
ದಸರಾ ಸಂಭ್ರಮಕ್ಕೆ ವೈವಿಧ್ಯ ಸ್ತಬ್ಧ ಚಿತ್ರ!
Team Udayavani, Oct 4, 2022, 1:24 PM IST

ಮಹಾನಗರ: ನವರಾತ್ರಿ ಮಹೋತ್ಸವದಲ್ಲಿ ಜನಸಮುದಾಯದ ಭಕ್ತಿಯ ಸಿಂಚನದ ಜತೆಗೆ ಶಾರದಾ ಮಾತೆಯ ಭವ್ಯ ಮೆರವಣಿಗೆಗೆ ಆಧ್ಯಾತ್ಮಿಕ ಹಾಗೂ ಸಮಾಜಮುಖೀ ಸಂದೇಶ ಗಳೊಂದಿಗೆ ಮೆರುಗು ತುಂಬುವುದೇ ಸ್ತಬ್ಧ ಚಿತ್ರಗಳು!
ಭವ್ಯ ಶೋಭಾಯಾತ್ರೆಯಲ್ಲಿ ಶಾರದಾ ಮಾತೆಯು ಭಕ್ತಿಯ ಕೇಂದ್ರ ವಾದರೆ, ಸ್ತಬ್ಧಚಿತ್ರಗಳು ಸಂದೇಶ ಸಾರುವ ಆಕರ್ಷಕ ಪರಿಕಲ್ಪನೆ. ಮಂಗಳೂರು ದಸರಾ, ಮಂಗಳಾದೇವಿ ಸಹಿತ ವಿವಿಧ ಕಡೆಗಳಲ್ಲಿ ನಡೆಯುವ ದಸರಾ ಶೋಭಾಯಾತ್ರೆಗೆ ಟ್ಯಾಬ್ಲೋಗಳು ಬಹು ವಿಧದಲ್ಲಿ ಜನಾಕರ್ಷಕ.
ಪೌರಾಣಿಕ ಹಿನ್ನೆಲೆ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಸಂದೇಶಗಳನ್ನು ಸಾರುವುದು ಟ್ಯಾಬ್ಲೋಗಳ ಮುಖ್ಯ ಆದ್ಯತೆ. ಇದಕ್ಕಾಗಿ ಆಕರ್ಷಕ ವಿಗ್ರಹಗಳನ್ನು ರಚಿಸಿ ಅದಕ್ಕೆ ಬಣ್ಣ ಹಾಗೂ ವಸ್ತ್ರ ಶೃಂಗಾರದೊಂದಿಗೆ ಕಂಗೊಳಿಸುವಂತೆ ಮಾಡಲಾಗುತ್ತದೆ.
ಬೆಳಕಿನ ಚಿತ್ತಾರದೊಂದಿಗೆ ಗಮನ ಸೆಳೆಯುವಂತೆ ಮಾಡಲಾಗುತ್ತದೆ. ಹಿನ್ನೆಲೆ ಧ್ವನಿ ಮತ್ತಷ್ಟು ಆಕರ್ಷಿಸುತ್ತದೆ. ಈ ಮಧ್ಯೆ, ಕೆಲವು ಸ್ತಬ್ಧ ಚಿತ್ರಗಳಲ್ಲಿ ಹುಲಿ ವೇಷ ಸಹಿತ ನೃತ್ಯವೇ ಪ್ರಧಾನವಾಗಿರುತ್ತದೆ.
ಕರಾವಳಿ ಮಾತ್ರವಲ್ಲದೆ ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯುವ ದಸರಾ ಅಥವಾ ಇತರ ಉತ್ಸವ ಸಂದರ್ಭಗಳಿಗೆ ಟ್ಯಾಬ್ಲೋಗಳನ್ನು ಮಂಗಳೂರು ಕೇಂದ್ರಿತವಾಗಿಯೇ ಪಡೆದುಕೊಂಡು ಪ್ರದರ್ಶಿಸಲಾಗುತ್ತದೆ ಎಂಬುದು ವಿಶೇಷ. ಹಲವು ಕಲಾವಿದರು ಇದಕ್ಕಾಗಿ ವಿಶೇಷವಾಗಿ ಶ್ರಮಿಸುತ್ತಿದ್ದಾರೆ.
ಸ್ತಬ್ಧ ಚಿತ್ರ ರಚನೆ ಹೇಗೆ?
ಖ್ಯಾತ ಕಲಾವಿದ, ಕಲಾಕೃತಿಗಳನ್ನು ರಚನೆ ಮಾಡುವ ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಪ್ರಧಾನ ಅರ್ಚಕ, ಬಾಲಕೃಷ್ಣ ಅವರು “ಸುದಿನ’ ಜತೆಗೆ ಮಾತನಾಡಿ, “ಸ್ತಬ್ಧತ್ರಗಳ ನಿರ್ಮಾಣದಲ್ಲಿ ಹಲವು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದೇನೆ. ಮಂಗಳೂರು, ಮೈಸೂರು, ಮಡಿಕೇರಿ ದಸರಾಗಳಿಗೆ ಟ್ಯಾಬ್ಲೋಗಳನ್ನು ಸಿದ್ಧಪಡಿಸಿ ನೀಡಲಾಗುತ್ತದೆ.
ಈ ಬಾರಿ ಉಚ್ಚಿಲ ದಸರಾಕ್ಕೂ ಹಲವು ಟ್ಯಾಬ್ಲೋ ಇಲ್ಲಿಂದಲೇ ಸಿದ್ಧಪಡಿ ಸಲಾಗುತ್ತದೆ. ಉಳಿದಂತೆ ಮೊಸರು ಕುಡಿಕೆ ಸಹಿತ ವಿವಿಧ ಕಡೆಗಳ ಉತ್ಸವ ಗಳಿಗೆ ಸರಕಾರಿ ಉತ್ಸವಗಳಿಗೆ ಟ್ಯಾಬ್ಲೋ ಸಿದ್ಧ ಪಡಿಸಲಾಗುತ್ತದೆ’ ಎನ್ನುತ್ತಾರೆ.ಆವೆಮಣ್ಣು, ಬೈ ಹುಲ್ಲು, ಉಮಿ (ಭತ್ತದ ಸಿಪ್ಪೆ) ಮಿಶ್ರಣ ಮಾಡಿ ವಿಗ್ರಹ ತಯಾರಿಸಲಾಗುತ್ತದೆ. ಅನಂತರ ಅದರ ಮೇಲೆ ಚಿತ್ರದ ರೂಪ ಮಾಡಲಾಗುತ್ತದೆ.
ಪೈಬರ್ ಅಚ್ಚಿನಿಂದ ಇತರ ಪೂರಕ ಚಿತ್ರಗಳನ್ನು ಮಾಡಲಾಗುತ್ತದೆ. ಬಳಿಕ ವಿಗ್ರಹದ ಚಲನೆಗೆ ಬೇಕಾದ ಕಬ್ಬಿಣದ ಕೆಲಸ ಮಾಡಲಾಗುತ್ತದೆ. ಇವುಗಳಿಗೆ ಬಣ್ಣ ಬಳಿಯುವುದರಿಂದ ಹಾಗೂ ಆಭರಣಗಳನ್ನು ತೊಡಿಸುವುದರಿಂದ ನೈಜತೆ ಕಂಡಕೊಳ್ಳಲಾಗುತ್ತದೆ ಎನ್ನುತ್ತಾರೆ ಅವರು.
ಸ್ತಬ್ಧಚಿತ್ರ ರಚಿಸಲು ಮರದ ತುಂಡು, ಕಬ್ಬಿಣದ ಪರಿಕರ ಬಳಕೆ ಮಾಡಲಾಗುತ್ತದೆ. ಆವೆ ಮಣ್ಣಿನ ಕೆಲಸದ ಉಪಯೋಗಕ್ಕೆ ಮರದ ಉಪಕರಣ ಬಳಸಲಾಗುತ್ತದೆ. ವೆಲ್ಡಿಂಗ್ ಮಿಷನ್, ಕಟ್ಟಿಂಗ್ ಮಿಷನ್, ಕಂಪ್ರೈಸರ್, ಸೋಲ್ಡರಿಂಗ್ ಮಿಷನ್ ಮುಂತಾದ ಉಪಕರಣ ಅತೀ ಅಗತ್ಯ. ಪ್ರದರ್ಶನಕ್ಕೆ ಅನುಕೂಲವಾಗುವ ವಾಹನವೂ ಅಗತ್ಯ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಮಧುಗಿರಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ನೇಣಿಗೆ ಶರಣು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…