ಕೆಲಸ ಕಳೆದುಕೊಂಡ ವೃದ್ಧೆಗೆ ಎಸ್ಐ ಉಮೇಶ್ ನೆರವು
Team Udayavani, Jun 20, 2020, 10:10 AM IST
ಪಣಂಬೂರು: ಲಾಕ್ಡೌನ್ ವೇಳೆ ನೌಕರಿ ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿ ಮಂಗಳೂರಿಗೆ ಬಂದಿದ್ದ ಮಹಿಳೆಯ ಪ್ರಯಾಣಕ್ಕೆ ಹಣ ನೀಡಿ ಪಣಂಬೂರಿನ ಎಸ್ಐ ಉಮೇಶ್ ಕುಮಾರ್ ಮಾನವೀಯತೆ ಮೆರೆದಿದ್ದಾರೆ.
ಮೂಲತಃ ಚಿಕ್ಕಮಗಳೂರಿನ ವಿಜಯಲಕ್ಷ್ಮೀ (59) ಉತ್ತರ ಭಾರತದ ಶಾಲೆಯೊಂದರಲ್ಲಿ ಉಪನ್ಯಾಸಕಿಯಾಗಿ ಇದ್ದರು. ಲಾಕ್ಡೌನ್ ಕಾರಣದಿಂದ ಅಲ್ಲಿಂದ ಊರಿಗೆ ಕಳುಹಿಸಿದ್ದರು. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಯಾರೂ ಇಲ್ಲದ ಕಾರಣ ಈಕೆ ಧರ್ಮಸ್ಥಳಕ್ಕೆ ಆಗಮಿಸಿ, ಅಲ್ಲಿಂದ ಮಂಗಳೂರಿಗೆ ಬಂದಿದ್ದರು. ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಲ್ಲಿ ತನಗೆ ಕೆಲಸ ಬೇಕೆಂದು ಕೇಳಿಕೊಂಡಾಗ ಅವರನ್ನು ಬೈಕಂಪಾಡಿಗೆ ಕಳುಹಿಸಿದ್ದರು. ಬೈಕಂಪಾಡಿಯಲ್ಲಿ ಯಾರೂ ಕೆಲಸ ನೀಡದಿದ್ದಾಗ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದರು.ಅಲ್ಲಿಂದ ಬಂದ ಮಾಹಿತಿ ಮೇರೆಗೆ ಎಸ್ಐ ಉಮೇಶ್ ಮತ್ತು ಸಿಬಂದಿ ಸ್ಥಳಕ್ಕೆ ಧಾವಿಸಿ ವಿಚಾರಿಸಿದರು. ಆಗ ಆಕೆ ನನಗೆ ಯಾರೂ ಕೆಲಸ ಕೊಡುವುದಿಲ್ಲ, ನನ್ನನ್ನು ಧರ್ಮಸ್ಥಳಕ್ಕೆ ಕಳುಹಿಸಿಕೊಡಿ ಎಂದು ಬೇಡಿಕೊಂಡಾಗ ಎಸ್ಐ ಉಮೇಶ್ ಕುಮಾರ್ ಅವರು ಬಸ್ ನಿಲ್ದಾಣಕ್ಕೆ ಬಿಟ್ಟು,ಬಸ್ಗೆ ಹಣ ನೀಡಿ ಕಳುಹಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್