ಅಪರಾಧಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ರಮಾನಾಥ ರೈ
Team Udayavani, Jul 14, 2017, 3:45 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮತೀಯ ಘರ್ಷಣೆಗಳು ನಿಯೋಜಿತ ಸಂಘಟಿತ ಕೃತ್ಯಗಳಾಗಿದ್ದು ಇದನ್ನು ಹತ್ತಿಕ್ಕಲು ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾ ಯಿತ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಭಾಗವಹಿಸುವಿಕೆ ಯೊಂದಿಗೆ ಗುರುವಾರ ಆಯೋಜಿಸಿದ್ದ ಶಾಂತಿಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು “ಜಿಲ್ಲೆಯಲ್ಲಿ ಶೇ. 95ರಷ್ಟು ಮಂದಿ ಶಾಂತಿ ಸಾಮರಸ್ಯದ ಪರವಾಗಿದ್ದಾರೆ. ಪ್ರಚೋದನಕಾರಿ ಭಾಷಣಗಳ ಮೂಲಕ ಶಾಂತಿ ಸೌಹಾರ್ದ ಕದಡುವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು. ಕೊಲೆ, ಹಲ್ಲೆಗಳ ಹಿಂದಿರುವ ಪಿತೂರಿದಾರರನ್ನು ಪತ್ತೆ ಹಚ್ಚಿ ಬಂಧಿಸುವ ಕೆಲಸವಾಗಬೇಕು. ನಾವು ಯಾರೂ ಕೂಡ ಅಧಿಕಾರಿಗಳ ಕಾರ್ಯ ದಲ್ಲಿ ಹಸ್ತಕ್ಷೇಪ ಮಾಡುವು ದಿಲ್ಲ’ ಎಂದು ಹೇಳಿದರು.
ಸಚಿವ ಯು.ಟಿ. ಖಾದರ್ ಮಾತನಾಡಿ, ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯಮೂಡಿಸುವ ನಿಟ್ಟಿನಲ್ಲಿ ಶಾಂತಿಸಭೆ ಆಯೋಜಿಸಲಾಗಿದೆ. ಯಾರು ಕೂಡ ಗೊಂದಲಕ್ಕೊಳಗಾಗುವ ಆವಶ್ಯಕತೆ ಇಲ್ಲ. ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು.
ಮಂಗಳೂರು ಬಿಷಪರ ಅಪ್ತಕಾರ್ಯ ದರ್ಶಿ ಮೊ| ಡೆನ್ನಿಸ್ ಮೋರಾಸ್ ಪ್ರಭು ಮೊದಲಾದವರು ಮಾತನಾಡಿ ಶಾಂತಿ ಕಾಪಾಡಲು ಮನವಿ ಮಾಡಿದರು.
ಅಭಯಚಂದ್ರ ಜೈನ್, ಶಕುಂತಳಾ ಶೆಟ್ಟಿ, ಮೊದಿನ್ ಬಾವಾ, ಮೇಯರ್ ಕವಿತಾ ಸನಿಲ್, ಜಿಲ್ಲಾಧಿಕಾರಿ ಡಾ| ಕೆ.ಜೆ. ಜಗದೀಶ್, ಎಡಿಸಿ ಕುಮಾರ್, ಐಜಿಪಿ ಹರಿಶೇಖರನ್, ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಜಿಲ್ಲಾ ಎಸ್ಪಿ ಸುಧೀರ್ ರೆಡ್ಡಿ, ಜಿ.ಪಂ. ಸಿಇಒ ಡಾ| ಎಂ.ಆರ್. ರವಿ ಅವರು ಉಪಸ್ಥಿತರಿದ್ದರು.
ಬಿಜೆಪಿ ಬಹಿಷ್ಕಾರ, ಜೆಡಿಎಸ್ ಸಭಾತ್ಯಾಗ
ಶರತ್ ಕೊಲೆ ಅರೋಪಿಗಳನ್ನು ಪೊಲೀಸರಿಗೆ ಇನ್ನೂ ಪತ್ತೆಹಚ್ಚಲು ಆಗಿಲ್ಲ ಹಾಗೂ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಯಿಂದ ಹಿಂದೂ ಸಮಾಜದ ಮುಖಂಡರ ಮೇಲೆ ಹಲ್ಲೆಗಳಾಗುತ್ತಿದ್ದರೂ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಇದು ಹಿಂದೂ ಸಮಾಜಕ್ಕೆ ನೋವು ತಂದಿದೆ ಎಂದು ಹೇಳಿ ಬಿಜೆಪಿ ಶಾಂತಿಸಭೆಯನ್ನು ಬಹಿಷ್ಕರಿಸಿತು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ನಡೆಸಲುದ್ದೇಶಿಸಿರುವ ಶಾಂತಿ ಜಾಥಾಕ್ಕೆ ಜಿಲ್ಲಾಡಳಿತ ಅವಕಾಶ ನಿರಾಕರಿಸಿದೆ. ಇದನ್ನು ಪ್ರತಿಭಟಿಸಿ ಸಭೆಯನ್ನು ಜೆಡಿಎಸ್ ಬಹಿಷ್ಕರಿಸುತ್ತದೆ ಎಂದು ಪಕ್ಷದ ಮುಖಂಡರಾದ ವಸಂತ ಪೂಜಾರಿ ಹಾಗೂ ಅಬ್ದುಲ್ ಅಜೀಜ್ ಅವರು ಸಭೆಯಿಂದ ಹೊರನಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ