ಸುರತ್ಕಲ್ ಟೋಲ್ ನವೆಂಬರ್ನಲ್ಲಿ ತೆರವು : ಸಚಿವ ಸುನಿಲ್ ಕುಮಾರ್
ಕಾಂಗ್ರೆಸ್ ನಿಂದ 21 ದಿನ ಕರ್ನಾಟಕದಲ್ಲಿ ಭಾರತ್ ಜೋಡೊ ನಾಟಕ
Team Udayavani, Oct 22, 2022, 5:31 PM IST
ಉಡುಪಿ: ಸುರತ್ಕಲ್ ಟೋಲ್ಗೇಟ್ ಅನ್ನು ನವೆಂಬರ್ ಅಂತ್ಯದಲ್ಲಿ ತೆರವು ಮಾಡಲಾಗುವುದು. ತೆರವು ಮಾಡುವ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾಭವನದ ಸಹಯೋಗದಲ್ಲಿ ಶನಿವಾರ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಆಂತರಿಕ ಪ್ರಜಾಪ್ರಭುತ್ವದ ಬಗ್ಗೆ ತಡವಾಗಿ ಅರಿವಿಗೆ ಬಂದಿದೆ. ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಮಾಡಿದ್ದರೂ ಗಾಂಧಿ ಕುಟುಂಬದ ಕಪಿಮುಷ್ಠಿಯಲ್ಲೇ ಅಧಿಕಾರ ಇರಲಿದೆ. ಮಲ್ಲಿಕಾರ್ಜುನ ಖರ್ಗೆಯವರು ನೆಪಮಾತ್ರಕ್ಕೆ ಅಧ್ಯಕ್ಷರಾಗಿರಲಿದ್ದಾರೆ. ಅಧಿಕಾರವನ್ನು ಗಾಂಧಿ ಕುಟುಂಬವೇ ನಿರ್ವಹಿಸಲಿದೆ. ಭಾರತ್ ಜೋಡೋ ಹೆಸರಿನಲ್ಲಿ ಕರ್ನಾಟಕದಲ್ಲಿ 21 ನಾಟಕ ಆಡಿದ್ದಾರೆ. ಇದು ಮುಂದಿನ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಬಿಜೆಪಿ ಸದಾ ಹೊಸ ಪ್ರಯೋಗವನ್ನು ಮಾಡುತ್ತಲೇ ಇರುತ್ತದೆ. ಮುಂದಿನ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ನೀಡುವುದು ಪಕ್ಷ ನಿರ್ಧಾರವಾಗಿದೆ. ಮಿಷನ್ 150 ಸಾಧಿಸಲಿದ್ದೇವೆ. ಇದಕ್ಕೆ ಬೇಕಾದ ತಯಾರಿಗಳು ಪಕ್ಷದಲ್ಲಿ ನಡೆಯುತ್ತಿದೆ. ಪಕ್ಷದ ಜವಾಬ್ದಾರಿ ಹಂಚಿಕೆಯಲ್ಲಿ ಮಹಿಳೆಯರಿಗೂ ಶೇ.33ರಷ್ಟು ಮೀಸಲಾತಿ ನೀಡುತ್ತಿದ್ದೇವೆ ಎಂದು ಹೇಳಿದರು.
ಕನ್ನಡ ಕಡ್ಡಾಯ
ಕನ್ನಡ ಮಾಧ್ಯಮ ಕಡ್ಡಾಯ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಿದ್ದೇವೆ. ಈ ಬಗ್ಗೆ ಸಾರ್ವಜನಿಕರ ಚರ್ಚೆ ಆಗುತ್ತಿದೆ. ಸಾಹಿತಿಗಳು, ವಿವಿಧ ಕ್ಷೇತ್ರದ ಪ್ರಮುಖರು, ಸಾರ್ವಜನಿಕರಿಂದ ಬರುವ ಪ್ರತಿಕ್ರಿಯೆಗಳ ಆಧಾರದಲ್ಲಿ ಮಸೂದೆಗೆ ಸೂಕ್ತ ರೂಪ ನೀಡಲಿದ್ದೇವೆ. ಶಿಕ್ಷಣ, ಆಡಳಿತ, ಉದ್ಯಮ, ಕಾನೂನು ಹೀಗೆ ಎಲ್ಲ ವಲಯದಲ್ಲೂ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂಬ ಸದುದ್ದೇಶದಿಂದ ಈ ಮಸೂದೆ ತರಲಿದ್ದೇವೆ ಎಂದರು.
ದೈವಾರಾಧನೆ ನಮ್ಮ ಸಂಸ್ಕೃತಿಯ ಭಾಗ
ಕರಾವಳಿಗರು ನಂಬಿಕೆ, ಶ್ರದ್ಧೆ, ಸಂಸ್ಕೃತಿಯ ಮೇಲೆ ಬದುಕುತ್ತಿರುವವರು. ದೈವಾರಾಧನೆ ನಮ್ಮ ಸಂಸ್ಕೃತಿಯ ಭಾಗವಾಗಿದೆ. ಸಂಸ್ಕೃತಿ, ನಂಬಿಕೆ, ಶ್ರದ್ಧೆ ಇಲ್ಲದವರು ಮಾತ್ರ ಇದರ ವಿರುದ್ಧ ಮಾತನಾಡಲು ಸಾಧ್ಯ. ಕಾಂತಾರ ಸಿನೆಮಾ ನಮ್ಮ ಸಂಸ್ಕೃತಿಯನ್ನು ಉತ್ತಮ ರೀತಿಯಲ್ಲಿ ಜನರಿಗೆ ಪರಿಚಯ ಮಾಡುತ್ತಿದೆ ಎಂದರು.
ಕಾರ್ಕಳದ ಆನೇಕೆರೆ ಒತ್ತುವರಿ ಆಗುತ್ತಿಲ್ಲ. ಅದರ ಸೌಂದರ್ಯ ಹೆಚ್ಚಿಸಲು ಕಾಮಗಾರಿ ನಡೆಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ