ಮಂಗಳೂರು: ಜಿಲ್ಲಾಡಳಿತದ ಅವಕಾಶವಿದ್ದರೂ ತೆರೆದಿಲ್ಲ ತರಕಾರಿ, ಮೀನು ಮಾರುಕಟ್ಟೆ
Team Udayavani, May 24, 2020, 9:31 AM IST
ಮಂಗಳೂರು: ಕೋವಿಡ್-19 ಕಾರಣ ಇಂದು ಸಂಪೂರ್ಣ ಲಾಕ್ ಡೌನ್ ಹಾಕಲಾಗಿದ್ದು, ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಆಗಿದೆ. ಜಿಲ್ಲಾಡಳಿತ ಅವಕಾಶ ನೀಡಿದ್ದರೂ ತರಕಾರಿ ಮಾರುಕಟ್ಟೆಗಳು ತೆರೆದಿಲ್ಲ.
ಇಂದು ಸಂಪೂರ್ಣ ಲಾಕ್ ಡೌನ್ ಇದ್ದರೂ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ ವ್ಯಾಪಾರಿಗಳು ಅಂಗಡಿಗಳನ್ನು ತೆರೆಯದೆ ಬಂದ್ ಗೆ ಬೆಂಬಲ ನೀಡಿದ್ದಾರೆ.
ಮಂಗಳೂರಿನ ಕದ್ರಿಯಲ್ಲಿರೋ ಮಲ್ಲಿಕಟ್ಟೆ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿದ್ದು, ಭಾಗಶಃ ಮಂಗಳೂರಿನಲ್ಲಿ ಇಂದು ಎಲ್ಲಾ ತರಕಾರಿ ಮಾರುಕಟ್ಟೆ ಮುಚ್ಚಿವೆ. ಮೀನು-ಮಾಂಸ ಕೂಡ ಇಂದು ಸಿಗುವುದು ಅನುಮಾನ ಎನ್ನಲಾಗಿದೆ.
ನಗರದಲ್ಲಿ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳು ರಸ್ತೆಗಿಳಿದಿಲ್ಲ. ತಿಂಗಳುಗಳ ಬಳಿಕ ಕೆಲವು ದಿನಗಳ ಕಾಲ ಸ್ವಲ್ಪ ಬ್ಯುಸಿಯಾಗಿದ್ದ ರಸ್ತೆಗಳು ಮತ್ತೆ ಬಣಗುಟ್ಟುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್