ಬಜಪೆ ಕಂದಾವರದಲ್ಲಿ ಟೆಕ್ಸ್ ಟೈಲ್ ಉದ್ಯಮಿಯ ಮೇಲೆ ತಲವಾರು ದಾಳಿ
Team Udayavani, Nov 16, 2020, 1:29 PM IST
ಬಜಪೆ: ಟೆಕ್ಸ್ ಟೈಲ್ ಉದ್ಯಮಿಯೋರ್ವರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರಲ್ಲಿ ರವಿವಾರ ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಕಂದಾವರ ಕೈಕಂಬ ನಿವಾಸಿ ಅಬ್ದುಲ್ ಅಜೀಜ್ (58) ಎಂದು ಗುರುತಿಸಲಾಗಿದೆ. ಇವರು ರವಿವಾರ ರಾತ್ರಿ ನಮಾಜ್ ಮುಗಿಸಿ ಮನೆಗೆ ತೆರಳುವ ಸಂದರ್ಭ ದಾಳಿ ಮಾಡಲಾಗಿದೆ.
ರಾತ್ರಿ 10.30 ರ ಸುಮಾರಿಗೆ ಅಬ್ದುಲ್ ಅಜೀಜ್ ನಮಾಜ್ ಮುಗಿಸಿ ಕಾರಿನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಯುವಕರು ಇದ್ದಕ್ಕಿದ್ದಂತೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಅಬ್ದುಲ್ ಅವರ ತಲೆ, ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
ಇದನ್ನೂ ಓದಿ:8 ತಿಂಗಳ ಬಳಿಕ ಮಂಗಳೂರು-ಕಾಸರಗೋಡು ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭ
ಗಾಯಗೊಂಡ ಅಬ್ದುಲ್ ಅಜೀಜ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಬಜಪೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ