ಸ್ಟೇಟ್‌ಬ್ಯಾಂಕ್‌-ನೆಲ್ಲಿಕಾಯಿ ರಸ್ತೆ ಏಕಮುಖ; ಸಂಚಾರ ಬದಲಾವಣೆಗೆ ಆಕ್ಷೇಪ

ವಾಹನ ಸವಾರರಿಗೆ ನಿತ್ಯ ಕಿರಿಕಿರಿ

Team Udayavani, Jul 19, 2022, 1:03 PM IST

9

ಸ್ಟೇಟ್‌ಬ್ಯಾಂಕ್‌: ಸ್ಟೇಟ್‌ ಬ್ಯಾಂಕ್‌ನ ಹ್ಯಾಮಿಲ್ಟನ್‌ ಸರ್ಕಲ್‌ ಸ್ಮಾರ್ಟ್‌ಸಿಟಿ ಮೂಲಕ ಅಭಿವೃದ್ಧಿಯಾಗುತ್ತಿದ್ದಂತೆ, ಅದಕ್ಕೆ ಸಂಪರ್ಕ ಕಲ್ಪಿಸುವ ನೆಲ್ಲಿಕಾಯಿ ರಸ್ತೆ ಮಾತ್ರ ಏಕಮುಖ ಸಂಚಾರಕ್ಕೆ ಬದಲಾಗಿದ್ದು, ಸ್ಥಳೀಯ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ.

ಬಂದರು ಪೊಲೀಸ್‌ ಠಾಣೆಯ ಪಕ್ಕದ ಪೆಟ್ರೋಲ್‌ ಬಂಕ್‌ ಬಳಿಯಿಂದ ಹ್ಯಾಮಿಲ್ಟನ್‌ ಸರ್ಕಲ್‌ ಗೆ ತೆರಳುವ ನೆಲ್ಲಿಕಾಯಿ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ. ಇಲ್ಲಿ ಹ್ಯಾಮಿಲ್ಟನ್‌ ಸರ್ಕಲ್‌ನಿಂದ ಬಂದರು ಪೊಲೀಸ್‌ ಠಾಣೆ ಕಡೆಗೆ ಬರಲು ಮಾತ್ರ ಅವಕಾಶ ನೀಡಲಾಗಿದೆ.

ಹೀಗಾಗಿ, ಬಂದರು ಪೊಲೀಸ್‌ ಠಾಣೆ ಕಡೆಯಿಂದ ರೊಸಾರಿಯೋ ಕಡೆಗೆ ತೆರಳಬೇಕಾದರೆ ಪರ್ಯಾಯವಾಗಿ ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌, ಕ್ಲಾಕ್‌ ಟವರ್‌, ಎ.ಬಿ. ಶೆಟ್ಟಿ ಸರ್ಕಲ್‌ ಮುಖೇನ ರೊಸಾರಿಯೋ ಕಡೆಗೆ ತೆರಳಬೇಕು ಅಥವಾ ಬಂದರು ಪೊಲೀಸ್‌ ಠಾಣೆ ಮುಂಭಾಗದಿಂದ ಬದ್ರಿಯಾ ಕಾಲೇಜು ಸಂಪರ್ಕ ರಸ್ತೆಯ ಮೂಲಕ ತೆರಳಬಹುದಾಗಿದೆ.

ʼಸದಾ ಸಂಚಾರ ದಟ್ಟಣೆ ಇರುವ ನಗರದ ಮುಖ್ಯ ರಸ್ತೆಯ ಸಂಚಾರ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ನೆಲ್ಲಿಕಾಯಿ ರಸ್ತೆಯನ್ನು ಏಕಮುಖ ಮಾಡಲಾಗಿದೆ’ ಎಂಬುದು ಅಧಿಕಾರಿಗಳ ಅಭಿಪ್ರಾಯ. ಆದರೆ “ಪರ್ಯಾಯವಾಗಿ ಬಳಕೆಗೆ ಇರುವ ಒಂದು ರಸ್ತೆ ಮತ್ತಷ್ಟು ಸಂಚಾರ ದಟ್ಟಣೆಗೆ ಕಾರಣವಾಗಿದೆ. ಇನ್ನೊಂದು ರಸ್ತೆಯಲ್ಲಿ ಸುತ್ತೂ ಬಳಸಿ ಹೋಗಬೇಕಾಗಿದೆ’ ಎಂಬುದು ಸ್ಥಳೀಯರ ವಾದ.

ಬಂದರು ಪೊಲೀಸ್‌ ಠಾಣೆ ಮುಂಭಾಗದಿಂದ ಬದ್ರಿಯಾ ಕಾಲೇಜು (ನಾರಾಯಣ ಹೊಟೇಲ್‌ ಮುಂಭಾಗ) ರಸ್ತೆಯನ್ನು ಪರ್ಯಾ ಯವಾಗಿ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಆದರೆ ಮೊದಲೇ ಸಂಚಾರ ದಟ್ಟಣೆಯಿಂದ ನಲುಗಿರುವ ಈ ರಸ್ತೆಯ ಎರಡೂ ಬದಿಯಲ್ಲಿ ಲೋಡಿಂಗ್‌-ಅನ್‌ಲೋಡಿಂಗ್‌ ಕಾರಣದಿಂದ ಪಾರ್ಕಿಂಗ್‌ ಕಿರಿಕಿರಿ ತಪ್ಪಿದ್ದಲ್ಲ. ಇಂತಹ ರಸ್ತೆಯಲ್ಲಿ ಇದೀಗ ಹೆಚ್ಚುವರಿಯಾಗಿ ವಾಹನ ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ಸಂಚಾರ ದಟ್ಟಣೆ ಇಲ್ಲಿ ಅಧಿಕವಾಗಿದೆ.

‌ಸಮಸ್ಯೆ ಆಗಬಾರದು: ಸ್ಮಾರ್ಟ್‌ಸಿಟಿ ಮೂಲಕ ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ಆದರೆ ಉತ್ತಮ. ಆದರೆ ಅದರಿಂದಾಗಿ ನಿತ್ಯ ಸಂಚಾರ ನಡೆಸುವ ವಾಹನದವರಿಗೆ ಸಮಸ್ಯೆ ಆಗಬಾರದು. ನೆಲ್ಲಿಕಾಯಿ ರಸ್ತೆಯಲ್ಲಿ ಸುಗಮ ಸಂಚಾರ ನಡೆಯುತ್ತಿತ್ತು. ಆದರೆ ಅದನ್ನು ಏಕಮುಖ ಮಾಡಿ ಈಗ ಸಮಸ್ಯೆ ಅನುಭವಿಸುವಂತಾಗಿದೆ. ಪರ್ಯಾಯವಾಗಿರುವ ರಸ್ತೆಗಳು ಇಕ್ಕಟ್ಟಾಗಿರುವಾಗ ಸಮರ್ಪಕವಾಗಿದ್ದ ರಸ್ತೆಯನ್ನು ಏಕಮುಖ ಮಾಡಿದ್ದು ಸರಿಯಲ್ಲ. – ಅಬ್ದುಲ್‌ ಲತೀಫ್‌, ಸ್ಥಳೀಯ ಕಾರ್ಪೊರೇಟರ್‌

ಪರಿಶೀಲಿಸಿ ಕ್ರಮ: ನೆಲ್ಲಿಕಾಯಿ ರಸ್ತೆ ಏಕಮುಖ ಮಾಡಿರುವ ಬಗ್ಗೆ ಕೆಲವರಿಂದ ಆಕ್ಷೇಪ ಕೇಳಿಬಂದಿದೆ. ಇದರ ಬಗ್ಗೆ ಸೂಕ್ತವಾಗಿ ಪರಿಶೀಲಿಸಿ ಶೀಘ್ರದಲ್ಲಿ ಒಂದು ಅಂತಿಮ ತೀರ್ಮಾನ ಮಾಡಲಾಗುವುದು. – ಪ್ರೇಮಾನಂದ ಶೆಟ್ಟಿ, ಮೇಯರ್‌, ಪಾಲಿಕೆ

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.