ನಗರದ ಒಳಚರಂಡಿ ಸಮಸ್ಯೆ ಪರಿಹರಿಸಿ


Team Udayavani, Sep 18, 2019, 5:00 AM IST

e-37

ನಗರ ವ್ಯಾಪ್ತಿಯ ನಾಗರಿಕ ಸಮಸ್ಯೆಗಳ ನಿಮ್ಮ ದನಿಗೆ ನಮ್ಮ ದನಿ ಸೇರಿಸುವ ಪ್ರಯತ್ನ ಈ ಸುದಿನ ಜನದನಿ. ಓದುಗರು ತಮ್ಮ ಪ್ರದೇಶದ ರಸ್ತೆ, ನೀರು, ಸ್ವತ್ಛತೆ, ನೈರ್ಮಲ್ಯ, ಮಾಲಿನ್ಯ, ಸಂಚಾರ ವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆ ಕುರಿತು ತಿಳಿಸಬಹುದು. ಈ ಅಂಕಣ ಪ್ರತಿ ಬುಧವಾರ ಪ್ರಕಟವಾಗಲಿದೆ. ವೈಯಕ್ತಿಕ ಸಮಸ್ಯೆ, ಕಾನೂನು ವ್ಯಾಜ್ಯದ ದೂರು ಅಥವಾ ವಿವಾದದಲ್ಲಿರುವ ವಿಷಯಗಳನ್ನು ಪರಿಗಣಿಸುವುದಿಲ್ಲ. ನಾಗರಿಕರು ತಮ್ಮ ಪ್ರದೇಶದ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಬರೆದು ಪೂರಕವೆನಿಸುವ ಒಂದು ಫೋಟೋ ಜತೆ ಹೆಸರು, ವಿಳಾಸ ಮತ್ತು ಮೊಬೈಲ್‌ ಸಂಖ್ಯೆಯನ್ನು ನಮೂದಿಸಿ ಅಂಚೆ, ಇಮೇಲ್‌ ಅಥವಾ ವಾಟ್ಸಪ್‌ ಮೂಲಕ ಕಳುಹಿಸಬಹುದು. ಅರ್ಹ ದೂರುಗಳನ್ನು ಪ್ರಕಟಿಸಿ, ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಸುದಿನ ಮಾಡಲಿದೆ.

ಶೀಘ್ರ ಹೆದ್ದಾರಿ ಗುಂಡಿ ಮುಚ್ಚಿ
ಮಂಗಳೂರು-ಸುರತ್ಕಲ್‌ ರಾಷ್ಟ್ರೀಯ ಹೆದ್ದಾರಿಯ ಸ್ಥಿತಿ ಶೋಚನೀಯವಾಗಿದ್ದು, ಗುಂಡಿಮಯ ಹೆದ್ದಾರಿಯಲ್ಲಿ ಪ್ರಾಣಭಯದೊಂದಿಗೆ ಸಾಗಬೇಕಾದ ಅನಿವಾರ್ಯವಿದೆ. ಪ್ರತಿ ವರ್ಷ ಹೊಂಡ ಬಿದ್ದ ಜಾಗದಲ್ಲಿ ಪ್ಯಾಚ್‌ ವರ್ಕ್‌ ಮಾಡಿ, ಮಳೆಗಾಲದಲ್ಲಿ ಆ ಪ್ಯಾಚ್‌ ವರ್ಕ್‌ ಎದ್ದು ಹೋಗುವುದೇ ಸಮಸ್ಯೆಗೆ ಕಾರಣವಾಗಿದೆ. ಮಳೆಯ ಸಂದರ್ಭದಲ್ಲಿ ಎಲ್ಲಿ ಗುಂಡಿಗಳಿವೆ ಎಂದು ಗೊತ್ತಾಗದೆ, ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಅಪಾಯ ಮಾಡಿಕೊಂಡ ಉದಾಹರಣೆಗಳೂ ಸಾಕಷ್ಟಿವೆ. ಗುಣಮಟ್ಟದ ರಸ್ತೆಗಳನ್ನು ಕಲ್ಪಿಸಿಕೊಡುವಲ್ಲಿ ಆಡಳಿತ ವ್ಯವಸ್ಥೆ ಮತ್ತು ಹೆದ್ದಾರಿ ಇಲಾಖೆ ತತ್‌ಕ್ಷಣ ಸ್ಪಂದಿಸಬೇಕು.
-ಮಂಜುನಾಥ, ದೈನಂದಿನ ಸವಾರರು

ರಸ್ತೆಯಲ್ಲಿ ಹರಿಯುವ ಒಳಚರಂಡಿ ನೀರು
ಜೆಪ್ಪು ಕುಡುಪಾಡಿ ರಸ್ತೆಯಲ್ಲಿ ಸುದರ್ಶನ್‌ ನ್ಪೋರ್ಟ್ಸ್ ಕ್ಲಬ್‌ ಮುಂಭಾಗದಲ್ಲಿ ಒಳಚರಂಡಿ ನೀರು ರಸ್ತೆ ಮೇಲೆ ಹರಿದು ಜನರಿಗೆ ತೀರಾ ಸಮಸ್ಯೆ ತಂದೊಡ್ಡಿದೆ. ಗಬ್ಬು ವಾಸನೆಯಿಂದ ಕೂಡಿರುವ ನೀರಿನಿಂದಾಗಿ ಇಲ್ಲಿ ನಡೆದಾಡುವಾಗ ಮೂಗು ಮುಚ್ಚಿಕೊಂಡೇ ಹೋಗಬೇಕಾದ ಪರಿಸ್ಥಿತಿ ಇದೆ. ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ದೂರು ಸಲ್ಲಿಸಲಾಗಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಶೀಘ್ರ ಈ ಬಗ್ಗೆ ಕ್ರಮ ವಹಿಸಿ. .
-ಶಶಾಂಕ್‌ ಸ್ವರೂಪ್‌ ಸುವರ್ಣ, ಸ್ಥಳೀಯರು

ಹದಗೆಟ್ಟ ರಸ್ತೆ ಸರಿಪಡಿಸಿ
ಕಪಿತಾನಿಯೋ ಸನಿಹದ ರೆಡ್‌ ಬಿಲ್ಡಿಂಗ್‌ ಲೇನ್‌ ರಸ್ತೆ ಮೂರು ತಿಂಗಳಿನಿಂದ ಹದಗೆಟ್ಟಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ. ಮಳೆಯ ಸಂದರ್ಭದಲ್ಲಿ ಸಂಚಾರ ದುಸ್ತರವಾಗಿದೆ. ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳ ಪಾಲಿಗೆ ಈ ರಸ್ತೆ ಅಪಾಯವಾಗಿ ಪರಿಣಮಿಸಿದೆ. ಪಾಲಿಕೆಗೆ ರಸ್ತೆಯ ದು:ಸ್ಥಿತಿಯ ಬಗ್ಗೆ ದೂರು ನೀಡಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಈ ರಸ್ತೆಯ ಕಡೆ ಗಮನಹರಿಸಿ ಜನರಿಗೆ ಗುಣಮಟ್ಟದ ರಸ್ತೆ ಕಲ್ಪಿಸಿಕೊಡಬೇಕು.
-ಫ್ರಾನ್ಸಿಸ್‌, ರೆಡ್‌ ಬಿಲ್ಡಿಂಗ್‌ ಸ್ಥಳೀಯರು

ಪಾರ್ಕಿಂಗ್‌ಗೆ ಸ್ಥಳ ಒದಗಿಸಿ
ಆರ್‌ಟಿಒ ಕಚೇರಿಯಿಂದ ಅಗ್ನಿಶಾಮಕ ಕಚೇರಿಗೆ ತೆರಳುವ ರಸ್ತೆಯ ಬದಿಯಲ್ಲಿ ತಳ್ಳುಗಾಡಿಯನ್ನು ಕೆಲವು ದಿನಗಳಿಂದ ನಿಲ್ಲಿಸಲಾಗಿದೆ. ಇದರಲ್ಲಿ ಯಾರೂ ಮಾರಾಟದಲ್ಲಿ ತೊಡಗಿರದಿ ರುವುದರಿಂದ ಗಾಡಿ ಹಾಗೆಯೇ ಬಿದ್ದುಕೊಂಡಿದೆ. ಖಾಲಿ ಸ್ಥಳವಾದ್ದರಿಂದ ಉಪ ಯೋಗರಹಿತವಾಗಿ ಈ ಗಾಡಿಯನ್ನು ಇಲ್ಲೇ ಬಿಡುವುದಕ್ಕಿಂತ ವಿಲೇ ಮಾಡಿದರೆ ಪಾರ್ಕಿಂಗ್‌ ಸ್ಥಳವಾಗಿ ಬಳಕೆ ಮಾಡಿಕೊಳ್ಳಬಹುದು. ಈ ಸ್ಥಳದ ಮುಂಭಾಗದಲ್ಲಿ ಬ್ಯಾಂಕ್‌ ಇರುವುದರಿಂದ ಬ್ಯಾಂಕಿಗೆ ಬರುವ ಗ್ರಾಹಕರ ವಾಹನ ನಿಲುಗಡೆಗೆ ಈ ಸ್ಥಳ ಉತ್ತಮ ತಾಣವಾಗಬಲ್ಲುದು.
-ಚಂದ್ರಮೋಹನ್‌, ಮಂಗಳೂರು

ಬಸ್‌ ನಿಲ್ದಾಣ ಕಲ್ಪಿಸಿ
ಪಂಪ್‌ವೆಲ್‌-ತೊಕ್ಕೊಟ್ಟು ರಸ್ತೆಯಲ್ಲಿ ಬಸ್‌ ನಿಲ್ದಾಣ ಅವಶ್ಯವಾಗಿ ಬೇಕು. ಇಲ್ಲಿ ಜನರು ಬಸ್‌ಗಾಗಿ ಕಾಯುವಾಗ ಪರದಾಡುವ ಸ್ಥಿತಿ ದೇವರಿಗೇ ಪ್ರೀತಿ ಎಂಬಂತಾಗಿದೆ. ಚುನಾಯಿತ ಜನಪ್ರತಿನಿಧಿಗಳು ಜನರ ಸಮಸ್ಯೆ ಕಂಡೂ ಕಾಣದಂತೆ ಮೌನವಹಿಸಿರುವುದು ಸರಿಯಲ್ಲ. ತಾತ್ಕಾಲಿಕ ಬಸ್‌ ನಿಲ್ದಾಣ ಮಾಡಲೂ ಮಹಾನಗರ ಪಾಲಿಕೆ ಮನಸ್ಸು ಮಾಡುತ್ತಿಲ್ಲ. ವೃದ್ಧರು, ಮಹಿಳೆಯರು, ಮಕ್ಕಳು ಇಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡೇ ಬಸ್‌ಗೆ ರಸ್ತೆ ಬದಿಯಲ್ಲಿ ಕಾಯುವ ಪರಿಸ್ಥಿತಿ ಉಂಟಾಗಿದೆ. ತತ್‌ಕ್ಷಣ ಇಲ್ಲಿ ಬಸ್‌ ನಿಲ್ದಾಣ ನಿರ್ಮಿಸಿ ಜನರ ಸಮಸ್ಯೆಯನ್ನು ಸ್ಥಳೀಯಾಡಳಿತ ನಿವಾರಿಸಬೇಕು.
-ಅರುಣ್‌ ಶೆಟ್ಟಿ , ಶಿರೂರು

ತೊಟ್ಟಿಯಿಲ್ಲದೆ ರಸ್ತೆಯಲ್ಲೇ ಕಸ
ನಾಗುರಿಯಿಂದ ಮರೋಳಿ ಕಡೆಗೆ ಹೋಗುವ ದಾರಿ ಮಧ್ಯದ ಕ್ರಾಸ್‌ನಲ್ಲಿ ಕಸದ ತೊಟ್ಟಿಯ ವ್ಯವಸ್ಥೆ ಇಲ್ಲದಿದ್ದು, ಕಸವೆಲ್ಲ ರಸ್ತೆ ಬದಿಯಲ್ಲೇ ಬಿದ್ದಿರುತ್ತದೆ. ಈ ತ್ಯಾಜ್ಯವನ್ನು ಬೀದಿನಾಯಿಗಳು ಎಳೆದು ಹಾಕುತ್ತಿದ್ದು, ರಸ್ತೆಯಿಡೀ ಚೆಲ್ಲಾಪಿಲ್ಲಿಯಾಗಿ ಕಸ ಬಿದ್ದಿರುತ್ತದೆ. ಇದರಿಂದಾಗಿ ಇಲ್ಲಿ ಮೂಗು ಮುಚ್ಚಿಕೊಂಡೇ ನಡೆದಾಡಬೇಕಾದ ಪರಿಸ್ಥಿತಿ ಇದೆ. ಈ ಬಗ್ಗೆ ಪಾಲಿಕೆ, ನಾಗುರಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದ್ದು, ಕ್ರಮ ವಹಿಸುತ್ತೇವೆಂದು ತಿಳಿಸಿದ್ದಾರೆ. ಆದಷ್ಟು ಶೀಘ್ರ ಆ ಕೆಲಸ ಆಗಬೇಕು.
-ಮಾಲತಿ ಶೆಟ್ಟಿ, ಸ್ಥಳೀಯರು

ಮ್ಯಾನ್‌ಹೋಲ್‌ ಅವ್ಯವಸ್ಥೆ
ಕುಲಶೇಖರ, ಕಕ್ಕೆಬೆಟ್ಟು, ಕುಚ್ಚಿಕಾರ್‌, ಗ್ರೀನ್‌ ಮೆಡಲ್ಸ್‌ ಲೇ ಔಟ್‌ ಬಳಿ ಮ್ಯಾನ್‌ಹೋಲ್‌ ಅವ್ಯವಸ್ಥೆಯಿಂದಾಗಿ ನೀರು ಹೊರಗೆ ಬಂದು ನಡೆದಾಡಲು ಕಷ್ಟವಾಗುತ್ತಿದೆ. ಕಳೆದೊಂದು ವರ್ಷದಿಂದ ಇಲ್ಲಿ ಇದೇ ಪರಿಸ್ಥಿತಿ ಇದ್ದು, ಸ್ಥಳೀಯ ಕಾರ್ಪೊರೇಟರ್‌ ಹಲವಾರು ಬಾರಿ ರಿಪೇರಿ ಮಾಡಲಾಗುವುದು ಎಂದು ಹೇಳಿದ್ದರೂ ಈ ವರೆಗೂ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ದಯವಿಟ್ಟು ಈ ಸಮಸ್ಯೆಗೆ ಪರಿಹಾರ ಕಲ್ಪಿಸಿ.
– ಸ್ಥಳೀಯ ನಿವಾಸಿಗಳು

ಇಲ್ಲಿಗೆ ಕಳುಹಿಸಿ
“ಸುದಿನ-ಜನದನಿ’ ವಿಭಾಗ, ಉದಯವಾಣಿ, ಮಾನಸ ಟವರ್‌, ಮೊದಲ ಮಹಡಿ, ಎಂಜಿ ರಸ್ತೆ, ಪಿವಿಎಸ್‌ ವೃತ್ತ ಸಮೀಪ, ಕೊಡಿಯಾಲಬೈಲ್‌, ಮಂಗಳೂರು-575003. ವಾಟ್ಸಪ್‌ ನಂಬರ್‌-9900567000. ಇ-ಮೇಲ್‌: [email protected]

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.