ಮಂಗಳೂರು: ಫಳ್ನೀರ್ ಬಳಿ ಯುವಕನ ಮೇಲೆ ತಲವಾರು ದಾಳಿ
Team Udayavani, Nov 24, 2020, 8:35 AM IST
ಮಂಗಳೂರು: ನಗರದ ಫಳ್ನೀರ್ ನ ಯುನಿಟಿ ಆಸ್ಪತ್ರೆ ಬಳಿ ಯುವಕನ ಮೇಲೆ ತಂಡವೊಂದು ಸೋಮವಾರ ತಡರಾತ್ರಿ ತಲವಾರಿನಿಂದ ದಾಳಿ ಮಾಡಿದ ಘಟನೆ ನಡೆದಿದೆ.
ನೌಶಾದ್ (30) ಎಂಬ ಯುವಕನ ಮೇಲೆ ತಲವಾರು ದಾಳಿ ಮಾಡಲಾಗಿದೆ. ನೌಶಾದ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನೌಶಾದ್ ಅವರು ಇತ್ತೀಚೆಗೆ ಕಂದಾವರದಲ್ಲಿ ಮಸೀದಿ ಆಡಳಿತ ವಿಚಾರವಾಗಿ ಹಲ್ಲೆಗೊಳಗಾಗಿದ್ದ ಅಬ್ದುಲ್ ಅಜೀಜ್ ಅವರ ಅಳಿಯರಾಗಿದ್ದಾರೆ. ಕಾರಿನಲ್ಲಿ ಬಂದ ಗುಂಪು ನೌಶಾದ್ ಮೇಲೆ ತಲವಾರಿನಿಂದ ದಾಳಿ ನಡೆಸಿದ್ದು, ನೌಶಾದ್ ಎದೆಭಾಗಕ್ಕೆ ಗಾಯವಾಗಿದೆ.
ಇದನ್ನೂ ಓದಿ:ಕೆಎಎಸ್ ಅಧಿಕಾರಿ ಸುಧಾಗೆ ಮತ್ತೆ ಎಸಿಬಿ ಶಾಕ್! ಬೆಂಗಳೂರಿನ 9 ಕಡೆ ಎಸಿಬಿ ದಾಳಿ
ನವೆಂಬರ್ 15ರಂದು ರಾತ್ರಿ ಮಸೀದಿಯಲ್ಲಿ ನಮಾಜ್ ಮುಗಿಸಿ ಮನೆಗೆ ತೆರಳುವ ಸಂದರ್ಭದಲ್ಲಿ ಅಬ್ದುಲ್ ಅಜೀಜ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿತ್ತು. ಇಬ್ಬರು ಯುವಕರು ಇದ್ದಕ್ಕಿದ್ದಂತೆ ತಲವಾರಿನಿಂದ ಹಲ್ಲೆ ನಡೆಸಿದ್ದರು. ಅಬ್ದುಲ್ ಅವರ ತಲೆ, ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು, ಆರೋಪಿಗಳು ಪರಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ