ಸಂಡೇ ಲಾಕ್ಡೌನ್ ಸಡಿಲಿಕೆ; ವಾಹನ ಸಂಚಾರ ನಿರಾತಂಕ
Team Udayavani, Jun 1, 2020, 5:27 AM IST
ಮಂಗಳೂರು: ರವಿವಾರ ಲಾಕ್ಡೌನ್ಗೆ ರಾಜ್ಯ ಸರಕಾರ ವಿನಾಯಿತಿ ನೀಡಿದ ಹಿನ್ನೆಲೆಯಲ್ಲಿ ಎಂದಿನಂತೆಯೇ ವಾಹನ ಸಂಚಾರ ಹಾಗೂ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ ವಹಿವಾಟು ಕೂಡ ಜೋರಾಗಿತ್ತು.
ಕೆಎಸ್ಆರ್ಟಿಸಿಯ ಕೆಲವು ರೂಟ್ಗಳ ನರ್ಮ್ ಬಸ್ಗಳು ವಾರದ ಆರು ದಿನ ಓಡಾಟ ನಡೆಸಿದಂತೆಯೇ ರವಿವಾರವೂ ಸಂಚರಿಸಿದ್ದು, ಪ್ರಯಾಣಿಕರ ಸಂಖ್ಯೆ ಮಾತ್ರ ಕಡಿಮೆಯಿತ್ತು. ಉಳಿದಂತೆ ರಸ್ತೆಯಲ್ಲಿ ಖಾಸಗಿ ವಾಹನ ಸಂಚಾರ ಎಂದಿನಂತೆಯೇ ಇತ್ತು. ನಗರದ ಎಲ್ಲ ಮಾರುಕಟ್ಟೆ, ಜಿಲ್ಲೆಯ ಬಹುತೇಕ ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ರವಿವಾರ ವಾರದ ರಜೆ ಹೊಂದಿದ್ದ ಕೆಲವು ಅಂಗಡಿ ಮುಂಗಟ್ಟುಗಳು ಮಾತ್ರ ಮುಚ್ಚಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ