ನಂದಿನಿಯಲ್ಲಿ ಹೂಳು ತುಂಬಿ ಕೃತಕ ನೆರೆ


Team Udayavani, May 12, 2022, 10:20 AM IST

nandini

ಸುರತ್ಕಲ್‌: ಚೇಳ್ಯಾರು ಗ್ರಾಮದ ಸರಹದ್ದಿನಲ್ಲಿ ಹರಿಯುವ ನಂದಿನಿ ನದಿಯಲ್ಲಿ ಹೂಳು ತುಂಬಿ ಕೃಷಿಕರ ಪಾರಂಪರಿಕ ಜೀವನಕ್ಕೆ ಹೊಡೆತ ನೀಡಿದ್ದು ಇದರ ಜತೆಗೆ ಮಾಲಿನ್ಯದಿಂದ ಮೀನುಗಾರಿಕೆಗೂ ಧಕ್ಕೆ ಉಂಟಾಗಿದೆ. ಖಂಡಿಗೆ ಧರ್ಮರಸು ಉಳ್ಳಾಯ ಜಾತ್ರೆಗೆ ಮೀನು ಹಿಡಿಯುವ ಹಬ್ಬಕ್ಕೆ ಹೂಳು ತುಂಬಿ ಸಂತಸಕ್ಕೆ ಹೊಡೆತ ನೀಡಿದೆ.

ಹೂಳಿನ ಸಮಸ್ಯೆ ಜತೆಗೆ ನಗರ ಪ್ರದೇಶದ ಕೊಳಚೆ ನೀರು ಹಳ್ಳಕೊಳ್ಳ ದಾಟಿ ನಂದಿನಿ ನದಿಗೆ ಸೇರುತ್ತಿದ್ದು, ಒಳಚರಂಡಿ ತ್ಯಾಜ್ಯ ಸೋರಿಕೆ ಪರಿಣಾಮ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ನೀರಿಗಿಳಿದರೆ ಎಲ್ಲಿ ತುರಿಕೆ, ಹುಣ್ಣು ಮತ್ತಿತರ ಚರ್ಮ ಕಾಯಿಲೆ ಆಂಟಿಕೊಳ್ಳುವ ಭೀತಿ ಉಂಟಾಗಿದೆ.

ಖಂಡಿಗೆ ಧರ್ಮರಸು ಉಳ್ಳಾಯನ ಕಂಡೇವು ಜಾತ್ರೆ ಮೇ 14ರಂದು ನಡೆಯಲಿದೆ. ಅಂದು ಮುಂಜಾನೆ ದೈವದ ಮುಂದೆ ಪ್ರಾರ್ಥನೆ ನೆರವೇರಿಸಿದ ಬಳಿಕ ಚೇಳ್ಯಾರು ನಂದಿನಿ ನದಿಯಲ್ಲಿ ಮಕ್ಕಳಿಂದ ವೃದ್ಧರವರೆಗೂ ತಂಡೋಪತಂಡವಾಗಿ ನದಿಗೆ ಹಾರಿ ಮೀನು ಹಿಡಿಯುವ ಕಾಲವೊಂದಿತ್ತು. ಆದರೆ ಇದೀಗ ದೂರದ ಪ್ರದೇಶದಿಂದ ಬರುವ ಮೀನುಗಾರರು ಒಂದಿಷ್ಟು ಮಂದಿ ಆಗಮಿಸಿ ಮೀನು ಹಿಡಿದು ಮಾರುತ್ತಾರೆ. ಸ್ಥಳೀಯರಲ್ಲಿ ಕೆಲವರು ಅಂಜಿಕೆ ಯಿಂದಲೇ ನದಿಗಿಳಿದು ಮೀನು ಹಿಡಿಯುವ ಸಾಹಸ ಪ್ರದರ್ಶಿಸುತ್ತಾರೆ. ಆದರೆ ಈ ಹಿಂದಿನ ಹುಮ್ಮಸ್ಸು, ಜಾತ್ರೆ ಸಂಭ್ರಮ ಮಾಲಿನ್ಯದಿಂದಾಗಿ ಕಳೆಗುಂದಿದೆ ಎನ್ನಬಹುದು.

ಸರಕಾರಕ್ಕೆ ವರದಿ ಸಲ್ಲಿಸಲು ಸೂಚಿಸಿದ್ದೇನೆ

ಸ್ಥಳೀಯ ರೈತರಿಗೆ, ಧಾರ್ಮಿಕ ಕೇಂದ್ರಕ್ಕೆ ನಂದಿನಿ ನದಿ ಮಾಲಿನ್ಯದಿಂದ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಹೂಳು ತುಂಬಿ ಕೃಷಿಗೂ ಸಮಸ್ಯೆಯಾಗಿದೆ. ಇದಕ್ಕಾಗಿ ಡಿಸಿ ಅವರನ್ನು ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಿ, ಸಮಸ್ಯೆ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಹೂಳು ತೆಗೆಯಲು ಹೆಚ್ಚು ಅನುದಾನ ಅಗತ್ಯವಿದ್ದಲ್ಲಿ ಮುಖ್ಯಮಂತ್ರಿಯವರಲ್ಲಿ ಚರ್ಚಿಸಿ ಬಿಡುಗಡೆಗೆ ಮನವಿ ಮಾಡಲಾಗುವುದು. ಉಮಾನಾಥ ಕೋಟ್ಯಾನ್‌, ಶಾಸಕರು, ಮೂಲ್ಕಿಮೂಡುಬಿದಿರೆ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.