ಸುರತ್ಕಲ್: ಕೋವಿಡ್ ನಿಭಾಯಿಸಲು ಭಾರತ ಸಶಕ್ತ; ಡಾ. ಭರತ್ ಶೆಟ್ಟಿ
Team Udayavani, Jan 16, 2021, 2:33 PM IST
ಸುರತ್ಕಲ್: ಕೋವಿಡ್ ಹೊಡೆತದಿಂದ ದೇಶ ಸಾಕಷ್ಟು ಕಷ್ಟ ನಷ್ಟ ಅನುಭವಿಸಿದರೂ ಇದೀಗ ದೇಶದಲ್ಲಿ ವ್ಯಾಕ್ಸಿನ್ ಬಳಕೆ ಆರಂಭವಾಗಿರುವುದರಿಂದ 2ನೇ ಕೋವಿಡ್ ಅಲೆಯನ್ನು ನಿಭಾಯಿಸಲು ದೇಶ ಸಶಕ್ತವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು.
ಅವರು ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ವಿರುದ್ದ ಆರಂಭವಾದ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಜನರ ಸೇವೆಗೈಯುವ ಕೋವಿಡ್ ವಾರಿಯರ್ಸ್ ಗೆ ಪ್ರಥಮ ಆದ್ಯತೆ ನೀಡುವ ದೇಶದ ಪ್ರಧಾನಿಗಳು, ಹಂತ ಹಂತವಾಗಿ ಸರ್ವರಿಗೂ ವ್ಯಾಕ್ಸಿನ್ ದೊರಕುವಂತಾಗಲು ಕ್ರಮ ಕೈಗೊಳ್ಳಲಾಗಿದೆ.
ವ್ಯಾಕ್ಸಿನ್ ವಿರುದ್ದ ಯಾವುದೇ ಸಂದೇಹ ಬೇಡ, ಹಲವು ಸುತ್ತಿನ ಪರೀಕ್ಷೆಯ ಬಳಿಕವೇ ಸುರಕ್ಷಿತ ಎಂದು ಇದೀಗ ಕೋವಿಡ್ ವಿರುದ್ದ ಲಸಿಕೆ ಅಭಿಯಾನ ಆರಂಭವಾಗಿದೆ. ಇದೀಗ ಇರುವ ಸುರಕ್ಷತಾ ಕ್ರಮಗಳನ್ನು ಮುಂದುವರೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾಸ್ಕ್, ಸಾಮಾಜಿಕ ಅಂತರ, ಕೈಯನ್ನು ಸ್ವಚ್ಚವಾಗಿಟ್ಟುಕೊಳ್ಳುವ ಅಭ್ಯಾಸವನ್ನು ಮುಂದುವರೆಸಿಕೊಂಡು ಹೋಗಬೇಕಿದೆ ಎಂದರು.
ಇದನ್ನೂ ಓದಿ: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಪಾಲಿಕೆ ಸದಸ್ಯರಾದ ನಯನ ಕೋಟ್ಯಾನ್, ಸರಿತ ಶಶಿಧರ್, ಶೋಭಾ ರಾಜೇಶ್, ಲಕ್ಷ್ಮೀ ಶೇಖರ್ ದೇವಾಡಿಗ, ಶ್ವೇತಾ ಪೂಜಾರಿ, ಶಂಶಾದ್, ಜಿಲ್ಲಾ ಮಲೇರಿಯಾ ನಿಯಂತ್ರಣ ವಿಭಾಗದ ಡಿಎಂಒ ಡಾ. ನವೀನ್ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಕತಿಜಾ ಶಲುಲಾ, ಆಡಳಿತ ವಿಭಾಗದ ಭಾಸ್ಕರ್ ಕೋಟ್ಯಾನ್, ಎಲ್ ಎಚ್ ಎ ವಿಜಯ, ಡಿಎಚ್ ಇಒ ಆಲಿಯಮ್ಮ , ಸಿಟಿ ಪ್ರೋಗ್ರಾಂ ಮ್ಯಾನೇಜರ್ ಪಯಸ್ಬಿನಿ, ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬಂದಿಗಳು ಉಪಸ್ಥಿತರಿದ್ದರು.
ಇಲ್ಲಿನ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿಯ ಒಟ್ಟು 100 ಮಂದಿಗೆ ಕೋವಿಡ್ ಲಸಿಕೆ ಹಾಕಲಾಯಿತು. ಮುಂಜಾಗ್ರತಾ ಕ್ರಮವಾಗಿ ಲಸಿಕೆ ನಿಗಾ ಘಟಕ, ಆಕ್ಸಿಜನ್ ವ್ಯವಸ್ಥೆ, ಅಂಬುಲೆನ್ಸ್ ಮತ್ತಿತರ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…