ರಸ್ತೆಗುಂಡಿ ಪರಿಹಾರ ನಗರಾಡಳಿತ ಸಂಸ್ಥೆಗಳ ಉತ್ತರದಾಯಿತ್ವ


Team Udayavani, Feb 9, 2020, 5:31 AM IST

lead1

ರಸ್ತೆ ಗುಂಡಿ ಹಾಗೂ ಅಸಮರ್ಪಕ ರಸ್ತೆ ನಿರ್ವಹಣೆ ಬಗ್ಗೆ ರಾಜ್ಯ ಹೈಕೋರ್ಟ್‌ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ನಿರಂತರ ಚಾಟಿ ಬೀಸುತ್ತಲೆ ಬಂದಿದೆ. ಇದೀಗ ಹೈಕೋರ್ಟ್‌ನ ನಿರ್ದೇಶನದಂತೆ ರಸ್ತೆ ಹಾಗೂ ಫುಟ್‌ಪಾತ್‌ಗಳ ಅಸಮರ್ಪಕ ನಿರ್ವಹಣೆಯಿಂದ ಉಂಟಾಗುವ ಅಪಘಾತಗಳಲ್ಲಿ ಪರಿಹಾರ ನೀಡುವ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.

ರಸ್ತೆಗಳಲ್ಲಿ ಗುಂಡಿ, ಅಸಮರ್ಪಕ ನಿರ್ವಹಣೆಯಿಂದ ವಾಹನ ಸವಾರರು, ಸಾರ್ವಜನಿಕರು ಅಪಘಾತಕ್ಕೊಳಗಾದರೆ ಅದಕ್ಕೆ ಯಾರು ಹೊಣೆ ಮತ್ತು ಸಂತ್ರಸ್ತರಿಗೆ ಪರಿಹಾರ ನೀಡುವ ಉತ್ತರದಾಯಿತ್ವವನ್ನು ಯಾರು ಹೊರಬೇಕು ಎಂಬ ಗೊಂದಲ ಹಲವಾರು ವರ್ಷಗಳಿಂದ ಬಗೆ ಹರಿಯದೆ ಉಳಿದಿದೆ. ರಸ್ತೆಗಳ ಅಸಮರ್ಪಕ ನಿರ್ವಹಣೆ ಕಾರಣದಿಂದ ವಾಹನಗಳು ಗುಂಡಿಗೆ ಬಿದ್ದು, ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸಿದರೆ ಇದಕ್ಕೆ ಆಯಾಯಾ ನಗರಾಡಳಿತ ಸಂಸ್ಥೆಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕು ಹಾಗೂ ಸಂತ್ರಸ್ತರಿಗೆ ಸೂಕ್ತ ಪರಿಹಾರವನ್ನು ನಗರಾಡಳಿತ ಸಂಸ್ಥೆಗಳೇ ನೀಡಬೇಕು ಎಂಬ ಬಗ್ಗೆ ಹಲವಾರು ಕಾನೂನು ಹೋರಾಟಗಳು ನಡೆದಿವೆ. ಇದೀಗ ಈ ಗೊಂದಲಗಳಿಗೆ ಪರಿಹಾರ ದೊರಕುವ ಮತ್ತು ಸಂಬಂಧಪಟ್ಟ ನಗರಾಡಳಿತ ಸಂಸ್ಥೆಗಳೇ ಇದರ ಉತ್ತರದಾಯಿತ್ವವನ್ನು ವಹಿಸಿಕೊಳ್ಳುವ ಉಪಕ್ರಮವೊಂದಕ್ಕೆ ಬೆಂಗಳೂರು ನಾಂದಿಯಾಗುತ್ತಿದೆ. ಒಟ್ಟು ರಾಜ್ಯದಲ್ಲಿ ರಸ್ತೆ ಗುಂಡಿ ಮತ್ತು ಅಸಮರ್ಪಕ ನಿರ್ವಹಣೆಯಿಂದ ಸಂಭವಿಸುವ ಅಪಘಾತಗಳಿಗೆ ಪರಿಹಾರ ನೀಡುವಲ್ಲಿ ಇದು ದಿಕ್ಸೂಚಿಯಾಗಲಿದೆ.

ರಸ್ತೆ ಗುಂಡಿ ಹಾಗೂ ಅಸಮರ್ಪಕ ರಸ್ತೆ ನಿರ್ವಹಣೆ ಬಗ್ಗೆ ರಾಜ್ಯ ಹೈಕೋರ್ಟ್‌ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ನಿರಂತರ ಚಾಟಿ ಬೀಸುತ್ತಲೆ ಬಂದಿದೆ. ಇದೀಗ ಇದೀಗ ಹೈಕೋರ್ಟ್‌ನ ನಿರ್ದೇಶನದಂತೆ ರಸ್ತೆ ಹಾಗೂ ಫುಟ್‌ಪಾತ್‌ಗಳ ಅಸಮರ್ಪಕ ನಿರ್ವಹಣೆಯಿಂದ ಉಂಟಾಗುವ ಅಪಘಾತಗಳಲ್ಲಿ ಪರಿಹಾರ ನೀಡುವ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ. ರಸ್ತೆಗುಂಡಿ ಹಾಗೂ ಅಸಮರ್ಪಕ ನಿರ್ವಹಣೆಯಿಂದ ಅಪಘಾತಕ್ಕೆ ಒಳಗಾಗುವ ಸಾರ್ವಜನಿಕರಿಗೆ ಪರಿಹಾರ ನೀಡುವ ಕುರಿತಂತೆ ಸಲ್ಲಿಕೆಯಾಗುವ ಅರ್ಜಿಗಳ ಇತ್ಯರ್ಥಕ್ಕೆ ನಿವೃತ್ತ ನ್ಯಾಯಾಧೀಶರೋರ್ವರನ್ನು ( ಕ್ಲೈಮ್‌) ಕಮಿಷನರ್‌ ಆಗಿ ನೇಮಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಪರಿಹಾರಕ್ಕೆ ಅರ್ಜಿ ನಮೂನೆ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು ಅರ್ಜಿ ನಮೂನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಬಿಬಿಎಂಪಿ ಹೇಳಿದೆ.

ರಸ್ತೆ ಗುಂಡಿ ಹಾಗೂ ಅಸಮರ್ಪಕ ನಿರ್ವಹಣೆಯಿಂದ ಅಪಘಾತಗಳು ಸಂಭವಿಸಿದಾಗ ಇದರ ಹೊಣೆಯಿಂದ ನುಣುಚಿಕೊಳ್ಳುವ ಪ್ರಯತ್ನವನ್ನು ಹಲವಾರು ವರ್ಷಗಳಿಂದ ನಗರಾಡಳಿತ ಸಂಸ್ಥೆಗಳು ಮಾಡುತ್ತಲೇ ಬರುತ್ತಿವೆ.

ಬಿಬಿಎಂಪಿ ಕೂಡ ಇದನ್ನೇ ಮಾಡಿತ್ತು. ರಸ್ತೆಗುಂಡಿಗಳಿಂದ ಸಂಭವಿಸುವ ಅಪಘಾತಗಳಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡಲು ಆರಂಭಿಸಿದರೆ ಬೇರೆ ಸಮಸ್ಯೆಗಳು ಉದ್ಬವಿಸಬಹುದು ಎಂಬ ಬಗ್ಗೆ ಬಿಬಿಎಂಪಿ ಆಯುಕ್ತರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ನಿರ್ದೇಶನವನ್ನು ಪ್ರಶ್ನಿಸಿ ಮೇಲ್ಮನವಿ ಕೌನ್ಸೆಲ್‌ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದೇಶ ಪಾಲಿಸದೆ ಇದರಿಂದ ತಪ್ಪಿಸಿಕೊಳ್ಳುವ ಪ್ರಯತ್ನಗಳ ವಿರುದ್ಧ ಆಯುಕ್ತರನ್ನು ನ್ಯಾಯಾಲಯ ತೀವ್ರ ತರಾಟೆ ತೆಗೆದುಕೊಂಡಿತ್ತು ಮತ್ತು ನ್ಯಾಯಾಂಗ ನಿಂದನೆಯ ಕ್ರಮ ಯಾಕೆ ಜರಗಿಸಬಾರದು ಎಂದು ಪ್ರಶ್ನಿಸಿತ್ತು.ಇದರಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಇದೀಗ ಪರಿಹಾರ ಕೋರಿ ಬರುವ ಅರ್ಜಿಗಳ ವಿಲೇವಾರಿ ವ್ಯವಸ್ಥೆಗೆ ಮುಂದಾಗಿದೆ.

ಬಿಬಿಎಂಪಿ ಇದೀಗ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ಆರಂಭಿಸಿರುವುದು ಸಾರ್ವಜನಿಕ ಸುರಕ್ಷತೆಯ ನಿಟ್ಟಿನಲ್ಲಿ ಒಂದು ಮಹತ್ವದ ಪೂರಕ ಕ್ರಮವಾಗಲಿದೆ ಹಾಗೂ ಇತರ ನಗರಾಡಳಿತ ಸಂಸ್ಥೆಗಳ ಮೇಲೂ ಅನ್ವಯವಾಗುವ ಸಾಧ್ಯತೆಗಳಿವೆ. ಅಪಘಾತಗಳು ಸಂಭವಿಸಿದ ಸಂದರ್ಭಗಳಲ್ಲಿ ಸಂತ್ರಸ್ತರು ನಗರಾಡಳಿತ ಸಂಸ್ಥೆಗಳಿಂದ ಪರಿಹಾರ ಕೋರಲು ಇದು ಮಾರ್ಗದರ್ಶಿಯಾಗಲಿದೆ.

ಇನ್ನೊಂದೆಡೆ ನಗರಾಡಳಿತ ಸಂಸ್ಥೆಗಳ ಪಾಲಿಗೆ ಇದು ಎಚ್ಚರಿಕೆಯೂ ಆಗಿದೆ. ರಸ್ತೆಗುಂಡಿಗಳ ದುರಸ್ತಿಗೊಳಿಸಲು ಹಾಗೂ ರಸ್ತೆಗಳನ್ನು ಸುವ್ಯವಸ್ಥೆ ಸ್ಥಿತಿಯಲ್ಲಿಡುವ ಕಾರ್ಯಕ್ಕೆ ತುರ್ತುನೆಲೆಯಲ್ಲಿ ಮುಂದಾಗುವುದು ಅನಿವಾರ್ಯವಾಗಲಿದೆ. ರಸ್ತೆ ಅವ್ಯವಸೆœಯಿಂದ ಅಪಘಾತಗಳು ಸಂಭವಿಸಿದ ಸಂದರ್ಭಗಳಲ್ಲಿ ಲಕ್ಷಾಂತರ ರೂ. ಪರಿಹಾರ ನೀಡಬೇಕಾಗುತ್ತದೆ. ಬರೇ ಪರಿಹಾರದ ಪ್ರಶ್ನೆ ಮಾತ್ರವಲ್ಲ. ಸಂಬಂಧಪಟ್ಟ ನಗರಾಡಳಿತ ಸಂಸ್ಥೆಗಳಿಗೆ ಇದೊಂದು ಕಪ್ಪುಚುಕ್ಕೆ ಕೂಡ ಆಗಲಿದೆ.

ದಿಕ್ಸೂಚಿಯಾಗುವ ಉಪಕ್ರಮ
ಬೆಂಗಳೂರಿನಲ್ಲಿ ಬಿಬಿಎಂಪಿ ಕೈಗೊಂಡಿರುವ ಉಪಕ್ರಮ ರಾಜ್ಯದಲ್ಲಿ ಮಂಗಳೂರು ಸೇರಿದಂತೆ ನಗರಗಳಲ್ಲಿ ರಸ್ತೆಗುಂಡಿ ಹಾಗೂ ಅಸಮರ್ಪಕ ರಸ್ತೆ ನಿರ್ವಹಣೆ ಸಮಸ್ಯೆಗೆ ಒಂದು ನಿರ್ದಿಷ್ಟವಾದ ಪರಿಹಾರವನ್ನು ರೂಪಿಸುವಲ್ಲಿ ದಿಕ್ಸೂಚಿಯಾಗಲಿದೆ. ರಸ್ತೆ ಅವ್ಯವಸ್ಥೆ ಬಗ್ಗೆ ನಗರಾಡಳಿತ ಸಂಸ್ಥೆಗಳು ಬಹುತೇಕ ನಿರ್ಲಕ್ಷ್ಯ ಧೋರಣೆಯನ್ನು ಅನುಸರಿಸುತ್ತಾ ಬರುತ್ತಿವೆ. ಮಾರಣಾಂತಿಕ ಅಪಘಾತಗಳು ಸಂಭವಿಸಿದರೂ, ಸಾರ್ವಜನಿಕರು ಇದರ ಬಗ್ಗೆ ಸಂಬಂಧಪಟ್ಟ ನಗರಾಡಳಿತದ ಗಮನ ಸೆಳೆದರೂ ಅನೇಕ ಬಾರಿ ಇದು ಅರಣ್ಯರೋಧನವಾದ ಪ್ರಕರಣಗಳು ಬಹಳಷ್ಟಿವೆ. ರಸ್ತೆಗುಂಡಿ ಅಥವಾ ಅಸಮರ್ಪಕ ರಸ್ತೆ ನಿರ್ವಹಣೆಯಿಂದ ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಕೆಲವು ಬಾರಿ ಜಿಲ್ಲಾಡಳಿತ, ಪೊಲೀಸ್‌ ಅಧಿಕಾರಿಗಳು ಸಂಬಂಧಪಟ್ಟ ನಗರಾಡಳಿತ ಮುಖ್ಯಸ್ಥರ ವಿರುದ್ಧ ಕ್ರಿಮಿನಲ್‌ ದಾವೆ ದಾಖಲಿಸಿಕೊಳ್ಳುವ ಎಚ್ಚರಿಕೆ ನೀಡಿದ್ದೂ ಇದೆ. ಮಂಗಳೂರು ನಗರವನ್ನೇ ಉದಾಹರಣೆಯಾಗಿ ತೆಗೆದುಕೊಂಡರೆ ಫುಟ್‌ಪಾತ್‌ಗಳು, ರಸ್ತೆಗಳಲ್ಲಿ ಗುಂಡಿಗಳು ಅಪಾಯಕಾರಿಯಾಗಿ ಬಾಯ್ದೆರೆದು ನಿಂತಿರುವ ನಿದರ್ಶನಗಳಿವೆ. ರಸ್ತೆಗಳನ್ನು ವಿವಿಧ ಕಾಮಗಾರಿಗಳಿಗೆ ಅಗೆದು ತಿಂಗಳುಗಟ್ಟಲೇ ಹಾಗೆಯೇ ಬಿಟ್ಟು ಹೋಗುವ ಪ್ರಮೇಯಗಳು ಕೂಡ ಇವೆ. ಇಂತಹ ಸನ್ನಿವೇಶಗಳಲ್ಲಿ ಪಾದಚಾರಿಗಳು, ದ್ವಿಚಕ್ರವಾಹನಗಳು ಅಪಘಾತಕ್ಕೀಡಾದರೆ ಸವಾರರು ಸಂಕಷ್ಟ ಅನುಭವಿಸಬೇಕಾಗುತ್ತದೆ.

-ಕೇಶವ ಕುಂದರ್‌

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.