ಮುಂಜಾಗೃತಾ ಕ್ರಮ ಕೈಗೊಳ್ಳಿ: ಶಾಸಕ

ಮೂಡುಬಿದಿರೆ ಪುರಸಭೆ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ಸಭೆ

Team Udayavani, May 12, 2020, 5:02 AM IST

ಮುಂಜಾಗೃತಾ ಕ್ರಮ ಕೈಗೊಳ್ಳಿ: ಶಾಸಕ

ಮೂಡುಬಿದಿರೆ: ಮಳೆಗಾಲ ಪ್ರಾರಂಭವಾಗುವ ಮೊದಲೇ ಮಲೇರಿಯಾ, ಡೆಂಗ್ಯೂ ಮೊದಲಾದ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಸೂಚಿಸಿದರು.

ಪುರಸಭೆ ಕಾರ್ಯಾಲಯದಲ್ಲಿ ಸೋಮ ವಾರ ಅಧಿಕಾರಿಗಳು, ಚುನಾಯಿತ ಸದಸ್ಯರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸದಸ್ಯರು ತಂತಮ್ಮ ವಾರ್ಡ್‌ಗಳಲ್ಲಿ ಚರಂಡಿಗಳ ಹೂಳೆತ್ತುವ, ನೀರು ನಿಂತು ಸೊಳ್ಳೆ ಉತ್ಪಾದನೆಯಾಗುವ ಕಟ್ಟಡಗಳ ತಾರಸಿ ಮತ್ತಿತರ ಜಾಗಗಳನ್ನು ಗುರುತಿಸಿ ಪುರಸಭೆಗೆ ಕೂಡಲೇ ವರದಿ ಮಾಡಬೇಕು ಎಂದರು.

ಮುಖ್ಯಾಧಿಕಾರಿ ಇಂದು ಎಂ. ಕೋವಿಡ್‌-19 ಕುರಿತು ಕೈಗೊಳ್ಳಲಾದ ಮುಂಜಾಗೃತಾ ಕ್ರಮಗಳ ಬಗ್ಗೆ ವಿವರಣೆ ನೀಡಿದರು. ಪುರಸಭಾ ಪರಿಸರ ಅಭಿಯಂತರೆ ಶಿಲ್ಪಾ ಎಸ್‌. ಮಾತನಾಡಿ, ಅನೇಕ ಕಟ್ಟಡ ಕಾಮಗಾರಿ ಅರ್ಧದಲ್ಲೇ ನಿಂತಿದ್ದು ಇಲ್ಲೆಲ್ಲ ಸೊಳ್ಳೆ ಉತ್ಪತ್ತಿ ಆಗುವ ಸಾಧ್ಯತೆ ಇದೆ. ಇವುಗಳನ್ನೆಲ್ಲ ಸ್ವಚ್ಛಗೊಳಿಸಲಾಗುವುದು ಎಂದರು.

ಗುತ್ತಿಗೆದಾರರ ಹಿಂದೇಟು
ಒಂದು ಲಕ್ಷ ರೂ. ಕಾಮಗಾರಿಗೆ ಟೆಂಡರ್‌ ಸಲ್ಲಿಸಲು ರೂ. ಐದು ಸಾವಿರ ಕಡ್ಡಾಯವಾಗಿ ಠೇವಣಿ ಇಡಬೇಕಾಗಿದ್ದು, ಅದನ್ನು ವಾಪಸ್‌ ಪಡೆಯಲು 2-3 ವರ್ಷಗಳೇ ಕಳೆಯುವು ದರಿಂದ ಗುತ್ತಿಗೆದಾರರು ಹಿಂದೇಟು ಹಾಕು ತ್ತಿದ್ದಾರೆ ಎಂದು ಸದಸ್ಯ ಸುರೇಶ್‌ ಹೇಳಿದರು.

ಮೆಸ್ಕಾಂನವರು ಒಮ್ಮೆಲೇ ಎರಡು ತಿಂಗಳ ಬಿಲ್‌ ಕೊಡುವಾಗ ಸ್ಲ್ಯಾಬ್ ‌ಗಳ ಲೆಕ್ಕದಲ್ಲಿ ಬಳಕೆ ದಾರರಿಗೆ ದುಪ್ಪಟ್ಟು ಬಿಲ್‌ ಬರು ವಂತಾಗಿದೆ. ಇದರ ಬದಲು ಪ್ರತಿ ತಿಂಗಳ ಬಿಲ್‌ ತಯಾರಿಸಿ ಪ್ರತ್ಯೇಕವಾಗಿ ನೀಡು ವುದೇ ಸೂಕ್ತ ಎಂದು ಸದಸ್ಯ ಪ್ರಸಾದ್‌ ಕುಮಾರ್‌ ಹೇಳಿದಾಗ, ಮೆಸ್ಕಾಂನ ಗಮನ ಸೆಳೆದು ಗ್ರಾಹಕರಿಗೆ ತೊಂದರೆ ಯಾಗದಂತೆ ನೋಡಿಕೊಳ್ಳ ಲಾಗುವುದು ಎಂದು ಶಾಸಕರು ಹೇಳಿದರು.

ಅಲಂಗಾರು ಕಡಲಕೆರೆ ಕೈಗಾರಿಕಾ ಪ್ರಾಂಗಣದಲ್ಲಿ ಚರಂಡಿಗಳಲ್ಲೆ ಕೊಳಚೆ ನೀರು ನಿಲ್ಲುವಂತಾಗಿದೆ. ಈ ಬಗ್ಗೆ ಕ್ರಮ ಜರಗಿಸ ಬೇಕಾಗಿದೆ ಎಂದು ಸದಸ್ಯ ನಾಗರಾಜ್‌ ಪೂಜಾರಿ ಒತ್ತಾಯಿಸಿದರು. ಕೂಡಲೇ ಸ್ಥಳ ಪರಿಶೀಲಿಸಿ ಎಂದು ಶಾಸಕರು ಸೂಚಿಸಿದರು.

ಕಾರ್ಡ್‌ ಇಲ್ಲದವರಿಗೂ ಪಡಿತರ
ಕಾರ್ಡ್‌ ಇಲ್ಲದವರಿಗೆ ಪಡಿತರ ನೀಡುವ ಬಗ್ಗೆ ಜೊಸ್ಸಿ ಮಿನೇಜಸ್‌, ಪಿ.ಕೆ. ಥಾಮಸ್‌ ಶಾಸಕರಲ್ಲಿ ವಿನಂತಿಸಿದಾಗ, ಕಾರ್ಡ್‌ಗಾಗಿ ಅರ್ಜಿ ಸಲ್ಲಿಕೆಯಾದ ರುಜುವಾತು ಇದ್ದವರಿಗೆ ಪಡಿತರ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.

ಅನಿವಾರ್ಯ ಸಭೆ
ಚುನಾವಣೆ ನಡೆದು ವರ್ಷವಾಗುತ್ತ (ಮೇ 27)ಬಂದರೂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ಸದಸ್ಯರ ಪ್ರಮಾಣವಚನ ಸ್ವೀಕಾರ ಯಾವುದೂ ನಡೆದಿಲ್ಲ. ಹಾಗಿದ್ದರೂ ಅನಿವಾರ್ಯವಾಗಿ ಈ ಸಭೆಯನ್ನು ನಡೆಸಲಾಗಿದ್ದು ಎಲ್ಲ ಚುನಾಯಿತ ಸದಸ್ಯರೂ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.