ಅವಧಿಗೂ ಮುನ್ನವೇ ಮತ್ಸ್ಯೋದ್ಯಮ ಬಂದ್‌ ಭೀತಿ

ಕರಾವಳಿಯಲ್ಲಿ ಮೀನು ಲಭ್ಯತೆ ಪ್ರಮಾಣದಲ್ಲಿ ದಾಖಲೆಯ ಏರಿಕೆ!

Team Udayavani, May 2, 2020, 8:57 AM IST

ಅವಧಿಗೂ ಮುನ್ನವೇ ಮತ್ಸ್ಯೋದ್ಯಮ ಬಂದ್‌ ಭೀತಿ

ಸಾಂದರ್ಭಿಕ ಚಿತ್ರ

ಮಂಗಳೂರು: ಕೋವಿಡ್ ಲಾಕ್‌ಡೌನ್‌ ಕರಾವಳಿಯ ಮತ್ಸ್ಯೋದ್ಯಮಕ್ಕೂ ಭಾರೀ ಆಘಾತ ನೀಡಿದ್ದು, ಅವಧಿಗೂ ಮುನ್ನ ಮೀನುಗಾರಿಕಾ ಋತು ಪೂರ್ಣಗೊಳ್ಳುವುದು ಬಹುತೇಕ ನಿಶ್ಚಿತ. ವಿಶೇಷವೆಂದರೆ ಲಾಕ್‌ಡೌನ್‌ ಆರಂಭಕ್ಕೂ ಮೊದಲಿನ ಅಂಕಿ-ಅಂಶದಂತೆ ಕರಾವಳಿಯಲ್ಲಿ ಮೀನುಗಳ ಲಭ್ಯತೆ ಪ್ರಮಾಣ ಈ ಬಾರಿ ಹಿಂದಿನ ದಾಖಲೆ ಗಳನ್ನು ಮುರಿದಿರುವುದು ಗಮನಾರ್ಹ.

ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ. ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತದೆ. 2015ರಲ್ಲಿ ಕೇಂದ್ರ ಸರಕಾರವು ಪಶ್ಚಿಮ ಕರಾವಳಿಗೆ ಏಕರೂಪದ 2 ತಿಂಗಳ ನಿಷೇಧ ವಿಧಿಸಿ ಆದೇಶ ಹೊರಡಿಸಿತ್ತು. ಕರ್ನಾಟಕ, ಗೋವಾ, ಕೇರಳ, ಗುಜರಾತ್‌, ಮಹಾರಾಷ್ಟ್ರ ದಲ್ಲಿಯೂ ಇದೇ ನಿಯಮವಿದೆ. ಆದರೆ ಈ ಬಾರಿ ಲಾಕ್‌ಡೌನ್‌ನಿಂದಾಗಿ ಮೇ 31ರ ಮುನ್ನವೇ ಮೀನುಗಾರಿಕಾ ಋತು ಕೊನೆಗೊಳ್ಳುವ ಲಕ್ಷಣ ಕಾಣುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಎಪ್ರಿಲ್‌ನಿಂದ ಮೀನುಗಾರಿಕೆಗೆ ನಿಷೇಧ ಹೇರಿದ್ದು, ದೇಶದ ವಿವಿಧ ಭಾಗಗಳ ಹೆಚ್ಚಿನ ಮೀನುಗಾರ ಕಾರ್ಮಿಕರು ಊರುಗಳಿಗೆ ತೆರಳಿ ದ್ದಾರೆ. ಬಂದರಿನಲ್ಲಿ ಬಾಕಿಯಾಗಿರುವ ತಮಿಳುನಾಡು, ಕೇರಳ ಮೂಲದ ಕೆಲವರು ತಮ್ಮ ಊರುಗಳಿಗೆ ತೆರಳುವ ತವಕ ದಲ್ಲಿದ್ದಾರೆ. ಒಂದು ವೇಳೆ ಮೇ ಮೊದಲ ವಾರದಲ್ಲಿ ಲಾಕ್‌ಡೌನ್‌ ಕೊನೆಗೊಂಡರೂ ಬಾಕಿ ಉಳಿಯುವ 20 ದಿನಗಳಿಗಾಗಿ ದೂರದ ಊರುಗಳಿಂದ ಕಾರ್ಮಿಕರು ಮರಳುವುದು ಅನುಮಾನ.

ಉತ್ಪಾದನೆ ಹೆಚ್ಚು; ನಷ್ಟವೂ ಹೆಚ್ಚು
ಇಲಾಖೆಯ ಅಂಕಿ-ಅಂಶದ ಪ್ರಕಾರ, ದ.ಕ. ಜಿಲ್ಲೆಯಲ್ಲಿ ಕಳೆದ 8 ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಅತೀಹೆಚ್ಚು ಪ್ರಮಾಣದ ಮೀನು ಲಭಿಸಿದೆ. ಜಿಲ್ಲೆಯಲ್ಲಿ 2019-20ರ ಅವಧಿಯಲ್ಲಿ ಮಾರ್ಚ್‌ವರೆಗೆ ಒಟ್ಟು 1,71,692 ಟನ್‌ ಮೀನು ದೊರಕಿದೆ. ಇದು ಸಾರ್ವಕಾಲಿಕ ದಾಖಲೆ. ಉಡುಪಿ ಜಿಲ್ಲೆಯಲ್ಲಿಯೂ 1,21,479 ಟನ್‌ ಸಿಕ್ಕಿರುವುದು ಇನ್ನೊಂದು ದಾಖಲೆ. ಮೀನುಗಾರ ಮುಖಂಡ ಮೋಹನ್‌ ಬೆಂಗ್ರೆ ಪ್ರಕಾರ, “ಕಳೆದ ಕೆಲವು ತಿಂಗಳಿಗೆ ಹೋಲಿಸಿದರೆ ಮೀನುಗಾರಿಕೆ ಬೋಟ್‌ಗಳ ಸಂಖ್ಯೆ ಹೆಚ್ಚಳವಾಗಿದೆ. ಕೆಲವು ಬೋಟ್‌
ಗಳಲ್ಲಿ ತಂತ್ರಜ್ಞಾನವೂ ಬದಲಾಗಿದೆ. ಮೀನು ಲಭಿಸುವ ಪ್ರಮಾಣ ಹೆಚ್ಚಾದರೂ ಬೋಟ್‌ಗಳ ಸಂಖ್ಯೆ ಹೆಚ್ಚಿರುವುದರಿಂದ ಲಭ್ಯ ಮೀನುಗಳು ಹಂಚಿಹೋಗುತ್ತವೆ. ಹಾಗಾಗಿ ಮೀನುಗಾರರ ಲಾಭಾಂಶ ಕಡಿಮೆಯಿದೆ. ಹಮಾಮಾನ ವೈಪರೀತ್ಯ, ಕರ್ಫ್ಯೂ, ಬಂದ್‌, ಕೋವಿಡ್ ಮೊದಲಾದ ಕಾರಣಗಳಿಂದ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ’ ಎನ್ನುತ್ತಾರೆ ಅವರು.

ಈ ವರ್ಷದ ಮೀನುಗಾರಿಕಾ ಋತುವಿನಲ್ಲಿ ಹೆಚ್ಚಿನ ಪ್ರಮಾಣದ ಮೀನು ಲಭಿಸಿದೆ. ಆದರೆ ಬೋಟ್‌ಗಳು ಹೆಚ್ಚಿರುವುದರಿಂದ ಮೀನುಗಾರರು ನಷ್ಟದಲ್ಲಿದ್ದಾರೆ. ಲಾಕ್‌ಡೌನ್‌ ತೆರವುಗೊಂಡ ಬಳಿಕ ಸರಕಾರದ ಆದೇಶದಂತೆಟ್ರಾಲ್‌ ಬೋಟ್‌ ಮೀನುಗಾರಿಕೆ ಆರಂಭಗೊಳ್ಳಲಿದೆ.
– ಹರೀಶ್‌ ಕುಮಾರ್‌, ಮೀನುಗಾರಿಕಾ ಉಪನಿರ್ದೇಶಕರು, ದ.ಕ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.