ಮಧ್ಯೆ ಇರಿಸಿ ಚರಂಡಿ ನಿರ್ಮಿಸುವ ಕಾಮಗಾರಿ ನಡೆಸಲಾಗುತ್ತಿದೆ!

ಪಡೀಲ್‌ ಸಮೀಪದ ನಾಗುರಿ ಮಾರುಕಟ್ಟೆ ಇರುವ ಭಾಗದಲ್ಲಿ ಇಂತಹ ಅವೈಜ್ಞಾನಿಕ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಮಳೆಗಾಲದಲ್ಲಿ ಮತ್ತೂಂದು ಕೃತಕ ಸಮಸ್ಯೆ ಎದುರಾಗುವ ಎಲ್ಲ ಸಾಧ್ಯತೆಗಳಿವೆ. ಒಂದು ವೇಳೆ ಪೈಪ್‌ಲೈನ್‌ಗೆ ಹಾನಿಯಾದರೆ ಮಳೆ ನೀರು ಪೈಪ್‌ನೊಳಗೆ ಸೇರುವ ಆತಂಕವಿದೆ!

ಸುಮಾರು 50 ವರ್ಷ ಹಳೆಯ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಲೈನ್‌ ಪಡೀಲ್‌ ಜಂಕ್ಷನ್‌ ಭಾಗದಿಂದ ಪಂಪ್‌ವೆಲ್‌ ರಸ್ತೆಯ ಪರಿಧಿಯಲ್ಲಿ ಸಾಗಿಬಂದಿದೆ. ಇಲ್ಲಿನ ಕೆಲವೆಡೆ ರಸ್ತೆ ಮಧ್ಯೆ, ಬದಿಯಲ್ಲಿ ಮುಖ್ಯ ಕೊಳವೆ ಪೈಪ್‌ಲೈನ್‌ ಇದೆ. ಸದ್ಯ ಪಡೀಲ್‌ ವ್ಯಾಪ್ತಿಯಲ್ಲಿ ಸ್ಮಾಟ್‌ಸಿಟಿಯಿಂದ ಚರಂಡಿ ಕಾಮಗಾರಿ ನಡೆಯುತ್ತಿದೆ. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಕೆಲಸ ಮಾಡಲಾಗುತ್ತಿದೆ. ಇದರಂತೆ ಒಂದು ಕಡೆ ಚರಂಡಿ ಹೋಗುವ ಭಾಗದಲ್ಲಿ ನೀರಿನ ಪೈಪ್‌ಲೈನ್‌ ಇದೆ. ಇಲ್ಲಿ ಪೈಪ್‌ಲೈನ್‌ ಬಿಟ್ಟು ಚರಂಡಿಯನ್ನು ಪ್ರತ್ಯೇಕವಾಗಿ ಮಾಡಬೇಕಾದ ಅಗತ್ಯವಿತ್ತು.

ಆದರೆ ಅದನ್ನು ಬಿಟ್ಟು ಹಾಲಿ ನೀರಿನ ಪೈಪ್‌ಲೈನ್‌ ಹಾದು ಹೋಗುವ ಭಾಗದಲ್ಲಿಯೇ ಚರಂಡಿ ನಿರ್ಮಿಸಲು ಮುಂದಾಗಿರುವುದು ಸ್ಥಳೀಯರ ಆಕ್ಷೇಪಕ್ಕೆ ಕಾರಣವಾಗಿದೆ. ಮುಂದೆ ಮಳೆ ನೀರು ಹರಿಯಲು ಇಲ್ಲಿ ಕುಡಿಯುವ ನೀರಿನ ಪೈಪ್‌ ಲೈನ್‌ ಅಡ್ಡಿಯಾಗುವ ಪ್ರಮೇಯ ಎದುರಾಗಿದೆ.

ಚರಂಡಿ ಅಗಲ’ ಮಾಡಲು ಐಡಿಯಾ!

ಸ್ಮಾರ್ಟ್‌ಸಿಟಿ ಅಧಿಕಾರಿಗಳ ಪ್ರಕಾರ ಪಡೀಲ್‌ ವ್ಯಾಪ್ತಿಯಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನೀರಿನ ಪೈಪ್‌ ಚರಂಡಿ ಮಧ್ಯೆ ಹಾದು ಹೋಗಿದೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಹೀಗಾಗಿ ಇಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಚರಂಡಿಯನ್ನು ಮತ್ತಷ್ಟು ಅಗಲ ಮಾಡಲು ಸೂಚಿಸಲಾಗುವುದು. ಪೈಪ್‌ಲೈನ್‌ಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದಿದ್ದಾರೆ.

ಚರಂಡಿ ಕೆಲಸ ಮುಗಿದ ಬಳಿಕ ರಸ್ತೆ ಕಾಮಗಾರಿ

ಪಂಪ್‌ವೆಲ್‌ನಿಂದ ಪಡೀಲ್‌ವರೆಗೆ ನಗರ ಪ್ರವೇಶಿಸುವ ಪ್ರಮುಖ ರಸ್ತೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಂಕ್ರೀಟ್‌ ಮುಖೇನ ಅಭಿವೃದ್ಧಿಪಡಿಸಲು ಈಗಾಗಲೇ ನಿರ್ಧರಿಸಲಾಗಿದೆ. 2.8 ಕಿ.ಮೀ. ರಸ್ತೆ 24 ಮೀ. ವಿಸ್ತರಣೆಗೊಂಡು ನಿರ್ಮಾಣವಾಗಲಿದೆ. ಇದರ ಪೂರ್ವಭಾವಿಯಾಗಿ ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ಹರಿಯುವ ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ಪಡೀಲ್‌ ಜಂಕ್ಷನ್‌ನಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಮೀಪದವರೆಗೆ ಇಕ್ಕೆಲಗಳಲ್ಲಿ ಕಾಮಗಾರಿ ವೇಗ ಪಡೆದುಕೊಂಡಿದೆ. ಮುಂದೆ ವಿದ್ಯುತ್‌ ಕಂಬ, ಕೆಲವು ಮರಗಳ ತೆರವು ನಡೆಯುವ ಸಾಧ್ಯತೆಯಿದೆ.

ಪರಿಶೀಲಿಸಿ ಕ್ರಮಕ್ಕೆ ಸೂಚನೆ

ಪಡೀಲ್‌ ಜಂಕ್ಷನ್‌ ಭಾಗದಲ್ಲಿ ಸ್ಮಾರ್ಟ್‌ ಸಿಟಿಯಿಂದ ಚರಂಡಿ ಕಾಮಗಾರಿ ನಡೆಸುವಾಗ ಕುಡಿಯುವ ನೀರಿನ ಪೈಪ್‌ ಲೈನ್‌ ಚರಂಡಿ ಮಧ್ಯೆಯೇ ಇರುವ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಸ್ಥಳ ಸಮೀಕ್ಷೆ ನಡೆಸಿ ಪೂರಕ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು. ಅಕ್ಷಯ್‌ ಶ್ರೀಧರ್‌, ಆಯುಕ್ತರು, ಮನಪಾ

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.