ಸುರತ್ಕಲ್ ಪಾಲಿಕೆ ವಲಯ ಕಟ್ಟಡಕ್ಕೆ ಅಂತಿಮ‌ ಸ್ಪರ್ಶ

5.50 ಕೋಟಿ ರೂ. ಮಿಕ್ಕಿ ಅನುದಾನದಲ್ಲಿ ಕಾಮಗಾರಿ

Team Udayavani, Aug 12, 2022, 3:54 PM IST

15

ಸುರತ್ಕಲ್‌: ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್‌ ವಲಯವಾಗಿ ಐದು ವರ್ಷ ಸಮೀಪಿಸುತ್ತಿದ್ದು, ಜನ ನಿಭಿಡ ವಲಯ ಕಚೇರಿಗೆ ಇದೀಗ ನೂತನ ಕಟ್ಟಡ ನಿರ್ಮಾಣವಾಗುತ್ತಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ.

ಈಗಾಗಲೇ ಕಟ್ಟಡ ಕಾಮಗಾರಿ ಮುಗಿದಿದ್ದು, ಪೀಠೊ ಪಕರಣ ಜೋಡಿಸುವ ಕಾರ್ಯ ನಡೆಯುತ್ತಿದೆ. ಒಟ್ಟು ಎರಡು ಅಂತಸ್ತುಗಳ ಈ ಕಟ್ಟಡದಲ್ಲಿ ನೆಲ ಅಂತಸ್ತಿನಲ್ಲಿ ಪಾರ್ಕಿಂಗ್‌ ಅವಕಾಶ ನೀಡಲಾಗಿದೆ. ಉಳಿದಂತೆ ಮೊದಲ ಅಂತಸ್ತಿನಲ್ಲಿ ವಿವಿಧ ವಿಭಾಗಗಳ ಕಚೇರಿ ಇರಲಿದೆ.

ಶಾಸಕ ಡಾ| ಭರತ್‌ ಶೆಟ್ಟಿ ವೈ., ವಲಯ ಆಯುಕ್ತರಿಗೆ, ಎಂಜಿನಿಯರ್‌ ಗಳಿಗೆ ಕೊಠಡಿ ಹಾಗೂ ಸಭೆ ನಡೆಸಲು ಸಭಾಂಗಣವಿದೆ. ಪಾಲಿಕೆ ಸದಸ್ಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಜನರ ಭೇಟಿಗಾಗಿ ಅವಕಾಶ ಕಲ್ಪಿಸಲಾಗಿದೆ.

ಈಗಿರುವ ಕಚೇರಿ ಕಿರಿದಾಗಿದ್ದು, ಹತ್ತೈವತ್ತು ನಾಗರಿಕರು ಸೇರಲು ಸ್ಥಳಾವಕಾಶವಿಲ್ಲ. ಹೀಗಾಗಿ ಆಡಳಿತ ಯಂತ್ರ ಸುಗಮವಾಗಿ ಸಾಗಲು ಬೃಹತ್‌ ಕಟ್ಟಡ ಅಂದಾಜು 5.50 ಕೋಟಿ ರೂ. ಮಿಕ್ಕಿ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ.

ಪ್ರಯೋಜನವೇನು?

ಮಂಗಳೂರು ಲಾಲ್‌ ಬಾಗ್‌ನಲ್ಲಿರುವ ಕೇಂದ್ರ ಕಚೇರಿ ಸದಾ ಜನಜಂಗುಳಿಯಿಂದ ಕೂಡಿರುತ್ತದೆ ಮಾತ್ರವಲ್ಲ, ಸಣ್ಣ ಕೆಲಸಕ್ಕೂ ಹೊರವಲಯದ ಜನತೆ ನಗರಕ್ಕೆ ಬರಬೇಕಾಗುತ್ತದೆ. ಒಂದು ಬಾರಿಗೆ ಆಗದಿದ್ದಲ್ಲಿ ಹಲವು ಬಾರಿ ಅಲ್ಲಿಗೆ ಅಲೆದಾಡಬೇಕಾಗುತ್ತದೆ. ಅಭಿವೃದ್ಧಿ ಕಾರ್ಯ ಚುರುಕು ಗೊಳಿಸುವ ನಿಟ್ಟಿನಲ್ಲಿ ಕಡತ ವಿಲೇವಾಗಿ ಶೀಘ್ರವಾಗಲು ವಲಯ ಕಚೇರಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಆಯಾ ವ್ಯಾಪ್ತಿಯ ನಿವಾಸಿಗಳಿಗೆ ವಲಯ ಕಚೇರಿಯಲ್ಲಿ ಸೌಲಭ್ಯ ದೊರಕುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸುರತ್ಕಲ್‌ ವಲಯ ಕಚೇರಿಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ.

ನೂತನ ಕಟ್ಟಡ ನಿರ್ಮಾಣದಿಂದ ಜನತೆಗೆ ಸಾಕಷ್ಟು ಸ್ಥಳಾವಕಾಶ ದೊರಕಲಿದ್ದು ಕುಳಿತುಕೊಳ್ಳಲು ಆಸನ, ಟೋಕನ್‌ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಒಂದೇ ಸೂರಿನಡಿ ಅಧಿಕಾರಿಗಳ ಭೇಟಿ ಮತ್ತಿತರ ವ್ಯವಸ್ಥೆಗಳು ಸಿಗಲಿವೆ. ಶಾಸಕರ ಭೇಟಿಗೂ ಅವಕಾಶ ಇರುವುದರಿಂದ ತ್ವರಿತವಾಗಿ ಪಾಲಿಕೆ ಕೆಲಸ ಕಾರ್ಯವಾಗಲು ಪ್ರಯೋಜನವಾಗಲಿದೆ.

ಯಾವೆಲ್ಲ ಅನುಮತಿ ಸಿಗುತ್ತಿದೆ

ನಗರ ಯೋಜನೆಯಡಿ 500 ಚ.ಮೀ. ವಾಸ, ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ, ಪ್ರಮಾಣ ಪತ್ರ, ನವೀಕರಣ ಇತ್ಯಾದಿ, ಇದರ ಜತೆಗೆ ಖಾತಾ ನೋಂದಣಿ, ಕಟ್ಟಡ ನಂಬ್ರ ವಿತರಣೆ ಸಹಿತ ಆರೋಗ್ಯ ಶಾಖೆಯಡಿ ಪರವಾನಿಗೆ, ಉದ್ದಿಮೆ ಪರವಾನಿಗೆ ಮತ್ತಿತರ ಜವಾಬ್ದಾರಿ ನೀಡಲಾಗಿದೆ.

ಜನಸ್ನೇಹಿ ಆಡಳಿತ ವ್ಯವಸ್ಥೆಗೆ ಕ್ರಮ: ಜನತಾ ದರ್ಶನಕ್ಕೆ ಸ್ಥಳಾವಕಾಶವನ್ನು ನನ್ನ ಕಚೇರಿಯಲ್ಲಿಯೇ ನೀಡಲಾಗಿದೆ. ಸಂದರ್ಶನಕ್ಕೆ ಸಾರ್ವಜನಿಕರು ಬಂದಲ್ಲಿ ಎಲ್ಲ ಸೌಲಭ್ಯ ಸಿಗುವಂತಾಗಲು ಹೊಸಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆ. 25ರ ಒಳಗಾಗಿ ಇದನ್ನು ಸಾರ್ವಜನಿಕರ ಬಳಕೆಗೆ ಉಪಯೋಗಿಸಲು ತೀರ್ಮಾನಿಸಲಾಗಿದೆ. ಜನಸ್ನೇಹಿ ಆಡಳಿತ ವ್ಯವಸ್ಥೆ ಮಾಡಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. –ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಪರಿಶೀಲಿಸಿ ಉದ್ಘಾಟನೆಗೆ ದಿನ ನಿಗದಿ: ಉದ್ಘಾಟನೆಗೂ ಮುನ್ನ ಆನ್‌ಲೈನ್‌ ವ್ಯವಸ್ಥೆ ಹಾಗೂ ಕಟ್ಟಡದಲ್ಲಿ ಸಮರ್ಪಕ ಕಾರ್ಯಚಟುವಟಿಕೆ ಸರಿಯಿದೆಯೇ ಎಂಬುದನ್ನು ಪರಿಶೀಲಿಸಲ್ಲಿದ್ದೇವೆ. ಬಳಿಕ ಉದ್ಘಾಟನೆಗೆ ದಿನ ನಿಗದಿ ಮಾಡಲಾಗುವುದು. – ವಾಣಿ ವಿ. ಆಳ್ವ, ವಲಯ ಆಯುಕ್ತರು ಸುರತ್ಕಲ್

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.