ರಸ್ತೆ ವಿಸ್ತರಣೆ ಕಾಮಗಾರಿಗೆ ವೇಗ; ಫ್ರೀ ಲೆಫ್ಟ್ ಗೆ ಅವಕಾಶ

ಪಿವಿಎಸ್‌ ಸರ್ಕಲ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ

Team Udayavani, Oct 2, 2020, 4:58 AM IST

ರಸ್ತೆ ವಿಸ್ತರಣೆ ಕಾಮಗಾರಿಗೆ ವೇಗ; ಫ್ರೀ ಲೆಫ್ಟ್ ಗೆ ಅವಕಾಶ

ಮಹಾನಗರ: ನಗರದ ಕೇಂದ್ರ ಭಾಗಗಳ ಪೈಕಿ ಒಂದಾದ ಪಿವಿಎಸ್‌ ಸರ್ಕಲ್‌- ಬಂಟ್ಸ್‌ ಹಾಸ್ಟೆಲ್‌ ರಸ್ತೆ ವಿಸ್ತರಣೆ ಸಹಿತ ಈ ಭಾಗದಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳು ಇದೀಗ ವೇಗ ಪಡೆದುಕೊಂಡಿವೆ.

ಪಿವಿಎಸ್‌ ಸರ್ಕಲ್‌ ಪರಿಸರ ಇಕ್ಕಟ್ಟಾದ ಕಾರಣ ಇಲ್ಲಿ ವಾಹನ, ಜನ ಸಂಚಾರಕ್ಕೆ ಅಡಚಣೆಯಾಗಿತ್ತು. ಫ‌ುಟ್‌ಪಾತ್‌ ಇಲ್ಲದೆ ಜನರು ಪ್ರಾಣಭೀತಿ ಯಿಂದಲೇ ನಡೆದು ಕೊಂಡು ಹೋಗುವ ಸ್ಥಿತಿ ಇತ್ತು. ಅಲ್ಲದೆ ಎಂಜಿ ರಸ್ತೆಯಿಂದ ಬರುವ ವಾಹನಗಳಿಗೆ ಸಿಗ್ನಲ್‌ನಲ್ಲಿ ಫ್ರೀ ಲೆಫ್ಟ್ಗೆ ಸ್ಥಳಾವಕಾಶ ಇಲ್ಲದೆಯೂ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗ ಳೂರು ಸ್ಮಾರ್ಟ್‌ಸಿಟಿ ಯೋಜನೆಯಡಿ ಇಲ್ಲಿನ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಕಾಮಗಾರಿಗೆ ಕಳೆದ ಮಾರ್ಚ್‌ನಲ್ಲಿ ಚಾಲನೆ ದೊರೆತಿದ್ದರೂ ಕಾಮಗಾರಿ ಆರಂಭವಾದ ಕೆಲವೇ ದಿನಗಳಲ್ಲಿ ಲಾಕ್‌ಡೌನ್‌ ಜಾರಿಯಾದ ಹಿನ್ನೆಲೆಯಲ್ಲಿ 2 ತಿಂಗಳುಗಳ ಕಾಲ ಕಾಮಗಾರಿ ಸ್ಥಗಿತಗೊಂಡಿತು. ಅನಂತರ ಕಾಮಗಾರಿ ಆರಂಭಗೊಂಡರೂ ನಿಧಾನ ಗತಿಯಲ್ಲಿ ಸಾಗಿತ್ತು. ಬಳಿಕ ಮಳೆಯಿಂದ ತೊಡಕಾಯಿತು. ಮಳೆ ಕಡಿಮೆಯಾದ ಅನಂತರ ಸುಮಾರು 2 ವಾರಗಳಿಂದ ಕಾಮಗಾರಿ ಚುರುಕಾಗಿದೆ.

ವ್ಯವಸ್ಥಿತ ಫ‌ುಟ್‌ಪಾತ್‌
ಪಿವಿಎಸ್‌ ಜಂಕ್ಷನ್‌ನಿಂದ ಮಲ್ಲಿ ಕಟ್ಟೆವರೆಗೂ ಅತ್ತ ಪಿವಿಎಸ್‌ ಜಂಕ್ಷನ್‌ನಿಂದ ಕೆ.ಎಸ್‌.ರಾವ್‌ ರಸ್ತೆಯವರೆಗೂ ರಸ್ತೆ ವಿಸ್ತರಿಸಲು ಎರಡೂ ಬದಿ ಕೂಡ ವ್ಯವಸ್ಥಿತವಾದ ಫ‌ುಟ್‌ಪಾತ್‌ ನಿರ್ಮಿಸಲಾಗುತ್ತದೆ. ಈಗಾಗಲೇ ಪಿವಿಎಸ್‌ ಸರ್ಕಲ್‌ ಕಡೆಯಿಂದ ಬಂಟ್ಸ್‌ ಹಾಸ್ಟೆಲ್‌ ಕಡೆಗೆ ಹಲವೆಡೆ ಫ‌ುಟ್‌ಪಾತ್‌ ನಿರ್ಮಾಣ ವಾಗಿದೆ. ಮಳೆನೀರು ಹರಿ ಯುವ ಚರಂಡಿ ನಿರ್ಮಾಣ ಕೂಡ ಪ್ರಗತಿಯಲ್ಲಿದೆ. ಹಲವೆಡೆ ರಸ್ತೆಯ ಇಕ್ಕೆಲಗಳ ಜಾಗದ ಮಾಲಕರೊಂದಿಗೆ ಶಾಸಕರು ಮಾತುಕತೆ ನಡೆಸಿದ ಪರಿಣಾಮ ರಸ್ತೆ ವಿಸ್ತರಿಸಲು, ಫ‌ುಟ್‌ಪಾತ್‌ ನಿರ್ಮಿಸಲು ಸಾಧ್ಯವಾಗಿದೆ. ಇನ್ನಷ್ಟು ಮಂದಿಯ ಸಹಕಾರದ ಅಗತ್ಯವಿದೆ. ಆಗ ಸಾರ್ವಜನಿಕರಿಗೆ ಮೂಲಸೌಕರ್ಯ ಒದಗಿಸಲು, ವ್ಯವಸ್ಥಿತವಾಗಿ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಗಲಿದೆ. ಸಹಕಾರ ದೊರೆಯುವ ನಿರೀಕ್ಷೆ ಇದೆ ಎಂದು ಸ್ಮಾರ್ಟ್‌ ಸಿಟಿ ಅಧಿಕಾರಿಗಳು ತಿಳಿಸಿದ್ದಾರೆ.

ಹ್ಯಾಂಡ್‌ ರೇಲಿಂಗ್‌ ಅಳವಡಿಕೆ
ಪಿವಿಎಸ್‌ ಸರ್ಕಲ್‌ ಬಳಿ ಒಂದು ಬದಿಯಲ್ಲಿ ಫ‌ುಟ್‌ಪಾತ್‌ಗೆ ಸ್ಟೀಲ್‌ ಹ್ಯಾಂಡ್‌ ರೇಲಿಂಗ್‌ ಅಳವಡಿಸುವ ಕಾಮಗಾರಿ ಆರಂಭಗೊಂಡಿದೆ. ಇದು ಪ್ರಯಾಣಿಕರು ಸುರಕ್ಷಿತವಾಗಿ ನಡೆದಾಡಲು ಅವಕಾಶ ಮಾಡಿಕೊಡಲಿದೆ. ಅಲ್ಲದೆ ವಾಹನಗಳು ಫ‌ುಟ್‌ಪಾತ್‌ ಮೇಲೇರದಂತೆ ತಡೆಯಲು ಸಣ್ಣ ಕಂಬಗಳನ್ನು(ಬೊಲ್ಲಾರ್ಡ್ಸ್‌) ಕೂಡ ಅಳವಡಿಸಲಾಗುತ್ತಿದೆ. ಪಿವಿಎಸ್‌ ಸರ್ಕಲ್‌-ಬಂಟ್ಸ್‌ ಹಾಸ್ಟೆಲ್‌ ರಸ್ತೆಯ ನಡುವೆ ಡಿವೈಡರ್‌ ನಿರ್ಮಿಸಿ ದಾರಿದೀಪ ಅಳವಡಿಸುವ ಕಾಮಗಾರಿಯೂ ಶೀಘ್ರ ದಲ್ಲಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಡಬದಿಗೆ ಮುಕ್ತ ಸಂಚಾರ
ಪಿವಿಎಸ್‌ ಸರ್ಕಲ್‌ ಬಳಿ ರಸ್ತೆ ವಿಸ್ತರಣೆಗೊಂಡಿರುವುದರಿಂದ ವಾಹನಗಲು ಎಂ.ಜಿ. ರೋಡ್‌ನಿಂದ ಬಂದು ಪಿವಿಎಸ್‌ ಸರ್ಕಲ್‌ ಮೂಲಕ ಎಡಕ್ಕೆ (ಬಂಟ್ಸ್‌ ಹಾಸ್ಟೆಲ್‌ ಕಡೆಗೆ) ಮುಕ್ತವಾಗಿ ಸಂಚರಿಸಲು (ಫ್ರೀ ಲೆಫ್ಟ್) ಸಾಧ್ಯವಾಗಿದೆ.

ಪಾರ್ಕಿಂಗ್‌ಗೆ ಮೀಸಲಾಗದೆ ಇರಲಿ
ಪಿವಿಎಸ್‌ ಸರ್ಕಲ್‌ನಿಂದ ಬಂಟ್ಸ್‌ ಹಾಸ್ಟೆಲ್‌ವರೆಗಿನ ರಸ್ತೆಯನ್ನು ವಿಸ್ತರಿಸುವ ಕಾಮಗಾರಿ ಬಹುತೇಕ ಪೂರ್ಣ ಗೊಂಡು ಫ‌ುಟ್‌ ಪಾತ್‌, ಚರಂಡಿ ನಿರ್ಮಾಣ ಪ್ರಗತಿಯಲ್ಲಿದೆ. ಆದರೆ ವಿಸ್ತರಣೆ ಗೊಂಡ ರಸ್ತೆಯ ಕೆಲವೆಡೆ ಈಗಾಗಲೇ ವಾಹನಗಳನ್ನು ಪಾರ್ಕಿಂಗ್‌ ಮಾಡಲಾ ಗುತ್ತಿದೆ. ಒಂದು ವೇಳೆ ವಿಸ್ತರಣೆ ಗೊಂಡ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಮುಕ್ತ ಅವಕಾಶ ನೀಡಿದರೆ ಸಂಚಾರಕ್ಕೆ ಮತ್ತೆ ಅಡಚಣೆಯಾಗಿ ಅಭಿವೃದ್ಧಿ ಕಾಮಗಾರಿಯ ಉದ್ದೇಶವೇ ನಿರರ್ಥಕವಾಗಲಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

3 ತಿಂಗಳುಗಳಲ್ಲಿ ಪೂರ್ಣ
ರಸ್ತೆ ವಿಸ್ತರಣೆಗೊಳಿಸುವ ಜತೆಗೆ ಮಳೆನೀರು ಚರಂಡಿ, ಫ‌ುಟ್‌ಪಾತ್‌ ನಿರ್ಮಾಣ ಮೊದಲಾದ ಮೂಲಸೌಕರ್ಯ ಒದಗಿಸುವ ಕಾಮಗಾರಿ ಆರಂಭವಾದ ಒಂದು ವಾರದಲ್ಲಿ ಲಾಕ್‌ಡೌನ್‌ ಜಾರಿಗೆ ಬಂತು. ಹಾಗಾಗಿ 2 ತಿಂಗಳುಗಳ ಕಾಲ ಕೆಲಸ ಮಾಡಲು ಸಾಧ್ಯವಾಗಿಲ್ಲ. ಅನಂತರ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಮುಂದಿನ 3 ತಿಂಗಳುಗಳೊಳಗೆ ಕಾಮಗಾರಿ ಮುಗಿಸುವ ಪ್ರಯತ್ನ ನಡೆಸಲಾಗುತ್ತಿದೆ. -ಲಿಂಗೇಗೌಡ, ಕಾರ್ಯನಿರ್ವಾಹಕ ಎಂಜಿನಿಯರ್‌, ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆ

ಪಿವಿಎಸ್‌ ಸರ್ಕಲ್‌ ಪರಿಸರದಲ್ಲಿ ಕಾಮಗಾರಿ ನಡೆಯುತ್ತಿರುವುದು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.