ಹಳೆ ಡಿಸಿ ಕಚೇರಿ ಅಭಿವೃದ್ಧಿ ಯೋಜನೆ ಕೈಬಿಟ್ಟ ಸ್ಮಾರ್ಟ್‌ಸಿಟಿ


Team Udayavani, Jun 10, 2020, 3:23 PM IST

ಹಳೆ ಡಿಸಿ ಕಚೇರಿ ಅಭಿವೃದ್ಧಿ ಯೋಜನೆ ಕೈಬಿಟ್ಟ ಸ್ಮಾರ್ಟ್‌ಸಿಟಿ

ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡ.

ಮಹಾನಗರ: ಇತಿಹಾಸ ಪರಂಪರೆಯನ್ನು ಕಾಪಾಡುತ್ತ ಬಂದಿರುವ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದ ಹತ್ತಿರವಿರುವ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಬೆಸೆದುಕೊಳ್ಳುವ ಯೋಜನೆಯನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೈಬಿಡಲಾಗಿದೆ.

ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎರಡು ಪ್ರತ್ಯೇಕ ಕಟ್ಟಡಗಳಿವೆ. ಈ ಪೈಕಿ ಒಂದು ಕಟ್ಟಡದಲ್ಲಿ ಮತ ಎಣಿಕೆ ಆದ ಬಳಿಕ ಸೂಕ್ತ ಭದ್ರತೆಯೊಂದಿಗೆ ಇವಿಎಂ ಮೆಷಿನ್‌ಗಳು ಇರುವುದು ಹಾಗೂ ಇನ್ನೊಂದು ಕಟ್ಟಡದಲ್ಲಿ ಜಿಲ್ಲಾಡಳಿತದ ಅಮೂಲ್ಯ ದಾಖಲೆಗಳು ಇರುವ ಕಾರಣದಿಂದ ಸದ್ಯಕ್ಕೆ ಇವುಗಳ ತೆರವು ಕಷ್ಟಸಾಧ್ಯವಾದ್ದರಿಂದ ಈ ಕಟ್ಟಡದ ಅಭಿವೃದ್ಧಿಯನ್ನು ಸದ್ಯಕ್ಕೆ ಕೈ ಬಿಡಲಾಗಿದೆ. ಮತ ಎಣಿಕೆಯ ಬಗ್ಗೆ ಯಾರಿಗಾದರೂ ಆಕ್ಷೇಪಗಳಿದ್ದರೆ ನಿಗದಿತ ದಿನಾಂಕದೊಳಗೆ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಈ ಸಂದರ್ಭ ನ್ಯಾಯಾಲ ಯದ ಆದೇಶದ ಮೇರೆಗೆ ಮರು ಎಣಿಕೆ ಮಾಡಬೇಕಾದ ಅಗತ್ಯತೆ ಇದ್ದರೆ ಅಂತಹ ಸಂದರ್ಭಕ್ಕೆ ಅಗತ್ಯವಾಗಿ ಇವಿಎಂ ಮೆಷಿನ್‌ಗಳನ್ನು ಭದ್ರವಾಗಿ ಇಡಲಾಗುತ್ತದೆ. ಜತೆಗೆ ಜಿಲ್ಲಾಡಳಿತಕ್ಕೆ ಅಗತ್ಯವಿರುವ ದಾಖಲೆಗಳು ಕಟ್ಟಡದಲ್ಲಿ ಇರುವ ಹಿನ್ನೆಲೆಯಲ್ಲಿ ಇವುಗಳನ್ನು ಇರಿಸಿಕೊಂಡು ಸ್ಮಾರ್ಟ್‌ ಸಿಟಿಯ ಕೆಲಸ ಮಾಡುವುದು ಕಷ್ಟ ಎಂಬ ಕಾರಣದಿಂದ ಇದನ್ನು ಕೈಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಫಲಕ
“1914-1919ರ ಮಹಾಯುದ್ದದಲ್ಲಿ ಈ ಹಳ್ಳಿಯಿಂದ 88 ಮಂದಿ ಭಾಗವಹಿಸಿದ್ದಾರೆ. ಅವರಲ್ಲಿ 2 ಮಂದಿ ಮರಣ ಹೊಂದಿದ್ದಾರೆ’ ಎಂಬ ಕುತೂಹಲಕಾರಿಯಾದ ಮಾಹಿತಿ ಫಲಕ ಈಗಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾಣಸಿಗುತ್ತದೆ. ಇಲ್ಲಿ ಗೋಪುರ ಸ್ವರೂಪದ ರಚನೆಯೂ ಇದೆ. ಫಲಕ ಹಾಗೂ ಗೋಪುರ ಈಗಲೂ ಇವೆ. ಇಂತಹ ಇತಿಹಾಸವನ್ನು ಸಾರುವ ಕಟ್ಟಡವನ್ನು ಕಾಪಾಡುವ ನೆಲೆಯಲ್ಲಿ ಸ್ಮಾರ್ಟ್‌ ಮಂಗಳೂರು ಯೋಜನೆಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು. ಈಗ ಇರುವ ಕಚೇರಿಗೆ ಯಾವುದೇ ಧಕ್ಕೆ ಆಗದಂತೆ ಎಚ್ಚರಿಕೆ ವಹಿಸಿಕೊಂಡು ಪಾರಂಪರಿಕ ಮಾದರಿಯಲ್ಲಿ ರಕ್ಷಿಸಿಕೊಳ್ಳುವುದು ಸ್ಮಾರ್ಟ್‌ ಸಿಟಿ ಉದ್ದೇಶವಾಗಿತ್ತು. ಪ್ರವಾಸೋದ್ಯಮಕ್ಕೆ ಪೂರಕವಾಗಿ ಮ್ಯೂಸಿಯಂ ನಿರ್ಮಾಣದ ಯೋಜನೆಯಿತ್ತು. ಆರ್ಟ್‌ ಗ್ಯಾಲರಿ ನಿರ್ಮಾಣಕ್ಕೂ ಉದ್ದೇಶಿಸಲಾಗಿತ್ತು.

 ಯೋಜನೆ ಸದ್ಯಕ್ಕೆ ಕೈಬಿಡಲಾಗಿದೆ
ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಹಳೆಯ ಕಚೇರಿ ಆವರಣವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು. ಆದರೆ, ಅಲ್ಲಿ ಇವಿಎಂ ಮೆಷಿನ್‌ ಹಾಗೂ ದಾಖಲೆಗಳು ಇರುವ ಕಾರಣದಿಂದ ಸದ್ಯಕ್ಕೆ ಅಭಿವೃದ್ಧಿಪಡಿಸಲು ಕಷ್ಟ. ಹೀಗಾಗಿ ಮುಂದಿನ ಎರಡು ವರ್ಷಗಳವರೆಗೆ ಈ ಯೋಜನೆಯನ್ನು ಕೈಬಿಡಲಾಗಿದೆ. ಜಿಲ್ಲಾಡಳಿತದಿಂದ ಅನಂತರ ಅನುಮತಿ ಪಡೆದು ಮುಂದಿನ ಯೋಜನೆ ರೂಪಿಸಲಾಗುವುದು.
– ಮೊಹಮ್ಮದ್‌ ನಝೀರ್‌, ವ್ಯವಸ್ಥಾಪಕ ನಿರ್ದೇಶಕರು, ಸ್ಮಾರ್ಟ್‌ ಸಿಟಿ ಮಂಗಳೂರು

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.