ವಿಶೇಷ ವರದಿ: ರಸಗೊಬ್ಬರ ಕೊರತೆಯಿಲ್ಲ; ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

ದ.ಕ. ಜಿಲ್ಲೆಯ ರೈತರ ಬೇಡಿಕೆಗೆ ಪೂರಕ ದಾಸ್ತಾನು

Team Udayavani, Aug 11, 2020, 5:55 AM IST

ವಿಶೇಷ ವರದಿ: ರಸಗೊಬ್ಬರ ಕೊರತೆಯಿಲ್ಲ; ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೂರಿಯಾ ಸಹಿತ ಅವಶ್ಯ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದ್ದು, ಸದ್ಯಕ್ಕೆ ಯಾವುದೇ ಕೊರತೆ ಕಂಡುಬಂದಿಲ್ಲ. ಜಿಲ್ಲೆಯ ರೈತರ ಬೇಡಿ ಕೆಗಳಿಗೆ ಪೂರಕವಾಗಿ ರಸಗೊಬ್ಬರ ದಾಸ್ತಾನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೃಷಿ ಇಲಾಖೆ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದು, ಅಂತರ್‌ ಜಿಲ್ಲಾ ಮಾರಾಟವನ್ನು ನಿರ್ಬಂಧಿಸಿದೆ.

ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಎದುರಾಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿಯ ಸಮಸ್ಯೆ ಉಂಟಾಗಿಲ್ಲ. ಜಿಲ್ಲೆಯಲ್ಲಿ ಖಾರಿಫ್‌ನಲ್ಲಿ 4082 ಮೆ. ಟನ್‌ ಯೂರಿಯಾ ಆವಶ್ಯಕತೆಯಿದ್ದು, ಈ ವರೆಗೆ 3,558 ಮೆ. ಟನ್‌ ಮಾರಾಟವಾಗಿದೆ. ಪ್ರಸ್ತುತ ಕೆಎಸ್‌ಸಿಎಂಎಫ್‌ ಹಾಗೂ ಮಾರಾಟಗಾರರು ಸಹಿತ ಒಟ್ಟು 3,902 ಮೆ.ಟನ್‌ ಯೂರಿಯಾ ದಾಸ್ತಾನು ಇದೆ.ಜಿಲ್ಲೆಯಲ್ಲಿ ಖಾರಿಫ್‌ನಲ್ಲಿ ಒಟ್ಟು 9,640 ಮೆ. ಟನ್‌ ಕಾಂಪ್ಲೆಕ್ಸ್‌ ರಸಗೊಬ್ಬರಕ್ಕೆ ಬೇಡಿಕೆ ಇರುತ್ತದೆ. ಪ್ರಸ್ತುತ 7,000 ಮೆ.ಟನ್‌ ಮಾರಾಟವಾಗಿದ್ದು, 11,087 ಮೆ. ಟನ್‌ ದಾಸ್ತಾನು ಇದೆ. 1,106 ಮೆ. ಟನ್‌ ಡಿಎಪಿ ಮಾರಾಟವಾಗಿದ್ದು, 833 ಮೆ. ಟನ್‌ ದಾಸ್ತಾನು ಇದೆ. 3,567 ಮೆ. ಟನ್‌ ಎಂಒಪಿ ರಸಗೊಬ್ಬರ ದಾಸ್ತಾನು ಇದ್ದು, 1,108 ಮೆ. ಟನ್‌ ಮಾರಾಟವಾಗಿದೆ.

ಯೂರಿಯಾ ಸಹಿತ ರಸಗೊಬ್ಬರ ರೈತರಿಗೆ ವ್ಯವಸ್ಥಿತವಾಗಿ ದೊರೆಯುವಂತೆ ಇಲಾಖೆ ಕ್ರಮ ಕೈಗೊಂಡಿದೆ. ಮಾರಾಟಗಾರರ ಸಭೆಯನ್ನು ಈಗಾಗಲೇ ನಡೆಸಲಾಗಿದ್ದು, ಜಿಲ್ಲೆಯಿಂದ ಹೊರಗಿನವರಿಗೆ ಯೂರಿಯಾ ಮಾರಾಟ ಮಾಡದಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಡಾ| ಸೀತಾ ತಿಳಿಸಿದ್ದಾರೆ. ಯೂರಿಯಾ ಸಹಿತ ರಸಗೊಬ್ಬರ ಕೊರತೆ ಇರುವ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಎಂದು ರೈತಸಂಘದ ಮುಖಂಡ ರವಿಕಿರಣ್‌ ಪುಣಚ ತಿಳಿಸಿದ್ದಾರೆ.

ಚಿಕ್ಕಹರಳಿನ ಯೂರಿಯಾಕ್ಕೆ ಬೇಡಿಕೆ
ಯೂರಿಯಾದಲ್ಲಿ ಚಿಕ್ಕ ಹರಳು, ದೊಡ್ಡ ಹರಳು ಎಂಬ ಎರಡು ರೀತಿಯ ರಸಗೊಬ್ಬರ ಇದೆ. ದಪ್ಪ ಹರಳಿನ ಯೂರಿಯಾ ನಿಧಾನವಾಗಿ ಕರಗುತ್ತದೆ. ಚಿಕ್ಕ ಹರಳಿನ ಯೂರಿಯಾ ಬೇಗ ಕರಗುತ್ತದೆ. ಜಿಲ್ಲೆಯಲ್ಲಿ ಚಿಕ್ಕ ಹರಳಿನ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಇರುವುದು ಕಂಡುಬಂದಿದೆ. ಆದರೆ ಈ ಎರಡೂ ರೀತಿಯ ಯೂರಿಯಾದಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಬೆಳೆಗೆ ಬೇಕಾಗಿರುವ ಪೋಷಕಾಂಶಗಳು ಸಮಾನವಾಗಿರುತ್ತದೆ. ಅದುದರಿಂದ ರೈತರು ಇದರಲ್ಲಿ ಭೇದಭಾವ ಮಾಡದೆ ಎರಡನ್ನೂ ತಮ್ಮ ಆವಶ್ಯಕತೆಗಳಿಗನುಗುಣವಾಗಿ ಬಳಸಬಹುದು ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮಳೆ ಜಾಸ್ತಿ ಇರುವ ಸಂದರ್ಭದಲ್ಲಿ ರಸಗೊಬ್ಬರ ಬಳಕೆ ಮಾಡಬಾರದು. ನೀರಲ್ಲಿ ಕೊಚ್ಚಿಕೊಂಡು ಹೋಗುವ ಸಂಭವ ಇರುತ್ತದೆ. ಆದುದರಿಂದ ಮಳೆ ಕಡಿಮೆಯಾದ ಸಂದರ್ಭ ರಸಗೊಬ್ಬರ ಬಳಕೆ ಮಾಡುವುದು ಸೂಕ್ತ ಎಂದವರು ಸಲಹೆ ಮಾಡಿದ್ದಾರೆ.

ಆತಂಕ ಬೇಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೂರಿಯಾ ಸಹಿತ ರಸಗೊಬ್ಬರಗಳು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹವಿದ್ದು ರೈತರು ಆತಂಕ ಪಡುವ ಆವಶ್ಯಕತೆ ಇಲ್ಲ. ಎಲ್ಲಿಯಾದರೂ ಯೂರಿಯಾ ಕೊರತೆ ತಲೆದೋರಿದಲ್ಲಿ ಸಂಬಂಧಪಟ್ಟ ತಾಲೂಕುಗಳಲ್ಲಿರುವ ಕೃಷಿ ಇಲಾಖಾ ಅಧಿಕಾರಿಗಳನ್ನು ರೈತರು ಸಂಪರ್ಕಿಸಬಹುದು. ಕೂಡಲೇ ಪೂರೈಕೆಗೆ ವ್ಯವಸ್ಥೆ ಮಾಡಲಾಗುವುದು.
– ಡಾ| ಸೀತಾ, ಜಂಟಿ ಕೃಷಿ ನಿರ್ದೇಶಕರು ದ.ಕ. ಜಿಲ್ಲೆ

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.