ಕರಾವಳಿಯ ಮೊದಲ ‘ಸೌಹಾರ್ದ ವಿದ್ಯಾರ್ಥಿ ನಿಲಯ’
ಸಮಾಜ ಕಲ್ಯಾಣ ಇಲಾಖೆಯ ಮಹತ್ವದ ಯೋಜನೆ ಜಾರಿ
Team Udayavani, Nov 4, 2022, 11:59 AM IST
ಮಹಾನಗರ: ಎಲ್ಲ ಜಾತಿ-ಸಮುದಾಯದ ವಿದ್ಯಾರ್ಥಿಗಳು ಒಂದೇ ಹಾಸ್ಟೆಲ್ನಲ್ಲಿ ಇದ್ದು ವಿದ್ಯಾಭ್ಯಾಸ ನಡೆಸಲು ಅನುಕೂಲ ಕಲ್ಪಿಸುವ ಸಂಕಲ್ಪದೊಂದಿಗೆ “ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ’ವನ್ನು ಮಂಗಳೂರಿನಲ್ಲಿ ಆರಂಭಿಸಲು ಸಮಾಜ ಕಲ್ಯಾಣ ಇಲಾಖೆ ನಿರ್ಧರಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ನೂತನ ಹಾಸ್ಟೆಲ್ ಮಂಗಳೂರಿನಲ್ಲಿ ಆರಂಭವಾಗಲಿದೆ.
ಇಲ್ಲಿಯವರೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾಕ ಇಲಾಖೆ ಸಹಿತ ಬೇರೆ ಬೇರೆ ಇಲಾಖೆಗಳ ಹಾಸ್ಟೆಲ್ ಗಳಲ್ಲಿ ನಿರ್ದಿಷ್ಟ ಜಾತಿ-ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲಾಗುತ್ತಿತ್ತು. ಇದರ ಬದಲು ಎಲ್ಲ ಜಾತಿ-ಸಮುದಾಯದ ವಿದ್ಯಾರ್ಥಿಗಳು ಒಂದೇ ಕಡೆ ಇರುವ ಹಾಸ್ಟೆಲ್ ವ್ಯವಸ್ಥೆ ಮಾಡಿದರೆ ವಿದ್ಯಾರ್ಥಿಗಳಿಗೆ ಹೆಚ್ಚು ಸಹಬಾಳ್ವೆ ತತ್ತ್ವ ಪಾಲಿಸಲು ಸಾಧ್ಯ ಎಂಬ ಸದಾಶಯದೊಂದಿಗೆ ಹೊಸ ಹಾಸ್ಟೆಲ್ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ.
ರಾಜ್ಯದಲ್ಲಿ 5 ಹಾಸ್ಟೆಲ್
ಮಂಗಳೂರು ಸಹಿತ ಗುಲ್ಬರ್ಗ, ಬೆಳಗಾವಿ, ಮೈಸೂರು, ಬೆಂಗಳೂರಿನಲ್ಲಿ ಪದವಿ, ಪಿಜಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ವಿದ್ಯಾರ್ಥಿ ನಿಲಯ ಮಾಡಲು ಸರಕಾರ ನಿರ್ಧರಿಸಿದೆ. ತಲಾ 1 ಸಾವಿರ ಸಾಮರ್ಥ್ಯದ ವಿದ್ಯಾರ್ಥಿನಿಲಯ ಇದಾಗಲಿದೆ. ಇದರಲ್ಲಿ 400 ವಿದ್ಯಾರ್ಥಿನಿಯರು, 600 ವಿದ್ಯಾರ್ಥಿಗಳು ಎಂದು ನಿರ್ಧರಿಸಲಾಗಿದೆ. ಎಸ್ಸಿ ಶೇ.35, ಒಬಿಸಿ ಶೇ.30, ಎಸ್ಟಿ ಶೇ.15, ಅಲ್ಪಸಂಖ್ಯಾಕ ಶೇ. 20 ಪ್ರಮಾಣದಲ್ಲಿ ಈ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು ಇರಲಿದ್ದಾರೆ.
ಪ್ರಾರಂಭದಲ್ಲಿ 200 ವಿದ್ಯಾರ್ಥಿಗಳಿಗೆ ಸೀಮಿತ
ಸದ್ಯ ಪ್ರಾರಂಭಿಕವಾಗಿ 200 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಿ ಮಂಗಳೂರು ಹಾಸ್ಟೆಲ್ ಆರಂಭಕ್ಕೆ ಅನುಮತಿ ದೊರೆತಿದೆ. ಇದರಂತೆ 100 ಬಾಲಕರು, 100 ಬಾಲಕಿಯರಿಗೆ ಅನುಮತಿ ನೀಡಲಾಗಿದೆ. ಬಿಜೈ ಹಾಗೂ ದೇರಳಕಟ್ಟೆಯಲ್ಲಿ ಬಾಲಕ-ಬಾಲಕಿಯರಿಗೆ ಪ್ರತ್ಯೇಕವಾಗಿ ತಾತ್ಕಾಲಿಕ ಹಾಸ್ಟೆಲ್ ಆರಂಭವಾಗಲಿದೆ.
ಮಂಗಳೂರು ವಿ.ವಿ. ಕ್ಯಾಂಪಸ್ನಲ್ಲಿ ಹೊಸ ಕಟ್ಟಡ?
ಸದ್ಯ ಬಾಡಿಗೆ ಕಟ್ಟಡದಲ್ಲಿ ನಡೆಸುವ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಸತಿ ನಿಲಯವನ್ನು ಮುಂದೆ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ವಂತ ಕಟ್ಟಡ ನಿರ್ಮಿಸಿ ನಡೆಸಲು ಇಲಾಖೆ ನಿರ್ಧರಿಸಿದೆ. ಸುಮಾರು 8 ಎಕ್ರೆ ಭೂಮಿಯಲ್ಲಿ 5 ಕಟ್ಟಡಗಳನ್ನು ಇಲ್ಲಿ ನಿರ್ಮಿಸಲಾಗುತ್ತದೆ. ಪ್ರತೀ ಕಟ್ಟಡದಲ್ಲಿ 200 ವಿದ್ಯಾರ್ಥಿಗಳು ಇರಲಿದ್ದಾರೆ. ಪ್ರತೀ ಪಿಜಿ ವಿದ್ಯಾರ್ಥಿಗೆ ಕಲಿಕೆಗೆ ಸೂಕ್ತವಾಗುವ ಸ್ಥಳಾವಕಾಶ ಇಲ್ಲಿ ನೀಡಲಾಗುತ್ತದೆ. ಲೋಕೋಪಯೋಗಿ ಇಲಾಖೆ ಮೂಲಕ ಈ ಕಟ್ಟಡ ನಿರ್ಮಾಣ ಯೋಜನೆ ನಡೆಯಲಿದೆ. ಕಟ್ಟಡ ಪೂರ್ಣವಾದ ಬಳಿಕ ಬಾಡಿಗೆ ವ್ಯವಸ್ಥೆಯಲ್ಲಿರುವ ವಿದ್ಯಾರ್ಥಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗುತ್ತದೆ.
ಬಾಡಿಗೆ ಕಟ್ಟಡದಲ್ಲಿ ಆರಂಭ: ಬಿಜೈಯಲ್ಲಿ 100 ಬಾಲಕಿಯರಿಗೆ, ದೇರಳಕಟ್ಟೆಯಲ್ಲಿ 100 ಬಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಯೋಜನೆಯನ್ನು ಸದ್ಯ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಆರಂಭಿಸಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. – ಸಿದ್ಧಲಿಂಗೇಶ್ ಬೇವಿನಮಟ್ಟಿ, ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ದ.ಕ.
ಸಹಬಾಳ್ವೆಯ ಹಾಸ್ಟೆಲ್: ಎಲ್ಲ ಜಾತಿ-ಸಮುದಾಯದ ವಿದ್ಯಾರ್ಥಿಗಳು ಒಂದೇ ಕಡೆ ಇದ್ದು ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ ಐದು ಕಡೆ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಕರಾವಳಿ ಭಾಗದಲ್ಲಿಯೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಇದು ಕಾರ್ಯರೂಪಕ್ಕೆ ಬರುತ್ತಿದೆ. ಸದ್ಯ ಬಾಡಿಗೆ ಕಟ್ಟಡದಲ್ಲಿ ನಿರ್ವಹಿಸಿ ಬಳಿಕ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು. – ಕೋಟ ಶ್ರೀನಿವಾಸ ಪೂಜಾರಿ, ಸಚಿವರು, ಸಮಾಜ ಕಲ್ಯಾಣ ಇಲಾಖೆ
-ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ